ಆ್ಯಪ್ನಗರ

'ಸ್ವಾಮೀಜಿಗಳು ಸಲಹೆ ಕೊಡಲಿ, ಬೆದರಿಕೆ ಹಾಕೋದು ಸರಿಯಲ್ಲ': ವಚನಾನಂದ ಶ್ರೀಗೆ ಸಚಿವ ನಾಗೇಶ್‌ ತರಾಟೆ

ಪ್ರಜಾಪ್ರಭುತ್ವದಲ್ಲಿ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳನ್ನು ಬೇರೆಯವರು ಸೋಲಿಸಲು ಸಾಧ್ಯವಿಲ್ಲ. ಸೋಲು ಗೆಲುವನ್ನು ಜನರೇ ನಿರ್ಧರಿಸಬೇಕು. ಸ್ವಾಮೀಜಿಗಳು ಯಾವುದೇ ವಿಚಾರಕ್ಕೆ ಬೇಕಾದ್ರೂ ಸಲಹೆ ನೀಡಬಹುದು, ಆದ್ರೆ ವೇದಿಕೆಯಲ್ಲಿ ಬೆದರಿಕೆ ಹಾಕುವುದು ಸರಿಯಲ್ಲ.

Vijaya Karnataka Web 16 Jan 2020, 4:01 pm
ಕೋಲಾರ: ಸ್ವಾಮೀಜಿಗಳು ಯಾವುದೇ ವಿಚಾರಕ್ಕೆ ಬೇಕಾದ್ರೂ ಸಲಹೆ ನೀಡಬಹುದು, ಆದ್ರೆ, ವೇದಿಕೆಯಲ್ಲಿ ಬೆದರಿಕೆ ಹಾಕುವುದು ಸರಿಯಲ್ಲ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ನಾಗೇಶ್‌ ಹೇಳಿದರು.
Vijaya Karnataka Web nagesh vachanananda
'ಸ್ವಾಮೀಜಿಗಳು ಸಲಹೆ ಕೊಡಲಿ, ಬೆದರಿಕೆ ಹಾಕೋದು ಸರಿಯಲ್ಲ': ವಚನಾನಂದ ಶ್ರೀಗೆ ಸಚಿವ ನಾಗೇಶ್‌ ತರಾಟೆ


ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದ ಆವರಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ವಚನಾನಂದ ಸ್ವಾಮೀಜಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿಗಳು ಈ ರೀತಿ ಕೇಳುವುದು ಸಮಂಜಸವಲ್ಲ. ಸಲಹೆ ನೀಡುವುದು ಸೂಕ್ತ, ಬೆದರಿಕೆ ಹಾಕುವುದು, ವೇದಿಕೆಯಲ್ಲಿ ಮುಖ್ಯಮಂತ್ರಿಗಳಿಗೆ ಹೀಗೇ ಮಾಡಿ ಎಂದು ಖಡಾಖಂಡಿತವಾಗಿ ಹೇಳಿರುವುದು ಸರಿಯಲ್ಲ ಎಂದರು.

ಸ್ವಾಮೀಜಿಗಳು ಬಂದು ಸಲಹೆ ನೀಡಿದರೆ ಮುಖ್ಯಮಂತ್ರಿಗಳು ಅದನ್ನು ಪರಿಗಣಿಸುತ್ತಾರೆ. ಹೀಗಾಗಿ ಅನೇಕ ಆಶ್ರಮಗಳಿಗೂ ಸಹಾಯ ಮಾಡಿದ್ದಾರೆ. ಆದರೆ ಈ ರೀತಿ ವೇದಿಕೆಯಲ್ಲಿ ಮಾತಾಡಿದರೆ ಮುಖ್ಯಮಂತ್ರಿಗಳ ಘನತೆ ಏನಾಗಬೇಕು ಎಂದು ಪ್ರಶ್ನಿಸಿದರು.

ಪಂಚಮಸಾಲಿ ಸಮಾವೇಶದಲ್ಲಿ ವಚನಾನಂದ ಸ್ವಾಮೀಜಿ v/s ಯಡಿಯೂರಪ್ಪ, ವೇದಿಕೆಯಿಂದ ಹೊರನಡೆಯಲೆತ್ನಿಸಿದ ಸಿಎಂ

ಎಲ್ಲಸಮುದಾಯಗಳಲ್ಲಿಯೂ ಸ್ವಾಮೀಜಿಗಳು ಇರುವುದಿಲ್ಲ. ನಮ್ಮ ಸಮುದಾಯಕ್ಕೆ ಇರುವುದು ಛಲವಾದಿ ಸ್ವಾಮಿಗಳು ಒಬ್ಬರೇ, ಅವರು ಯಾವತ್ತೂ ಯಾವುದೇ ಬೇಡಿಕೆ ಮುಂದಿಟ್ಟಿಲ್ಲ ಎಂದು ಸಮರ್ಥಿಸಿಕೊಂಡ ನಾಗೇಶ್, ಪ್ರಜಾಪ್ರಭುತ್ವದಲ್ಲಿ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳನ್ನು ಬೇರೆಯವರು ಸೋಲಿಸಲು ಸಾಧ್ಯವಿಲ್ಲ ಎಂದರು. ಸೋಲು ಗೆಲುವನ್ನು ಜನರೇ ನಿರ್ಧರಿಸಬೇಕು ಎಂದ ನಾಗೇಶ್, ಹೊಸಕೋಟೆಯ ಎಂಟಿಬಿ ನಾಗರಾಜ್‌ ಅವರಿಗೆ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಏನು ಮಾತನಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ: ವಚನಾನಂದ ಸ್ವಾಮೀಜಿ ಹೇಳಿಕೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಬೆಂಬಲ

ಕಾರಣಾಂತರಗಳಿಂದಾಗಿ ಕೋಲಾರ ಜಿಲ್ಲಾಸ್ಪತ್ರೆಯ ಆವರಣದಲ್ಲಿನ ತಾಯಿ ಮತ್ತು ಮಕ್ಕಳ ನೂತನ ಆಸ್ಪತ್ರೆ ಕಟ್ಟಡ ಉದ್ಘಾಟನೆ ಮುಂದೂಡಲಾಗಿದ್ದು, ಸದ್ಯಕ್ಕೆ ಉದ್ಘಾಟನೆ ಇಲ್ಲದೆಯೇ ಬಳಸಲು ಜಿಲ್ಲಾಧಿಕಾರಿಗೆ ಸೂಚಿಸಿದ್ದು, ಜನರಿಗೆ ಅನುಕೂಲವಾಗಲಿ ಎಂದಿದ್ದಾರೆ.

ಪಂಚಮಸಾಲಿ ಸ್ವಾಮೀಜಿ ಹೇಳಿಕೆ ಸಮರ್ಥಿಸಿಕೊಂಡ ಎಂಬಿ ಪಾಟೀಲ್‌ಗೆ ಬುದ್ಧಿಭ್ರಮಣೆ ಆಗಿದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ