ಆ್ಯಪ್ನಗರ

ಜಿಲ್ಲೆಯಲ್ಲಿ ಕಾನೂನು ಕಾಪಾಡಲು ಅಗತ್ಯ ಕ್ರಮ

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನೂತನ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ ಹೇಳಿದರು.

Vijaya Karnataka 27 Jun 2019, 2:39 pm
ಮಾಲೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನೂತನ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ ಹೇಳಿದರು.
Vijaya Karnataka Web necessary action to protect law and order
ಜಿಲ್ಲೆಯಲ್ಲಿ ಕಾನೂನು ಕಾಪಾಡಲು ಅಗತ್ಯ ಕ್ರಮ


ಪಟ್ಟಣದ ಪೊಲೀಸ್‌ ಠಾಣೆಗೆ ಬುಧವಾರ ದಿಢೀರ್‌ ಭೇಟಿ ನೀಡಿ ಕಚೇರಿಯನ್ನು ಪರಿಶೀಲಿಸಿದ ನಂತರ ಪೊಲೀಸ್‌ ವಸತಿಗೃಹಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದರು.

ಜಿಲ್ಲೆ ಸೇರಿದಂತೆ ಎಲ್ಲಾ ತಾಲೂಕುಗಳಿಗೆ ಒಳಪಟ್ಟ ಹಳ್ಳಿಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆಯೊಂದಿಗೆ ಕೈಜೋಡಿಸಬೇಕು. ಅಲ್ಲದೆ, ಪ್ರತಿಯೊಂದು ಹಳ್ಳಿಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಹಳ್ಳಿಗಳಲ್ಲಿ ಗಲಾಟೆ, ಹೊಡೆದಾಟ, ಶಾಂತಿಗೆ ಭಂಗ ಬರುವ ಘಟನೆಗಳು, ಸೇರಿದಂತೆ ಅಹಿತಕರ ಘಟನೆಗಳು ನಡೆದಾಗ ಪೊಲೀಸರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದರು.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಸಿಬ್ಬಂದಿ ಕೊರತೆಯಿದ್ದು, ಈಗಾಗಲೇ ಸಿಬ್ಬಂದಿ ಆಯ್ಕೆಗಾಗಿ ಪರೀಕ್ಷೆ ನಡೆಸಿದ್ದು, ಅಂತಿಮ ಹಂತದ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ ಸಿಬ್ಬಂದಿಗಳ ಸಮಸ್ಯೆಯನ್ನು ಬಗೆಹರಿಸಲಾಗುವುದು. ಪಟ್ಟಣದಲ್ಲಿ ನೂತನವಾಗಿ ಅಳವಡಿಸಿರುವ ಸಿಗ್ನಲ್‌ ಲೈಟ್‌ಗಳನ್ನು ಕೂಡಲೇ ವ್ಯವಸ್ಥಿತವಾಗಿ ಕಾರ್ಯಗತಗೊಳಿಸಲು ಆದ್ಯತೆ ನೀಡುವುದಾಗಿ ಹೇಳಿದ ಅವರು, ಪೊಲೀಸ್‌ ಇಲಾಖೆಗೆ ಸೇರಿದ ವಸತಿ ಗೃಹಗಳನ್ನು ಪರಿಶೀಲಿಸಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪ್ರೊಬೇಷನರಿ ಡಿವೈಎಸ್‌ಪಿ ಜಿ.ಅನುಷ, ಸಿಪಿಐ ಬಿ.ಎಸ್‌.ಸತೀಶ್‌, ಪಿಎಸ್‌ಐ ಎಂ.ಎನ್‌.ಮುರುಳಿ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ