ಆ್ಯಪ್ನಗರ

ಮಕ್ಕಳ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ತಾಯಿಯ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಮಗನ ಕತ್ತನ್ನು ಬ್ಲೇಡ್‌ನಿಂದ ಕೊಯ್ದು, ತಾನೂ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವ ಘಟನೆ ಪಟ್ಟಣದ ಮಾರುತಿ ಬಡಾವಣೆಯಲ್ಲಿ ನಡೆದಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿರಾದ್ದಾರೆ.

Vijaya Karnataka 11 Mar 2019, 5:00 am
ಮಾಲೂರು: ತಾಯಿಯ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಮಗನ ಕತ್ತನ್ನು ಬ್ಲೇಡ್‌ನಿಂದ ಕೊಯ್ದು, ತಾನೂ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವ ಘಟನೆ ಪಟ್ಟಣದ ಮಾರುತಿ ಬಡಾವಣೆಯಲ್ಲಿ ನಡೆದಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿರಾದ್ದಾರೆ.
Vijaya Karnataka Web mother attempts suicide
ಮಕ್ಕಳ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ತಾಯಿ


ಬ್ಲೇಡ್‌ನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಮಹಿಳೆಯನ್ನು ಪಟ್ಟಣದ ಮಾರುತಿ ಬಡಾವಣೆಯ ಮೀನಾ(30) ಹಾಗೂ ಆಕೆಯ ಮಗನಾದ ಮೌನಿಷ್‌ (7) ಎಂದು ಗುರುತಿಸಲಾಗಿದೆ.

ಪಟ್ಟಣದ ಮಾರುತಿ ಬಡಾವಣೆಯ ನಾಗರಾಜ್‌ ಎಂಬುವರ ಪತ್ನಿಯಾದ ಮೀನಾ ಅವರ ತಾಯಿ ಕಳೆದ 15 ದಿನಗಳ ಹಿಂದೆ ಮೃತಪಟ್ಟಿದ್ದರು. ತಾಯಿ ಮೃತಪಟ್ಟಿದ್ದರಿಂದ ಮಗಳು ಮೀನಾ ಖಿನ್ನತೆಗೆ ಒಳಗಾಗಿದ್ದಳು. ಸದಾ ತನ್ನ ತಾಯಿಯನ್ನು ನೆನಪಿಸಿಕೊಂಡು ಆತಂಕಕ್ಕೆ ಒಳಗಾಗಿ ಭಾನುವಾರ ಬೆಳಗ್ಗೆ 8 ಗಂಟೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬ್ಲೇಡ್‌ನಿಂದ ಕತ್ತನ್ನು ಕೊಯ್ದುಕೊಳ್ಳಲು ಮುಂದಾಗಿದ್ದಾಳೆ. ಈ ಸಂದರ್ಭದಲ್ಲಿ ಮಗ ಮೌನಿಷ್‌ ತಾಯಿಯ ಬಳಿ ಬಂದಿದ್ದಾನೆ. ಆಕೆ ಮಗನ ಕತ್ತನ್ನು ಕೊಯ್ದು ನಂತರ ತಾನೂ ಕೊಯ್ದುಕೊಂಡಿದ್ದಾಳೆ. ಮಗ ಜೋರಾಗಿ ಕಿರುಚಿಕೊಂಡಾಗ ಅಕ್ಕಪಕ್ಕದ ಜನರು ಸ್ಥಳಕ್ಕೆ ಬಂದು ನೋಡಿದಾಗ ಇಬ್ಬರ ಕತ್ತುಗಳಿಂದ ರಕ್ತ ಬರುತ್ತಿದ್ದನ್ನು ಗಮನಿಸಿ ಕೂಡಲೇ ಇಬ್ಬರನ್ನೂ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಮೀನಾ ಅವರ ಧ್ವನಿಪಟ್ಟಿಗೆಗೆ ಸ್ವಲ್ಪ ಗಾಯವಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ