ಆ್ಯಪ್ನಗರ

ಕೋಲಾರ ಜೆಡಿಎಸ್‌ ಶಾಸಕ ಶ್ರೀನಿವಾಸ ಗೌಡ ವಿರುದ್ಧ ದಳ ನಾಯಕರು ಗರಂ

ಕೋಲಾರ ಶಾಸಕ ಕೆ ಶ್ರೀನಿವಾಸಗೌಡರು ಜೆಡಿಎಸ್‌ನಿಂದ ಗೆದ್ದು ಇದೀಗ ಕಾಂಗ್ರೆಸ್‌ ಪಕ್ಷದ ಶಾಸಕರ ಪರವಾಗಿ ಮಾತನಾಡುತ್ತಿರುವುದು ಖಂಡನೀಯ ಎಂದಿರುವ ದಳ ನಾಯಕರು, ಕಾಂಗ್ರೆಸ್‌ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸವಾಲೆಸೆದಿದ್ದಾರೆ.

Vijaya Karnataka 5 Aug 2021, 7:15 pm

ಹೈಲೈಟ್ಸ್‌:

  • ಕೋಲಾರ ಶಾಸಕ ಕೆ ಶ್ರೀನಿವಾಸಗೌಡರಿಗೆ ಜೆಡಿಎಸ್‌ ಮುಖಂಡ ಸಂತೋಷ್‌ ಸವಾಲು
  • ಕಾಂಗ್ರೆಸ್‌ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸವಾಲು
  • ಜೆಡಿಎಸ್‌ ಪಕ್ಷದಿಂದ ಆಯ್ಕೆಯಾಗಿ ಇದೀಗ ಕಾಂಗ್ರೆಸ್‌ ಪಕ್ಷದ ಶಾಸಕರ ಪರವಾಗಿ ಮಾತನಾಡುತ್ತಿರುವುದು ಖಂಡನೀಯ ಎಂದ ದಳ ನಾಯಕರು




ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web K Srinivasa Gowda
ಕೋಲಾರ: ಕೋಲಾರ ಶಾಸಕ ಕೆ ಶ್ರೀನಿವಾಸಗೌಡರು ಜೆಡಿಎಸ್‌ ಪಕ್ಷದಿಂದ ಆಯ್ಕೆಯಾಗಿ ಇದೀಗ ಕಾಂಗ್ರೆಸ್‌ ಪಕ್ಷದ ಶಾಸಕರ ಪರವಾಗಿ ಮಾತನಾಡುತ್ತಿರುವುದು ಖಂಡನೀಯ. ಕಾಂಗ್ರೆಸ್‌ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯ ಕಾರ್ಯದರ್ಶಿ ಸಂತೋಷ್‌ರೆಡ್ಡಿ ಸವಾಲು ಹಾಕಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಕೋಲಾರ ತಾಲೂಕಿನ ಹೋಳುರು ಜಿಪಂ ಕ್ಷೇತ್ರದಿಂದ ಮಗನನ್ನು ನಿಲ್ಲಿಸಲು ಕಾಂಗ್ರೆಸ್‌ ಪರವಾಗಿ ಮಾತನಾಡುತ್ತಿರುವ ಶಾಸಕರು, "ತಮ್ಮ ಪಕ್ಷದ ಕಾರ್ಯಕರ್ತರು ತಪ್ಪು ಮಾಡಿದರೆ ತಿಳಿಹೇಳುವ ಸ್ಥಾನದಲ್ಲಿರುವುದನ್ನು ಮರೆತಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಅನ್ಯಾಯ ಮಾಡಬೇಡಿ, ರಾಜಕೀಯವಾಗಿ ಬೆಳೆಯಬೇಕೆಂದಿದ್ದರೆ ಎಲ್ಲಿ ಬೇಕಾದರೂ ಹೋಗಿ," ಎಂದು ಹೇಳಿದರು.

ಶ್ರೀನಿವಾಸಪುರ ಶಾಸಕ ಕೆಆರ್‌ ರಮೇಶ್‌ಕುಮಾರ್‌ ಸ್ಪೀಕರ್‌ ಆಗಿದ್ದಾಗ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು 16 ಶಾಸಕರನ್ನು ಸಸ್ಪೆಂಡ್‌ ಮಾಡಿದ್ದರು. ಆದರೆ ಇಂದು ಪಕ್ಷಕ್ಕೆ ದ್ರೋಹ ಮಾಡುತ್ತಿರುವ ಶ್ರೀನಿವಾಸಗೌಡರನ್ನು ಜತೆಗೆ ಇಟ್ಟುಕೊಂಡಿದ್ದಾರೆ. ಇದು ಯಾವ ಸಿದ್ಧಾಂತ ಎಂದು ಪ್ರಶ್ನಿಸಿದ ಅವರು, ಹೋಳೂರು ಗ್ರಾಪಂ., ತಾಪಂ ಹಾಗೂ ಜಿಪಂ ಕ್ಷೇತ್ರದಲ್ಲಿ ಜೆಡಿಎಸ್‌ ಪ್ರಾಬಲ್ಯ ಇರುವುದು. ಹೀಗಾಗಿ ಸೋಲಿನ ಭೀತಿಯಿಂದ ರಮೇಶ್‌ ಕುಮಾರ್‌ ಅವರು ಶ್ರೀನಿವಾಸಗೌಡರನ್ನು ಜತೆಗೆ ಹಾಕಿಕೊಂಡು ಓಡಾಡುತ್ತಿದ್ದಾರೆ ಎಂದು ಟೀಕಿಸಿದರು.


ಶ್ರೀನಿವಾಸಗೌಡರಿಗೆ ಹೋಳೂರು ಕ್ಷೇತ್ರವು ತವರು ಆಗಿದ್ದರೂ, ಜೆಡಿಎಸ್‌ ಉತ್ತಮವಾಗಿದೆ. ಹೀಗಾಗಿ ಕಾಂಗ್ರೆಸ್‌ಗೆ ಹೋದರೂ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವಿ ಶಿವಾರೆಡ್ಡಿ ಮಾತನಾಡಿ, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ. ಆರ್‌. ರಮೇಶ್‌ಕುಮಾರ್‌ ಪರ ಹೇಳಿಕೆ ನೀಡುವ ಮೂಲಕ ಶಾಸಕ ಕೆ. ಶ್ರೀನಿವಾಸಗೌಡ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಶ್ರೀನಿವಾಸಗೌಡ ಅವರನ್ನು ಕೋಲಾರ ಕ್ಷೇತ್ರದ ಮತದಾರರು 40,000 ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಶ್ರೀನಿವಾಸಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕ ರಮೇಶ್‌ ಕುಮಾರ್‌ ಅವರನ್ನು ಗೆಲ್ಲಿಸಿ ಎಂದು ಕರೆ ನೀಡುವ ಮೂಲಕ ಪಕ್ಷ ದ್ರೋಹ ಎಸಗಿದ್ದಾರೆ ಎಂದು ಆಪಾದಿಸಿದರು.

ಶ್ರೀನಿವಾಸಗೌಡ ಜಿಲ್ಲೆಯಲ್ಲಿ ಜೆಡಿಎಸ್‌ನ ಏಕೈಕ ಶಾಸಕ. ಇಷ್ಟು ವರ್ಷ ಜೆಡಿಎಸ್‌ನಲ್ಲಿ ಇದ್ದು ಅಧಿಕಾರ ಅನುಭವಿಸಿದ್ದಾರೆ. ಅವರ ಬಗ್ಗೆ ಗೌರವ ಇದೆ. ಆದರೆ ರಮೇಶ್‌ ಕುಮಾರ್‌ ಅವರನ್ನು ಗೆಲ್ಲಿಸಿ ಎಂದು ಹೇಳಿರುವುದನ್ನು ಪಕ್ಷ ಬಲವಾಗಿ ಖಂಡಿಸುತ್ತದೆ. ರಮೇಶ್‌ ಕುಮಾರ್‌ ಪರ ಪ್ರೀತಿ ಇದ್ದರೆ ಜೆಡಿಎಸ್‌ ಪಕ್ಷಕ್ಕೆ ರಾಜೀನಾಮೆ ನೀಡಿ ಅವರ ಪರ ಪ್ರಚಾರ ಮಾಡಲಿ. ಕಾರ್ಯಕರ್ತರು ಶ್ರಮವಹಿಸಿ ಗೆಲ್ಲಿಸಿರುವ ಸಂದರ್ಭದಲ್ಲಿ ಮೋಸ, ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿದರು.

ಶ್ರೀನಿವಾಸಗೌಡರು ತಮ್ಮ ಗೆಲುವಿಗೆ ರಮೇಶ್‌ಕುಮಾರ್‌ ಕಾರಣ ಎನ್ನುತ್ತಾ ಜೆಡಿಎಸ್‌ ಕಾರ್ಯಕರ್ತರ ಶ್ರಮವನ್ನು ಪಾತಾಳಕ್ಕೆ ತುಳಿದಿದ್ದಾರೆ. ಶ್ರೀನಿವಾಸಗೌಡ ನಡೆಯ ಬಗ್ಗೆ ಪಕ್ಷದ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ದೆಹಲಿಯಲ್ಲಿದ್ದಾರೆ. ವಾಪಸ್‌ ಆದ ನಂತರ ಚರ್ಚೆ ಮಾಡಿ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶಿವಾರೆಡ್ಡಿ, ಗೋಪಾಲಗೌಡ, ಮನೋಹರ್‌ ಹಾಜರಿದ್ದರು.


ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಈಗ ಏನೂ ಮಾತನಾಡುವುದಿಲ್ಲ. ಯಾವುದಕ್ಕೂ ಪ್ರತಿಕ್ರಿಯೆ ನೀಡುವುದಿಲ್ಲ. ಸಮಯ ಬಂದಾಗ ಉತ್ತರಿಸುತ್ತೇನೆ.

-ಕೆ.ಶ್ರೀನಿವಾಸಗೌಡ, ಕೋಲಾರ ಶಾಸಕ.

ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಈಗ ಏನೂ ಮಾತನಾಡುವುದಿಲ್ಲ. ಯಾವುದಕ್ಕೂ ಪ್ರತಿಕ್ರಿಯೆ ನೀಡುವುದಿಲ್ಲ. ಸಮಯ ಬಂದಾಗ ಉತ್ತರಿಸುತ್ತೇನೆ.
ಕೆ. ಶ್ರೀನಿವಾಸಗೌಡ, ಕೋಲಾರ ಶಾಸಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ