ಆ್ಯಪ್ನಗರ

ಸುಂಕ ರಹಿತ ಹಾಲು ಆಮದು ಒಪ್ಪಂದ ವಿರೋಧಿಸಿ ಕೋಲಾರದಲ್ಲಿ ರೈತ ಸಂಘ ಪ್ರತಿಭಟನೆ

ಹಲವು ದೇಶಗಳ ಜತೆ ​​ಸುಂಕ ರಹಿತ ಹಾಲಿನ ಆಮದು ಒಪ್ಪಂದ ಮಾಡಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ ಎನ್ನಲಾಗಿದೆ. ಇದು ಸಹಜವಾಗಿ ರೈತರಲ್ಲಿ ಆಕ್ರೋಶ ಉಂಟಾಗಿದ್ದು, ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಲಾರ ನಗರದಲ್ಲೂ ರೈತ ಸಂಘದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

Vijaya Karnataka Web 24 Oct 2019, 6:58 pm
ಕೋಲಾರ: ಸುಂಕ ರಹಿತ ಹಾಲು ಆಮದು ಒಪ್ಪಂದ ವಿರೋಧಿಸಿ ಜಿಲ್ಲೆಯಲ್ಲಿ ರೈತ ಸಂಘ ಪ್ರತಿಭಟನೆ ನಡೆಸಿದೆ. ನಗರದ ಶ್ರೀನಿವಾಸಪುರ ವೃತ್ತದಲ್ಲಿ ರಸ್ತೆ ತಡೆದು ಮೋದಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web klr farmer protest


ಈ ಸುದ್ದಿ ಓದಿ: ಆರ್‌ಸಿಇಪಿ ಒಪ್ಪಂದಕ್ಕೆ ಕಬ್ಬು ಬೆಳೆಗಾರರ ವಿರೋಧ ಪ್ರತಿಭಟನೆ

ಸುಂಕ ರಹಿತ ಹಾಲಿನ ಆಮದು ಒಪ್ಪಂದ ಮಾಡಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದ್ದು, ಶೀಘ್ರದಲ್ಲೇ ಒಪ್ಪಂದ ಮಾಡಿಕೊಳ್ಳಲಿದೆ ಎನ್ನಲಾಗುತ್ತಿದೆ. ಇದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೇಂದ್ರ ಸರಕಾರದ ವಿರುದ್ಧ ರೈತರು, ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಇದನ್ನೂ ಓದಿ: ಕೇಂದ್ರದ ವಿರುದ್ಧ ಬೀದಿಗಿಳಿದ ಹಾಲು ಉತ್ಪಾದಕರು

ಇದೇ ರೀತಿ ಕೋಲಾರ ನಗರದಲ್ಲೂ ರೈತ ಸಂಘ ಪ್ರತಿಭಟನೆ ನಡೆಸಿದ್ದು, ಎತ್ತಿನ ಗಾಡಿ ಹಾಗೂ ಸೀಮೆ ಹಸು ಸಮೇತ ನಗರದ ಶ್ರೀನಿವಾಸಪುರ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ತರಕಾರಿ ರಸ್ತೆಗೆ ಹಾಕಿ, ಪೊರಕೆ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದು, ಸುಂಕ ರಹಿತ ಹಾಲಿನ ಆಮದು ಒಪ್ಪಂದ ಮಾಡಿಕೊಳ್ಳದಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಹಾಲು ಆಮದಿನಿಂದ ಹೈನೋದ್ಯಮಕ್ಕೆ ಪೆಟ್ಟು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ