ಆ್ಯಪ್ನಗರ

2025ರೊಳಗೆ ದೇಶ ಕುಷ್ಠರೋಗ ಮುಕ್ತವಾಗಿಸಲು ಪಣತೊಡಿ

ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪ್ರಕರಣ ಪತ್ತೆಹಚ್ಚುವ ಅಭಿಯಾನ ಹಮ್ಮಿಕೊಂಡಿದ್ದು, 2015ರೊಳಗೆ ದೇಶದಲ್ಲಿ ಕುಷ್ಠರೋಗ ನಿರ್ಮೂಲನೆ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು.

Vijaya Karnataka 9 Aug 2019, 3:28 pm
ಕೋಲಾರ: ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪ್ರಕರಣ ಪತ್ತೆಹಚ್ಚುವ ಅಭಿಯಾನ ಹಮ್ಮಿಕೊಂಡಿದ್ದು, 2015ರೊಳಗೆ ದೇಶದಲ್ಲಿ ಕುಷ್ಠರೋಗ ನಿರ್ಮೂಲನೆ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು.
Vijaya Karnataka Web leprosy will be abolished by 2025
2025ರೊಳಗೆ ದೇಶ ಕುಷ್ಠರೋಗ ಮುಕ್ತವಾಗಿಸಲು ಪಣತೊಡಿ


ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕುಷ್ಠರೋಗ ಪ್ರಕರಣ ಪತ್ತೆ ಅಭಿಯಾನದ ಕುರಿತು ಸಭೆ ನಡೆಸಿದ ಅವರು, ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕಾರ್ಯಕ್ರಮ ಸೆಪ್ಟೆಂಬರ್‌ 5 ರಿಂದ 14ರವರೆಗೆ ನಡೆಯಲಿದೆ. ಹೀಗಾಗಿ ಸಾರ್ವಜನಿಕರು ಆರೋಗ್ಯಾಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಕೋರಿದರು.

ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಪ್ರಾರಂಭದಲ್ಲಿಯೇ ಅದನ್ನು ಗುರುತಿಸಿದರೆ ನಿವಾರಣೆ ಮಾಡಬಹುದಾಗಿದೆ. ಹೀಗಾಗಿ ಯಾವುದೇ ರೀತಿಯ ರೋಗ ಲಕ್ಷಣಗಳಿರುವ ಪ್ರಕರಣಗಳು ಕಂಡುಬಂದರಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ.ಎನ್‌.ನಾರಾಯಣಸ್ವಾಮಿ ಅವರು, ಕುಷ್ಠರೋಗ ಪ್ರಕರಣಗಳನ್ನು ಪತ್ತೆ ಹಚ್ಚುವ ಅಭಿಯಾನದಡಿ ರಾಜ್ಯದಲ್ಲಿ 19 ಜಿಲ್ಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅದರಲ್ಲಿ ಕೋಲಾರ ಜಿಲ್ಲೆಯೂ ಒಂದಾಗಿದೆ. ಜಿಲ್ಲೆಯಲ್ಲಿ ಈ ಹಿಂದೆ ಇಂತಹ ಪ್ರಕರಣಗಳು ದಾಖಲಾಗಿದ್ದು, ಇದೀಗ ಕಡಿಮೆಯಾಗಿವೆ ಎಂದು ಹೇಳಿದದರು.

ಚರ್ಮದ ಮೇಲಕೆ ತಿಳಿ ಬಿಳಿ ತಾಮ್ರ ಬಣ್ಣದ ಮಚ್ಚೆಗಳು ಕಂಡು ಬಂದು ಅವುಗಳಿಗೆ ಸ್ಪರ್ಶಜ್ಞಾನ ಇಲ್ಲದಿರುವುದು ಸೇರಿದಂತೆ ಮತ್ತಿತರ ಗುಣಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ ಎಂದರು.

ಅಭಿಯಾನದಲ್ಲಿ ಪ್ರತಿಯೊಂದು ಮನೆ ಮನೆಗೆ ಭೇಟಿ ನೀಡಿ ಮನೆಯ ಎಲ್ಲ ಸದಸ್ಯರನ್ನೂ ಪರೀಕ್ಷಿಸಲಾಗುವುದು. ಅದಕ್ಕಾಗಿ ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯ ಇಲಾಖೆಯವರಿಗೆ ತರಬೇತಿ ನೀಡಲಾಗಿದ್ದು, ಇವರು ಮನೆಗಳ ಬಳಿ ಬಂದಾಗ ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ್‌ಕುಮಾರ್‌, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಚಾರಿಣಿ, ಡಾ.ಭಾರತಿ ಸೇರಿದಂತೆ ಪ್ರಮುಖರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ