ಆ್ಯಪ್ನಗರ

ಅಪ್ರಾಪ್ತ ಬಾಲಕಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ..! ಕರ್ನಾಟಕದಲ್ಲೇ ನಡೆದ ಹೇಯ ಕೃತ್ಯ..!

ಅಪ್ರಾಪ್ತ ಬಾಲಕಿಯು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಆರೋಪಿಗಳು ಆಕೆಯನ್ನು ಅಪಹರಿಸಿ ಗ್ರಾಮದಲ್ಲೇ ಇದ್ದ ಹಳೆ ಮನೆಯಲ್ಲಿ ಕೂಡಿ ಹಾಕಿ ಅತ್ಯಾಚಾರವೆಸಗಿದ್ದಾರೆ. ರಾತ್ರಿಯೆಲ್ಲಾ ಪ್ರಜ್ಞೆ ತಪ್ಪಿ ಬಿದ್ದಿದ್ದು ಬೆಳಗಿನ ಜಾವ ಎಚ್ಚರವಾದ ನಂತರ ಮನೆಗೆ ಬಂದಿದ್ದಾಳೆ. ತೀವ್ರ ರಕ್ತಸ್ರಾವ ಮತ್ತು ನೋವಿನಿಂದ ಒದ್ದಾಡುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿ ಚೇತರಿಸಿಕೊಂಡ ನಂತರ ಆಕೆ ನಡೆದ ಘಟನೆ ವಿವರಿಸಿದ್ದಾಳೆ.

Vijaya Karnataka Web 18 Nov 2020, 7:52 am
ಕೋಲಾರ: ಹದಿಮೂರು ವರ್ಷದ ಬಾಲಕಿಯನ್ನು ನಾಲ್ವರು ಯುವಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೇತ ಮಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Vijaya Karnataka Web rape
Image used for representational purpose only


ಬೇತಮಂಗಲ ಪೊಲೀಸ್‌ ಠಾಣಾ ವ್ಯಾಪ್ತಿಯ ಹಂಗಳ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಂಗಳ ಗ್ರಾಮದ 13 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿದ್ದು, ಅದೇ ಗ್ರಾಮದ ಹರೀಶ್‌ (28), ರಘು (23) ಸುಹೇಲ್‌ (19) ಹಾಗೂ ಜಗದೀಶ್‌ (18) ಅತ್ಯಾಚಾರವೆಸಗಿರುವ ಕಾಮುಕರಾಗಿದ್ದಾರೆ.

ಸಿಗಂದೂರು ದೇವಳದ ವಿಚಾರದಲ್ಲಿ ಸರಕಾರದ ಹಸ್ತಕ್ಷೇಪವಿಲ್ಲ; ಕೋಟ ಶ್ರೀನಿವಾಸ ಪೂಜಾರಿ

ಭಾನುವಾರ ರಾತ್ರಿ ಅಪ್ರಾಪ್ತ ಬಾಲಕಿಯು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಆರೋಪಿಗಳು ಆಕೆಯನ್ನು ಅಪಹರಿಸಿ ಗ್ರಾಮದಲ್ಲೇ ಇದ್ದ ಹಳೆ ಮನೆಯಲ್ಲಿ ಕೂಡಿ ಹಾಕಿ ಅತ್ಯಾಚಾರವೆಸಗಿದ್ದಾರೆ. ರಾತ್ರಿಯೆಲ್ಲಾ ಪ್ರಜ್ಞೆ ತಪ್ಪಿ ಬಿದ್ದಿದ್ದು ಬೆಳಗಿನ ಜಾವ ಎಚ್ಚರವಾದ ನಂತರ ಮನೆಗೆ ಬಂದಿದ್ದಾಳೆ. ತೀವ್ರ ರಕ್ತಸ್ರಾವ ಮತ್ತು ನೋವಿನಿಂದ ಒದ್ದಾಡುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿ ಚೇತರಿಸಿಕೊಂಡ ನಂತರ ನಡೆದ ಘಟನೆ ಬಗ್ಗೆ ತಿಳಿಸಿದ್ದಾಳೆಂದು ಬಾಲಕಿ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.

ಹಲವು ದೂರುಗಳ ಕಾರಣಕ್ಕೆ ಆರೋಪಿಗೆ ಜಾಮೀನು ನಿರಾಕರಣೆ ಸಲ್ಲದು; ಹೈಕೋರ್ಟ್

ತಕ್ಷಣ ಪಿಎಸ್‌ಐ ನವೀನ್‌ ಪ್ರಕರಣ ದಾಖಲಿಸಿಕೊಂಡು, ಕಾರ್ಯತಂತ್ರ ರೂಪಿಸಿ ನಾಲ್ಕೂ ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳು ಮತ್ತು ಸಂತ್ರಸ್ತೆಯನ್ನು ಕೆಜಿಎಫ್‌ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ