ಆ್ಯಪ್ನಗರ

ತೋಟದ ಮೇಲೆ ಪೊಲೀಸರ ದಾಳಿ: ಅಕ್ರಮ ಗಾಂಜಾ ಬೆಳೆ ವಶ

ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ತೋಟದ ಮೇಲೆ ಬೆಳಂಬೆಳಗ್ಗೆ ದಾಳಿ ನಡೆಸಿದ ಉಪ ವರಿಷ್ಠಾಧಿಕಾರಿ ಶ್ರೀನಿವಾಸ್‌ಮೂರ್ತಿ ನೇತೃವದಲ್ಲಿ ಪೊಲೀಸರ ತಂಡ ಬೆಳೆದಿದ್ದ 5 ಗಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

Vijaya Karnataka 28 Jun 2019, 3:02 pm
ಕೆಜಿಎಫ್‌: ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ತೋಟದ ಮೇಲೆ ಬೆಳಂಬೆಳಗ್ಗೆ ದಾಳಿ ನಡೆಸಿದ ಉಪ ವರಿಷ್ಠಾಧಿಕಾರಿ ಶ್ರೀನಿವಾಸ್‌ಮೂರ್ತಿ ನೇತೃವದಲ್ಲಿ ಪೊಲೀಸರ ತಂಡ ಬೆಳೆದಿದ್ದ 5 ಗಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
Vijaya Karnataka Web illegal marijuana crop seized
ತೋಟದ ಮೇಲೆ ಪೊಲೀಸರ ದಾಳಿ: ಅಕ್ರಮ ಗಾಂಜಾ ಬೆಳೆ ವಶ


ಅಂದಾಜು ಒಂದು ಲಕ್ಷ : 5 ಗಾಂಜಾ ಗಿಡಗಳು ಒಂದು ಲಕ್ಷ ರೂಪಾಯಿಗಳ ಬೆಲೆ ಬಾಳುತ್ತವೆ ಎಂದು ಗ್ರಾಮಸ್ಥರ ಮುಂದೆ ಪೊಲೀಸರು ಮಹಜರು ನಡೆಸಿದ್ದಾರೆ. ಗಿಡಗಳ ಪಂಚನಾಮೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಬೆಳಿದಿದ್ದ ರೈತ ಯಾರು: ಬೇತಮಂಗಲ ಪೊಲೀಸ್‌ ಠಾಣೆ ವ್ಯಾಪ್ತಿಗೆ ಒಳಪಡುವ ಕಮ್ಮಸಂದ್ರ ಗ್ರಾಮದ ಸರ್ವೆ ನಂಬರ್‌ 21ರಲ್ಲಿ ಕಮ್ಮಸಂದ್ರ ಗ್ರಾಪಂ ಮಾಜಿ ಸದಸ್ಯ ಪ್ರಸಾದ್‌ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಉಪ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದ ವಿಶೇಷ ಪೊಲೀಸರ ತಂಡ ದಾಳಿ ಮಾಡಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾಗಿರುವ ಪ್ರಸಾದ್‌ ತೋಟದಲ್ಲಿ ಟೊಮೇಟೊ ಹಾಗೂ ಚೆಂಡು ಹೂವು ಬೆಳೆಯುತ್ತಿದ್ದ. ಈ ಬೆಳೆಗಳ ನಡುವೆ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ತಪಾಸಣೆ ನಡೆಸಿದ ಪೊಲೀಸರು ತೋಟದಲ್ಲಿದ್ದ 5 ಗಾಂಜಾ ಗಿಡಗಳನ್ನು ಕಿತ್ತು ವಶಪಡಿಕೊಂಡಿದ್ದಾರೆ.

ನೂತನ ವರಿಷ್ಠಾಧಿಕಾರಿಗಳ ಕಟ್ಟುನಿಟ್ಟಿನ ಆದೇಶ: ನೂತನ ಕೆಜಿಎಫ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಮಹಮದ್‌ ಸುಜೀತಾ ಅವರು ಡ್ರಗ್ಸ್‌ ಎಂಬ ಪಿಡುಗನ್ನು ಸಂರ್ಪೂಣವಾಗಿ ನಿರ್ಮೂಲನೆ ಮಾಡಬೇಕು. ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ ಹಿನ್ನೆಲೆಯಲ್ಲಿ ಎಲ್ಲಾ ಠಾಣಾಧಿಕಾರಿಗಳು ಚುರುಕಿನಿಂದ ಕಾರ್ಯಾಚರಣೆ ನಡೆಸುತ್ತಿದ್ದು ಸಾರ್ವಜನಿಕ ವಲಯದಲ್ಲಿ ವರಿಷ್ಠಾಧಿಕಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ತೋಟದ ಮಾಲೀಕ ಪ್ರಸಾದ್‌ ನಾಪತ್ತೆ: ಗಾಂಜಾ ಬೆಳೆಯುತ್ತಿದ್ದ ತೋಟದ ಮೇಲೆ ಪೊಲೀಸರು ದಾಳಿ ನಡೆಸುತ್ತಿರುವುದನ್ನು ಅರಿತ ಪ್ರಸಾದ್‌ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಈತನ ಮನೆಯ ಬಳಿ ಶೋಧ ನಡೆಸಿದಾಗ ಆರೋಪಿ ತಲೆ ಮರೆಸಿಕೊಂಡಿರುವ ಬಗ್ಗೆ ಪೊಲೀಸ್‌ ಮೂಲಗಳು ತಿಳಿಸಿವೆ. ಅರೋಪಿಯನ್ನು ಶಿಘ್ರವೇ ಬಂಧಿಸುವುದಾಗಿ ಪೊಲೀಸ್‌ ವರಿಷ್ಠಾಧಿಕಾರಿಗಳು ಭರವಸೆ ನಿಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ