ಆ್ಯಪ್ನಗರ

ಮುಂದಿನ ಕಾರ್ತಿಕ ಮಾಸದವರೆಗೆ ಜಲಗಂಡಾಂತರ ಇದೆ; ಕೋಡಿಮಠ ಶ್ರೀ ಎಚ್ಚರಿಕೆ

ಮಾಜಿ ಸಿಎಂ ಬಿಎಸ್‌ವೈ ವಿಚಾರದಲ್ಲಿ ಸ್ವಾಮೀಜಿಗಳು ಬೀದಿಗೆ ಬಂದಾಗ, ಕೇಂದ್ರ ಸರಕಾರದ ನಾಯಕರು ಬಂದು ಗುರುಗಳಿಗೆ ಆಶ್ವಾಸನೆ ಕೊಡಬಹುದಿತ್ತು. ಆದರೆ, ಆ ಕೆಲಸ ಮಾಡದೆ ಮಠಾಧೀಶರಿಗೆ ಅಗೌರವ ತೋರಿದ್ದಾರೆಂದು ಕೋಡಿ ಮಠದ ಶ್ರೀ ಶಿವಾನಂದ ಸ್ವಾಮೀಜಿ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದರು.

Vijaya Karnataka 31 Jul 2021, 11:08 am
ಕೋಲಾರ: ಯಡಿಯೂರಪ್ಪರನ್ನು ಸಿಎಂ ಸ್ಥಾನದಲ್ಲಿ ಉಳಿಸಿ ಎಂದು ನಾವು ಹೇಳಿಲ್ಲ. ಬದಲಾಗಿ ಸ್ವಾಮೀಜಿಗಳು ಬೀದಿಗೆ ಬಂದಾಗ, ಕೇಂದ್ರ ಸರಕಾರದ ನಾಯಕರು ಬಂದು ಗುರುಗಳಿಗೆ ಆಶ್ವಾಸನೆ ಕೊಡಬಹುದಿತ್ತು. ಆದರೆ, ಆ ಕೆಲಸ ಮಾಡದೆ ಮಠಾಧೀಶರಿಗೆ ಅಗೌರವ ತೋರಿದ್ದಾರೆಂದು ಕೋಡಿ ಮಠದ ಶ್ರೀ ಶಿವಾನಂದ ಸ್ವಾಮೀಜಿ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದರು.
Vijaya Karnataka Web Kodi Mutt Shri


ಕೋಲಾರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಶುಕ್ರವಾರ ನಡೆದ ಚಾಮುಂಡಿ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಆಶ್ವೀಜ ಮಾಸ ನಂತರ ಸಂಕ್ರಾಂತಿ ಒಳಗೆ ದೊಡ್ಡ ಅವಘಡ ಆಗಲಿದೆ. ರಾಷ್ಟ್ರ ಮಟ್ಟದ ದೊಡ್ಡ ಅವಘಡವಾಗಲಿದೆ. ಮುಂದಿನ ಕಾರ್ತಿಕ ಮಾಸದವರೆಗೆ ಜಲಗಂಡಾಂತರ ಇದೆ. ಕೊರೊನಾ ಇನ್ನೂ ಹೆಚ್ಚಾಗಲಿದೆ. ದೈವ ಕೃಪೆಯಿಂದ ಒಳ್ಳೆಯ ದಿನಗಳು ಬರಲಿವೆ ಎಂದು ಭವಿಷ್ಯವನ್ನೂ ನುಡಿದರು.

ಮುಂದೆ ನಡೆಯಲಿರುವ ಸನ್ನಿವೇಶಗಳ ಕುರಿತು ಭವಿಷ್ಯ ಹೇಳುವ ವಿಚಾರದಲ್ಲಿ ಖ್ಯಾತಿ ಪಡೆದಿರುವ ಕೋಡಿ ಮಠದ ಶ್ರೀ, ಇತ್ತೀಚೆಗಷ್ಟೇ ಮತ್ತೊಂದು ಭವಿಷ್ಯ ಹೇಳಿದ್ದರು. ಹಾಸನದಲ್ಲಿ ಮಾತನಾಡಿದ್ದ ಅವರು, ‘ಈ ವರ್ಷ ಕುಂಭದಿ ಗುರು ಬರಲು ತುಂಬುವವು ಕೆರೆ ಕಟ್ಟೆ ಶಂಭುವಿನ ಪದಸಾಕ್ಷಿ ಡಂಬವೆನ್ನೆಲು ಬೇಡಿದೆನಾ’ ಅಂದರೆ ಪ್ರಳಯದ ಮಳೆ ಆಗಲಿದೆ. ಮಿಂಚಿನಿಂದ ದುರ್ಯೋಗ ಇದೆ. ಜಗತ್ತಿನಲ್ಲಿ ಅಪಾಯಕಾರಿ ಘಟನೆಯೊಂದು ನಡೆಯಲಿದೆ. ಇದ್ರ ಜೊತೆಗೆ ರಾಜಕೀಯದ ಭೀತಿ ಎದುರಾಗಲಿದೆ. ಅಲ್ಲದೆ ಜಗತ್ತಿನಲ್ಲಿ ದೊಡ್ಡ ದೊಡ್ಡ ತಲೆಗಳು ಉರುಳಲಿವೆ, ಸಾಮೂಹಿಕ ಸಾವುಗಳು ಸಂಭವಿಸಲಿವೆ ಎಂದು ಹೇಳಿದ್ದರು. ಅಲ್ಲದೇ ಸತ್ತು ಹೂಳಲ್ಪಟ್ಟವರು ಕೂಡ ಮಾತನಾಡುತ್ತಾರೆ. ಅದನ್ನು ನೀವು ನೋಡಬಹುದು, ಆದರೆ ನೀವು ಅವರ ಜೊತೆ ಮಾತನಾಡಲು ಸಾಧ್ಯವಿಲ್ಲ. ಇಂಥ ಪ್ರೇತಾತ್ಮಗಳು ಸದ್ಯದಲ್ಲಿಯೇ ಕಂಡರೂ ಕಾಣಿಸದಂತಾಗುತ್ತದೆ. ಆದರೆ ಕರ್ನಾಟಕದಲ್ಲಿ ಅಷ್ಟು ತೊಂದರೆ ಆಗದು ಎಂದು ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ