ಆ್ಯಪ್ನಗರ

ಕೆಸಿ ವ್ಯಾಲಿ: ದಾಖಲೆ ಸಲ್ಲಿಸಲು ಜಿಲ್ಲಾಡಳಿತಕ್ಕೆ ಮನವಿ

ಕೆಸಿ ವ್ಯಾಲಿ ನೀರಿಗೆ ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ಮಧ್ಯಾಂತರ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಕೂಡಲೇ ಸಂಬಂಧಪಟ್ಟ ದಾಖಲೆಗಳನ್ನು ನೀಡಿ ಜಿಲ್ಲೆಯ ಕೆರೆಗಳಿಗೆ ನೀರು ಹರಿಸಬೇಕೆಂದು ರೈತ ಸಂಘದಿಂದ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಅಗ್ರಹಿಸಲಾಯಿತು.

Vijaya Karnataka 18 Jan 2019, 4:36 pm
ಕೋಲಾರ: ಕೆಸಿ ವ್ಯಾಲಿ ನೀರಿಗೆ ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ಮಧ್ಯಾಂತರ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಕೂಡಲೇ ಸಂಬಂಧಪಟ್ಟ ದಾಖಲೆಗಳನ್ನು ನೀಡಿ ಜಿಲ್ಲೆಯ ಕೆರೆಗಳಿಗೆ ನೀರು ಹರಿಸಬೇಕೆಂದು ರೈತ ಸಂಘದಿಂದ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಅಗ್ರಹಿಸಲಾಯಿತು.
Vijaya Karnataka Web kc valley submit records
ಕೆಸಿ ವ್ಯಾಲಿ: ದಾಖಲೆ ಸಲ್ಲಿಸಲು ಜಿಲ್ಲಾಡಳಿತಕ್ಕೆ ಮನವಿ


ಮನವಿ ಸಲ್ಲಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಬಯಲುಸೀಮೆಯ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ಸರಕಾರ ನೀರಾವರಿ ಯೋಜನೆಗಳಿಗೆ ಸಾವಿರಾರು ಕೋಟಿ ಹಣ ಖರ್ಚು ಮಾಡುತ್ತಿದ್ದು, ಪ್ರಮುಖವಾಗಿ ಕೆಸಿ ವಾಲಿ ಯೋಜನೆಯನ್ನು ಅನುಷ್ಠಾನಗೊಳಿಸಿತು.

ಪ್ರಥಮವಾಗಿ ಹರಿಸಿದ ನೀರಿಗೆ ಗುಣಮಟ್ಟ ಹಾಗೂ 3ನೇ ಹಂತದ ಶುದ್ಧೀಕರಣಕ್ಕಾಗಿ ಹೋರಾಟಗಳು ನಡೆದಿರುವುದು ಸತ್ಯ. ಬಯಲುಸೀಮೆಯ ಜನರ ಕಷ್ಟ ಗೊತ್ತಿಲ್ಲದೆ ಮತ್ತೆ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡುವ ಮೂಲಕ ನೀರು ನಿಲ್ಲುವಂತೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿ ಮಾತನಾಡಿ, ರೈತರ ಕಷ್ಟ ಗೊತ್ತಿರದೆ ನೀರಾವರಿ ಹೋರಾಟಗಾರರ ಹೆಸರಿನಲ್ಲಿ ರೈತರ ಕಣ್ಣೀರಿಗೆ ಕಾರಣರಾಗುವುದು ಸರಿಯಲ್ಲ. ಅವರಿಗೆ ನೀರಿನ ಮೇಲೆ ಅನುಮಾನವಿದ್ದರೆ ಜನರ ಮನವೊಲಿಸಿ ಲಕ್ಷಾಂತರ ರೈತರೊಡನೆ ಸರಕಾರದ ವಿರುದ್ಧ ಹೋರಾಟ ಮಾಡಿಕೊಳ್ಳಲಿ. ಅದನ್ನು ಬಿಟ್ಟು ಈ ರೀತಿ ಯೋಜನೆಗಳಿಗೆ ತಡೆಯಾಜ್ಞೆ ತರುವುದು ನ್ಯಾಯವಲ್ಲ. ಕೂಡಲೇ ಸರಕಾರವು ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಅವರು ಕೇಳಿರುವ ಎಲ್ಲಾ ದಾಖಲೆಗಳನ್ನು ನೀಡಿ ತಡೆಯಾಜ್ಞೆಯನ್ನು ತೆರವುಗೊಳಿಸಿ ಅವಳಿ ಜಿಲ್ಲೆಯ ಕೆರಗಳಿಗೆ ನೀರು ಹರಿಸಿ ಅವಳಿ ಜಿಲ್ಲೆಯ ರೈತ ಕುಲವನ್ನು ಹಾಗೂ ಮೂಕಪ್ರಾಣಿಗಳನ್ನು ರಕ್ಷ ಣೆ ಮಾಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಪುಷ್ಪಲತಾ ಮಾತನಾಡಿ, ಬಯಲು ಸೀಮೆಯ ಜನರ ಕಷ್ಟ ಏನೆಂಬುದು ನಮಗೆ ಗೊತ್ತಿದೆ. ಆದರೆ ಇದರ ವಿರುದ್ಧ ಪದೇ ಪದೆ ತಡೆಯಾಜ್ಞೆ ತರುತ್ತಿರುವುದು ಬಯಲುಸೀಮೆಯ ಜನರಿಗೆ ಮಾಡಿದ ದ್ರೋಹವಾಗಿದೆ. ಇದನ್ನು ಜಿಲ್ಲಾದಿಕಾರಿಗಳ ಗಮನಕ್ಕೆ ತಂದು ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಸುಪ್ರೀಂ ಕೋರ್ಟ್‌ ಕೇಳಿರುವ ಎಲ್ಲಾ ದಾಖಲೆಗಳನ್ನು ಸರಕಾರ ಸಲ್ಲಿಸಿ ಆದೇಶವನ್ನು ತೆರವುಗೊಳಿಸಿ ಕೆರೆಗಳಿಗೆ ನೀರನ್ನು ಹರಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಹುಲ್ಕೂರ್‌ ಹರಿಕುಮಾರ್‌, ನಲ್ಲಾಂಡಹಳ್ಳಿ ಶಂಕರ್‌, ಮೀಸೆ ವೆಂಕಟೇಶಪ್ಪ, ಕ್ಯಾಸಂಬಳ್ಳಿ ಪ್ರತಾಪ್‌, ವಡ್ಡಹಳ್ಳಿ ಮಂಜುನಾಥ್‌, ಈಕಂಬಳ್ಳಿ ಮಂಜುನಾಥ್‌, ರೆಹಮಾನ್‌, ಮಂಜುನಾಥ್‌ರೆಡ್ಡಿ, ತೆರ್ನಹಳ್ಳಿ ಆಂಜಿನಪ್ಪ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ