ಆ್ಯಪ್ನಗರ

ಬಿಜೆಪಿಯ ಕಾರ್ಯಕ್ರಮಕ್ಕೆ ಸಹಕರಿಸದ ಪಿಡಿಒ ಅಮಾನತು!; ಕೋಲಾರ ಸಂಸದನ ವಿರುದ್ಧ ಗಂಭೀರ ಆರೋಪ

ಕಮ್ಮಸಂದ್ರ ಪಿಡಿಒ ಶ್ರೀನಿವಾಸ ರೆಡ್ಡಿ ‘ಇದು ಸರಕಾರಿ ಕಾರ್ಯಕ್ರಮವಲ್ಲ. ಹೀಗಾಗಿ ಸರಕಾರದ ಹಣ ಖರ್ಚು ಮಾಡಲು ಆಗದು’ ಎಂದು ಹೇಳಿದ್ದರು. ಅಲ್ಲದೇ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಒಂದು ಪಕ್ಷಕ್ಕೆ ಸೇರಿದ ಬಾವುಟಗಳನ್ನು ಕಟ್ಟಲಾಗಿತ್ತು. ಹೀಗಾಗಿ ಅಲ್ಲಿಗೆ ಬರಲು ಪಿಡಿಒ ನಿರಾಕರಿಸಿದ್ದರು. ಇದರಿಂದ ಕೆರಳಿದ್ದ ಸಂಸದ ಎಸ್‌ ಮುನಿಸ್ವಾಮಿ ಪಿಡಿಒಗೆ ಕರೆ ಮಾಡಿ ನಿಂದಿಸಿದ್ದರು.

Vijaya Karnataka 30 Nov 2021, 6:51 am
ಕೋಲಾರ / ಕೆಜಿಎಫ್‌: ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಹಕರಿಸಲಿಲ್ಲ ಎನ್ನುವ ಏಕೈಕ ಕಾರಣಕ್ಕೆ ಪಿಡಿಒ ಒಬ್ಬರನ್ನು ಕೋಲಾರ ಸಂಸದ ಎಸ್‌. ಮುನಿಸ್ವಾಮಿ ಅಮಾನತು ಮಾಡಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
Vijaya Karnataka Web S Muniswamy


ಭ್ರಷ್ಟಾಚಾರಕ್ಕೆ ಸಹಕರಿಸಲಿಲ್ಲವೆಂದು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಸಂಸದ ಎಸ್‌. ಮುನಿಸ್ವಾಮಿ ಪಿಡಿಒ ಅಧಿಕಾರಿಯನ್ನು ಅಮಾನತು ಮಾಡಿ ಕ್ರಮ ಕೈಗೊಂಡಿದ್ದಾರೆ. ಇನ್ನೊಂದೆಡೆ ಅಮಾನತು ಹಿಂಪಡೆಯದಿದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಪಿಡಿಒ ಕುಟುಂಬ ಎಚ್ಚರಿಸಿದೆ. ಬಿಜೆಪಿ ಮುಖಂಡರಿಗೆ ಅಗತ್ಯ ನೆರವು ನೀಡುತ್ತಿಲ್ಲವೆಂಬ ಕಾರಣಕ್ಕೆ ಕೆಜಿಎಫ್‌ ತಾಲೂಕಿನ ಕಮ್ಮಸಂದ್ರ ಪಿಡಿಒ ಶ್ರೀನಿವಾಸ ರೆಡ್ಡಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
ಬ್ಲ್ಯಾಕ್‌ಮೇಲ್‌ ಮಾಡುವವರಿಗೆ ಹೆದರಿ ಬಿಜೆಪಿ ಸರ್ಕಾರ ನಡೆಸುತ್ತಿದೆ; ಜಾರಕಿಹೊಳಿಗೆ ಡಿಕೆಶಿ ಟಾಂಗ್‌
ಏನಿದು ಪ್ರಕರಣ?
ನ. 5 ರಂದು ಪ್ರಧಾನಿ ನರೇಂದ್ರ ಮೋದಿಯವರು ಕೇದಾರನಾಥ ಧಾಮದಲ್ಲಿ ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಆ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮವನ್ನು ಕಮ್ಮಸಂದ್ರದ ಕೋಟಿಲಿಂಗೇಶ್ವರ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಅದರ ಖರ್ಚು ವೆಚ್ಚಗಳನ್ನು ನೋಡಿಕೊಳ್ಳುವಂತೆ ಪಿಡಿಒಗೆ ಗ್ರಾಪಂ ಅಧ್ಯಕ್ಷರು ಹೇಳಿದ್ದರು.

ಇದಕ್ಕೆ ನಿರಾಕರಿಸಿದ್ದ ಕಮ್ಮಸಂದ್ರ ಪಿಡಿಒ ಶ್ರೀನಿವಾಸ ರೆಡ್ಡಿ ‘ಇದು ಸರಕಾರಿ ಕಾರ್ಯಕ್ರಮವಲ್ಲ. ಹೀಗಾಗಿ ಸರಕಾರದ ಹಣ ಖರ್ಚು ಮಾಡಲು ಆಗದು’ ಎಂದು ಹೇಳಿದ್ದರು. ಅಲ್ಲದೇ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಒಂದು ಪಕ್ಷಕ್ಕೆ ಸೇರಿದ ಬಾವುಟಗಳನ್ನು ಕಟ್ಟಲಾಗಿತ್ತು. ಹೀಗಾಗಿ ಅಲ್ಲಿಗೆ ಬರಲು ಪಿಡಿಒ ನಿರಾಕರಿಸಿದ್ದರು. ಇದರಿಂದ ಕೆರಳಿದ್ದ ಸಂಸದ ಎಸ್‌ ಮುನಿಸ್ವಾಮಿ ಪಿಡಿಒಗೆ ಕರೆ ಮಾಡಿ ನಿಂದಿಸಿದ್ದರು. ಏಕವಚನದಲ್ಲಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೊ ವೈರಲ್‌ ಆಗಿದೆ. ಇಡೀ ಜಿಲ್ಲೆಯನ್ನು ಪ್ರತಿನಿಧಿಸುವ ಸಂಸದನೊಬ್ಬ ಪಂಚಾಯತ್ ಅಧಿಕಾರಿಗೆ ಈ ರೀತಿ ಅವಾಚ್ಯವಾಗಿ ಬೈದು ನಾಲಿಗೆ ಹರಿಬಿಟ್ಟಿರುವ ಬಗ್ಗೆ ಸಾರ್ವಜನಿಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ