ಆ್ಯಪ್ನಗರ

ಜವಾಬ್ದಾರಿ ಅರಿತು ಮುನ್ನಡೆದರೆ ಸಮಾಜದಲ್ಲಿ ಸುಧಾರಣೆ ಸಾಧ್ಯ

ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರಿತು ಮುನ್ನಡೆದಾಗ ಮಾತ್ರ ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸರಕಾರದ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹದೇವನ್‌ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka 22 Jun 2019, 10:07 pm
ಕೋಲಾರ: ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರಿತು ಮುನ್ನಡೆದಾಗ ಮಾತ್ರ ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸರಕಾರದ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹದೇವನ್‌ ಅಭಿಪ್ರಾಯಪಟ್ಟಿದ್ದಾರೆ.
Vijaya Karnataka Web improvement in society can be achieved if the responsibility is realized
ಜವಾಬ್ದಾರಿ ಅರಿತು ಮುನ್ನಡೆದರೆ ಸಮಾಜದಲ್ಲಿ ಸುಧಾರಣೆ ಸಾಧ್ಯ


ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾನವ ಕಳ್ಳ ಸಾಗಣೆ, ಬಾಲ ಕಾರ್ಮಿಕತೆ, ಜೀತ ಪದ್ಧತಿ ವಿರುದ್ಧ ಹೋರಾಟ, ನಿರ್ಮೂಲನೆಗೆ ರಚಿತವಾದ ಮುಕ್ತಿ ಒಕ್ಕೂಟದ ಜಿಲ್ಲಾ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಇಂದು ಹಲವು ಸವಾಲುಗಳಿವೆ. ಅನೇಕ ಸಂಕಷ್ಟ ಎದುರಾಗುತ್ತಿದೆ. ಇದನ್ನು ಎದುರಿಸಬೇಕಾಗಿದೆ ಎಂದು ಹೇಳಿದ ಅವರು, ಮಾನವ ಹಕ್ಕುಗಳು ಉಲ್ಲಂಘನೆಯಾಗಬಾರದು. ಮಾನವ ಹಕ್ಕುಗಳ ಕುರಿತು ಜಾಗೃತಿ ಮಾಡಿಸಬೇಕು ಎಂದರು.

ಮಾನವ ಕಳ್ಳ ಸಾಗಣೆ, ಜೀತ ಪದ್ಧತಿ, ಬಾಲ ಕಾರ್ಮಿಕತೆ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಹಲವು ಸಂಘ ಸಂಸ್ಥೆ ಹೋರಾಟ ಮಾಡುತ್ತಿವೆ. ಸರಕಾರ ಕೂಡ ಕಾನೂನು ತಂದಿದೆ. ಎಷ್ಟೆ ಹೋರಾಟ ಮಾಡಿದರೂ, ಕಾನೂನುಗಳನ್ನು ಜಾರಿಗೊಳಿಸಿದರೂ, ನಿಯಂತ್ರಣಕ್ಕಾಗಿ ಪ್ರತಿಯೊಬ್ಬರು ಕೈ ಜೋಡಿಸಿದಾಗ ಮಾತ್ರ ನಿರ್ಮೂಲನೆ ಸಾಧ್ಯವಾಗಲಿದೆ. ಸಮಾಜದಲ್ಲಿ ಬದಲಾವಣೆ ತರಲು ಎಲ್ಲರ ಸಹಕಾರ ಅವಶ್ಯಕತೆ ಇದೆ ಎಂದು ಹೇಳಿದರು.

ಮಹಿಳೆಯರ ಸುರಕ್ಷತೆ, ಮುಖ್ಯವಾಹಿನಿಗೆ ತರುವುದು ಸಹ ಸಮಾಜದಲ್ಲಿನ ಹಲವು ಸವಾಲುಗಳಲ್ಲಿ ಒಂದಾಗಿದೆ. ಇದು ಒಂದು ಇಲಾಖೆ, ಸಂಸ್ಥೆ ಜವಾಬ್ದಾರಿ ಎಂಬ ಭಾವನೆಯಿಂದ ಹೊರಬಂದು, ಪ್ರತಿಯೊಬ್ಬರು ಸಹಕಾರ ನೀಡಬೇಕು. ಯುವ ಸಮುದಾಯ ಇಂತಹ ವಿಷಯಗಳಲ್ಲಿ ತಮ್ಮ ಜವಾಬ್ದಾರಿಯನ್ನು ಅರಿತು, ಕಾರ್ಯಪ್ರವೃತ್ತವಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಜಿ.ಜಗದೀಶ್‌ ಮಾತನಾಡಿ, ಮಾನವ ಕಳ್ಳ ಸಾಗಣೆ, ಜೀತ ಪದ್ಧತಿ ಸಾಮಾಜಿಕ ಪಿಡುಗು. ಇದನ್ನು ನಿರ್ಮೂಲನೆ ಮಾಡಲು ಆಡಳಿತದೊಂದಿಗೆ ಜನರು ಕೈಜೋಡಿಸಬೇಕು. ಇದಾದಾಗ ಮಾತ್ರ ಇಂತಹ ಪಿಡುಗುಗಳನ್ನು ತೊಡೆದುಹಾಕಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಿವಿಧ ಸಂಘ ಸಂಸ್ಥೆಯ ರಾಜೇಂದ್ರನ್‌, ಬೃಂದಾ ಅಡಿಗ, ಕಾತ್ಯಾಯಿನಿ ಚಾಮರಾಜ್‌, ಸಿಂತ್ಯಾ ಸ್ಟೀಫನ್‌ ಮತ್ತಿತರರು ಭಾಗವಹಿಸಿದ್ದರು.
ನರೇಗಾ ಕಾಮಗಾರಿ ವೀಕ್ಷಣೆ

ನರೇಗಾದಡಿ ಜಿಲ್ಲೆಯ ವಿವಿಧೆಡೆ ಕೈಗೊಂಡಿರುವ ಕಾಮಗಾರಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸರಕಾರದ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹದೇವನ್‌ ವೀಕ್ಷಿಸಿದರು.

ಚಿಟ್ನಹಳ್ಳಿಯಲ್ಲಿ ನಿರ್ಮಿಸಿರುವ ಚೆಕ್‌ಡ್ಯಾಮ್‌, ತೊಟ್ಲಿಯಲ್ಲಿ ನಿರ್ಮಿಸಿರುವ ಕಲ್ಯಾಣಿ, ದಿನ್ನೂರು ಕೆರೆಯಲ್ಲಿ ಹೂಳೆತ್ತುತ್ತಿರುವುದನ್ನು ವೀಕ್ಷಿಸಿ, ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಜಿಪಂ ಸಿಇಒ ಜಿ.ಜಗದೀಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ