ಆ್ಯಪ್ನಗರ

ಚಿಗರಾಪುರ ವಸತಿ ಶಾಲೆಗೆ ಮೊರಾರ್ಜಿ ವಸತಿ ಶಾಲೆ ಮಕ್ಕಳು ಶಿಫ್ಟ್‌

ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿದ್ದ ಮುಳಬಾಗಲು ಮೊರಾರ್ಜಿ ವಸತಿ ಶಾಲೆ ಮಕ್ಕಳನ್ನು ಚಿಗರಾಪರ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಗಿದೆ.

Vijaya Karnataka Web 21 Dec 2018, 5:00 am
ಬೇತಮಂಗಲ : ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿದ್ದ ಮುಳಬಾಗಲು ಮೊರಾರ್ಜಿ ವಸತಿ ಶಾಲೆ ಮಕ್ಕಳನ್ನು ಚಿಗರಾಪರ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಗಿದೆ.
Vijaya Karnataka Web morarji housing school children shift to chigarapura housing school
ಚಿಗರಾಪುರ ವಸತಿ ಶಾಲೆಗೆ ಮೊರಾರ್ಜಿ ವಸತಿ ಶಾಲೆ ಮಕ್ಕಳು ಶಿಫ್ಟ್‌


ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿನಿ ಬುಧವಾರ ಬೆಳಗ್ಗೆ ಶೌಚಾಲಯಕ್ಕೆ ಹೋಗಿದ್ದಾಗ ಕಟ್ಟಡ ಕುಸಿದು ಬಿದ್ದು ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಆತಂಕ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ಅವರ ಆದೇಶದ ಮೇರೆಗೆ ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡ ಚಿಗರಾಪುರ ವಿದ್ಯಾರ್ಥಿ ನಿಲಯಕ್ಕೆ ಮಕ್ಕಳನ್ನು ಸ್ಥಳಾಂತರಿಸಲಾಗಿದೆ. ಮುಂದಿನ ವ್ಯವಸ್ಥೆ ಆಗುವವರೆಗೆ ಮಕ್ಕಳಿಗೆ ಇಲ್ಲೇ ಊಟ, ವಸತಿ ಮತ್ತು ಪಾಠ-ಪ್ರವಚನಗಳಿಗೆ ವ್ಯವಸ್ಥೆ ಮಾಡಲಾಗಿದೆ.

ವರ್ಷದೊಳಗೆ ಪೂರ್ಣ: ಮುಳಬಾಗಿಲು ತಾಲೂಕಿನ ಹೊಳಲಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಾಮಗಾರಿ ಪ್ರಗತಿಯಲ್ಲಿದ್ದು, ಅದು ಮುಗಿದ ತಕ್ಷಣವೇ, ಮೊರಾರ್ಜಿ ವಸತಿ ಶಾಲೆ ಮಕ್ಕಳನ್ನು ಅಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ.

ವಸತಿ ನಿಲಯಕ್ಕೆ ಮಕ್ಕಳನ್ನು ಸ್ಥಳಾಂತರ ಮಾಡುವ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಗೀತಮ್ಮ ಆನಂದ ರೆಡ್ಡಿ, ಬಂಗಾರಪೇಟೆ ಇಒ ಡಾ.ಸುಭಾನ್‌, ಟಿ.ಗೊಲ್ಲಹಳ್ಳಿ ಗ್ರಾಪಂ ಅಧ್ಯಕ್ಷೆ ಮಂಜುಳ ಮಂಜುನಾಥ್‌, ವಸತಿ ಶಾಲೆಯ ಪ್ರಾಂಶುಪಾಲ ನಾಯಕ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ