ಆ್ಯಪ್ನಗರ

ರೈಲ್ವೆ ಕೋಚ್‌ ಫ್ಯಾಕ್ಟರಿ ಪ್ರಾರಂಭಕ್ಕೆ ಸಿಎಂಗೆ ಕೆಎಚ್‌ ಮನವಿ

ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬೇಟಿ ಮಾಡಿದ ಕೇಂದ್ರದ ಮಾಜಿ ಸಚಿವ ಡಾ.ಕೆ.ಎಚ್‌.ಮುನಿಯಪ್ಪ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ರೈಲ್ವೆ ಕೋಚ್‌ ಫ್ಯಾಕ್ಟರಿ ಪ್ರಾರಂಭ ಮಾಡಲು ಹಣ ಬಿಡುಗಡೆ ಮಾಡುವಂತೆ ಕೋರಿದರು.

Vijaya Karnataka 8 Aug 2019, 2:49 pm
ಕೋಲಾರ: ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬೇಟಿ ಮಾಡಿದ ಕೇಂದ್ರದ ಮಾಜಿ ಸಚಿವ ಡಾ.ಕೆ.ಎಚ್‌.ಮುನಿಯಪ್ಪ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ರೈಲ್ವೆ ಕೋಚ್‌ ಫ್ಯಾಕ್ಟರಿ ಪ್ರಾರಂಭ ಮಾಡಲು ಹಣ ಬಿಡುಗಡೆ ಮಾಡುವಂತೆ ಕೋರಿದರು.
Vijaya Karnataka Web k h mniyappa requests cm to start railway coach factory
ರೈಲ್ವೆ ಕೋಚ್‌ ಫ್ಯಾಕ್ಟರಿ ಪ್ರಾರಂಭಕ್ಕೆ ಸಿಎಂಗೆ ಕೆಎಚ್‌ ಮನವಿ


ಮನವಿ ಸಲ್ಲಿಸಿ ಮಾತನಾಡಿದ ಕೆ.ಎಚ್‌.ಮುನಿಯಪ್ಪ ರೈಲ್ವೆ ಕೋಚ್‌ ಫ್ಯಾಕ್ಟರಿ ಸ್ಥಾಪನೆಗೆ 2013-14ನೇ ಸಾಲಿನಲ್ಲಿ ಕೇಂದ್ರ ಸರಕಾರ ಫ್ಯಾಕ್ಟರಿ ಪ್ರಾರಂಭಿಸಲು ಅನುಮತಿ ನೀಡಿರುತ್ತದೆ. ಆದರೆ ಆ ಸಂದರ್ಭದಲ್ಲಿ ರೈಲ್ವೆ ಇಲಾಖೆ ಸಂಬಂಧಪಟ್ಟ ಹಣವನ್ನು ಬಿಡುಗಡೆ ಮಾಡಿರುವುದಿಲ್ಲ. ಅಂದಿನ ಮುಖ್ಯಮಂತ್ರಿಗ ಸಿದ್ಧರಾಮಯ್ಯ ಕೋಚ್‌ ಫ್ಯಾಕ್ಟರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಅದಾದ ಬಳಿಕ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯ ಸರಕಾರ ಒಪ್ಪಿಗೆ ನೀಡಿ ಕೋಚ್‌ ಫ್ಯಾಕ್ಟರಿ ಪ್ರಾರಂಭಕ್ಕೆ ಕೇಂದ್ರ ರೈಲ್ವೆ ಸಚಿವ ಪಿಯೂಶ್‌ಗೋಯಲ್‌ ಅವರಿಗೆ ಪತ್ರವನ್ನು ಬರೆದು ಫ್ಯಾಕ್ಟರಿಯ ಪ್ರಾಜೆಕ್ಟನ್ನು 2024ರವೆರೆಗೆ ನವೀಕರಣವನ್ನು ಸಹ ಮಾಡಲಾಗಿರುತ್ತದೆ.

ಪಿಯೂಶ್‌ ಗೋಯಲ್‌ ರವರು ಕಾರ್ಯಾಗಾರವನ್ನು ಮಾಡುವ ಮೂಲಕ ಕೋಚ್‌ ಫ್ಯಾಕ್ಟರಿ ಪ್ರಾರಂಭಿಸಲು ಫೆ.23ರಂದು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಸಭೆಯಲ್ಲಿ ಆಶ್ವಾಸನೆಯನ್ನು ನೀಡಿರುತ್ತಾರೆ. ಹಾಗಾಗಿ ತಾವು ಕೂಡಲೇ ಇದಕ್ಕೆ ಆದ್ಯತೆ ನೀಡಿ ಪ್ರಾರಂಭಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ