ಆ್ಯಪ್ನಗರ

ಎಚ್.ಎನ್. ವ್ಯಾಲಿ ಮೊದಲ ಪಂಪ್ ಆರಂಭ: ಬಾಗಲೂರು ಕೆರೆಗೆ ನೀರು

ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮೂರು ಶುದ್ಧೀಕರಣ ಘಟಕಗಳಿಂದ ನೀರು ಶೇಖರಿಸಿ ಬರಪೀಡಿತ ಜಿಲ್ಲೆಗಳ ಕೆರೆಗಳನ್ನು ತುಂಬಿಸಿ ಅಂತರ್ಜಲವೃದ್ಧಿಗೆ ಒತ್ತು ನೀಡಲಾಗುತ್ತಿದೆ.

Vijaya Karnataka Web 14 Jul 2019, 7:25 pm
ಬೆಂಗಳೂರು: ಬರಪೀಡಿತ ಕೋಲಾರ ಜಿಲ್ಲೆಯ ಅಂತರ್ಜಲ ಅಭಿವೃದ್ಧಿಗೆ ಈಗ ಒತ್ತು ನೀಡಲಾಗುತ್ತಿದೆ.
Vijaya Karnataka Web ಎಚ್‌ಎನ್‌ ವ್ಯಾಲಿ
ಎಚ್‌ಎನ್‌ ವ್ಯಾಲಿ


ಈ ಜಿಲ್ಲೆಗಳ ಅಂತರ್ಜಲವೃದ್ಧಿಗಾಗಿ ಜಾರಿ ಮಾಡಲಾದ ಯೋಜನೆಗಳ ಪೈಕಿ ಕೆ.ಸಿ. ವ್ಯಾಲಿ ಯೋಜನೆ ಕೂಡ ಒಂದಾಗಿದೆ. ಇದೀಗ ಯಶಸ್ವಿಯಾಗಿದೆ.

ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಕೂಡ ಜೋರಾಗಿ ಸಾಗಿದೆ. ಎಚ್.ಎನ್. ವ್ಯಾಲಿ ಕಾಮಗಾರಿ ಕೂಡ ಚುರುಕು ಪಡೆದುಕೊಂಡಿದೆ.

ಇದರ ಪರಿಣಾಮ ಮೊದಲ ಮೋಟಾರ್ ಪ್ರಾಯೋಗಿಕವಾಗಿ ಕಾರ್ಯಾರಂಭಿಸಿದೆ.

ಬೆಂಗಳೂರಿನ ಸಂಸ್ಕರಿತ ನೀರನ್ನು ಬಳಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆಯಡಿ 65 ಕೆರೆಗಳಿಗೆ ನೀರು ಹರಿಸಲಾಗುತ್ತಿದೆ.

ಯೋಜನೆಯ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಕೈಗೊಳ್ಳಳಾಗುತ್ತಿದ್ದು, ಹೆಣ್ಣೂರಿನಲ್ಲಿ ಸುಸಜ್ಜಿತ ಪಂಪ್‍ಹೌಸ್ ನಿರ್ಮಾಣ ಮಾಡಲಾಗಿದೆ. ಸಣ್ಣ ನೀರಾವರಿ ಇಲಾಖೆ ಉನ್ನತಾಧಿಕಾರಿಗಳು ಪಂಪ್‍ಗೆ ಪ್ರಾಯೋಗಿಕವಾಗಿ ಚಾಲನೆ ನೀಡಿದರು.

ಬೆಂಗಳೂರಿನ ಮೂರು ಶುದ್ಧಿಕರಣ ಘಟಕಗಳಿಂದ ಒಟ್ಟಾರೆ 210 ಎಂ.ಎಲ್.ಡಿ. ನೀರು ದೊರಕಲಿದ್ದು, ಈ ಪೈಕಿ ಈಗ ಚಾಲನೆ ನೀಡಲಾದ 750 ಕಿ.ವ್ಯಾ. ಮೋಟಾರ್‌ನಿಂದ 40 ಎಂ.ಎಲ್.ಡಿ ನೀರನ್ನು ಹರಿಸಲಾಗುವುದು.

ಹೆಣ್ಣೂರು ನೀರು ಶುದ್ಧೀಕರಣ ಘಟಕದಿಂದ ಬಾಗಲೂರು ಕೆರೆಗೆ ಅಂದರೆ 12 ಕಿ.ಮೀ.ನಷ್ಟು ದೂರ 1660 ಎಂ.ಎಂ. ವ್ಯಾಸದ ಎಂ.ಎಸ್. ಪೈಪ್‍ನಲ್ಲಿ ನೀರು ಹರಿಯಲಿದೆ.
ಶುದ್ಧೀಕರಿಸಿದ ನೀರಿನ ಸಮರ್ಪಕ ಹರಿವಿಗೆ ಅನುಕೂಲವಾಗುವಂತೆ ಹೆಣ್ಣೂರು ಘಟಕದ ಸರ್ಜ್ ವೆಸಲ್ ನಿರ್ಮಿಸಲಾಗಿದೆ.
ಎಚ್.ಎನ್. ವ್ಯಾಲಿ ಯೋಜನೆಯಡಿ 114 ಕಿ.ಮೀ ನೀರನ್ನು ಹರಿಸಬೇಕಿದ್ದು, ಇದಕ್ಕಾಗಿ ಪ್ರತ್ಯೇಕವಾಗಿ ಮೋಟಾರ್‌ಗಳನ್ನು ಅಳವಡಿಸಲಾಗುತ್ತಿದೆ.

ಪ್ರಸ್ತುತ ಮೂರು ಪಂಪ್‍ಹೌಸ್‍ಗಳ ಪೈಕಿ ಒಂದು ಪಂಪ್‍ಹೌಸ್ ಕಾರ್ಯನಿರ್ವಹಣೆ ಆರಂಭವಾಗಿದ್ದು, ಎಚ್.ಎನ್. ವ್ಯಾಲಿ ಯೋಜನೆಯಡಿ ನೀರು ಹರಿಯಲಾರಂಭಿಸಿದೆ ಎಂದು ಎಂಇಐಎಲ್‌ ಅಧ್ಯಕ್ಷ ಸುಧೀರ್‌ ಮೋಹನ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ