ಮಾಲೂರು: ಜನಪ್ರತಿನಿಧಿಗಳು ರಾಜಕಾರಣವನ್ನು ಚುನಾವಣೆಗೆ ಮಾತ್ರ ಸೀಮಿತಗೊಳಿಸಿ ಅಭಿವೃದ್ಧಿಯ ಹಿತ ದೃಷ್ಟಿಯಿಂದ ಪಕ್ಷಾತೀತವಾಗಿ ಬೆಂಬಲ ನೀಡಬೇಕು ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ಪಟ್ಟಣದ ಪುರಸಭೆ ಆವರಣದಲ್ಲಿ 1.18 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಡಾ.ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿದರು.
ಹಲವಾರು ವರ್ಷಗಳಿಂದ ಇಲ್ಲಿನ ಕನ್ನಡ ಪರ ಸಂಘಟನೆಗಳು ಪಟ್ಟಣದ ಹೃದಯ ಭಾಗದಲ್ಲಿ ಸುಸಜ್ಜಿತ ರಂಗಮಂದಿರವನ್ನು ನಿರ್ಮಿಸಿ ಕೊಡುವ ಬಗ್ಗೆ ಹಲವಾರು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದರ ಪರಿಣಾಮ ಜನಪ್ರತಿನಿಧಿಗಳು ಎಚ್ಚೆತುಕೊಂಡು ಸುಸಜ್ಜಿತವಾದ ರಂಗಮಂದಿರ ನಿರ್ಮಾಣ ಮಾಡಲಾಗಿದೆ. ಆ ಮೂಲಕ ಕಲಾವಿದರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ರಂಗಮಂದಿರ ಒಳಾಂಗಣವನ್ನು ಮಾದರಿಯಾನ್ನಾಗಿ ರೂಪಿಸಲು 2 ಕೋಟಿ ರೂ. ವ್ಯಯ ಮಾಡುವುದಾಗಿ ತಿಳಿಸಿದರು.
ಪಟ್ಟಣದ ಸಮಗ್ರ ಅಭಿವೃದ್ಧಿ: ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ದಿಸೆಯಲ್ಲಿ 18 ಕೋಟಿ ರೂಗಳ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಿದ್ದು, ಮೊದಲನೇ ಹಂತದಲ್ಲಿ 7.50 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅತಿ ಶೀಘ್ರವಾಗಿ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುವುದು ಎಂದರು.
ತಾಲೂಕಿನ ಗ್ರಾಮಾಂತರ ಪ್ರದೇಶ ಮತ್ತು ಪಟ್ಟಣಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮಾರ್ಕಂಡಯ್ಯ ಡ್ಯಾಂನಿಂದ 185 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪೈಪ್ಲೈನ್ ದುರಸ್ತಿ ಕಾರ್ಯ ಮುಗಿದ ಕೂಡಲೇ ನೀರು ಸರಬರಾಜು ಮಾಡಲಾಗುವುದು. ಯರಗೋಳ್ ಬಳಿ 75ಮೀ.ಎತ್ತರ, 5 ಎಕರೆ ಅಗಲದ ವಿಸ್ತೀರ್ಣದಲ್ಲಿ ಬೃಹದಾಕಾರವಾಗಿ ನಿರ್ಮಿಸಿರುತ್ತಿರುವ ಡ್ಯಾಂ ಪೂರ್ಣಗೊಂಡರೆ ಪಟ್ಟಣ ಪ್ರದೇಶಕ್ಕೆ ಕುಡಿಯುವ ನೀರು ಪೂರೈಸಲಾಗುವುದು. ಕೆಸಿ ವ್ಯಾಲಿಯಿಂದ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಭರದಿಂದ ಸಾಗುತ್ತಿದ್ದು, ಕೆಲವರು ಸುಪ್ರೀಂಕೋರ್ಟ್ ಮೋರೆ ಹೋಗಿರುವುದರಿಂದ ತಾತ್ಕಾಲಿಕವಾಗಿ ಹಿನ್ನಡೆಯಾಗಿದ್ದರೂ ಪ್ರಕರಣ ಬೇಗನೇ ಇತ್ಯರ್ಥಗೊಳ್ಳಲಿದೆ ಎಂದರು.
ಇದೇ ಸಂದರ್ಭದಲ್ಲಿ ಸಮಾಜದ ನಾನಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರನ್ನು ಅಭಿನಂದಿಸಲಾಯಿತು.
ಪುರಸಭೆ ಅಧ್ಯಕ್ಷ ಸಿ.ಪಿ.ನಾಗರಾಜ್ ಅಧ್ಯಕ್ಷ ತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಗೀತಮ್ಮ ಆನಂದರೆಡ್ಡಿ, ತಹಸೀಲ್ದಾರ್ ಎಚ್.ವಿ.ಗಿರೀಶ್, ಯೋಜನಾ ನಿರ್ದೇಶಕ ರಂಗಸ್ವಾಮಿ, ಮುಖ್ಯಾಧಿಕಾರಿ ಪ್ರಸಾದ್, ಪುರಸಭೆ ಉಪಾಧ್ಯಕ್ಷೆ ಗೀತಾರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ, ಪುರಸಭೆ ಮಾಜಿ ಅಧ್ಯಕ್ಷ ರಾದ ಭಾರತಮ್ಮ, ಗೀತಾವೆಂಕಟೇಶ್, ಎಂ.ರಾಮಮೂರ್ತಿ, ಸಿ.ಲಕ್ಷ್ಮೀನಾರಾಯಣ್, ಗುಲಾಬ್ಜಾನ್, ಪಾರ್ವತಮ್ಮ, ಸದಸ್ಯರಾದ ಎ.ಹನುಮಂತರೆಡ್ಡಿ, ಎಚ್.ವಿ.ಲಿಂಗೇಶ್, ಎಂ.ವಿ.ವೇಮನ, ಸಿ.ಪಿ.ವೆಂಕಟೇಶ್, ಎಂ.ಪಿ.ವಿಜಯಕುಮಾರ್, ಅಲೂ ಮಂಜು, ಜಾಕೀರ್, ಮಾಲಾದ್ರಿ, ಸುಲೋಚನಾ, ಶ್ರೀವಳ್ಳಿ, ಅಶ್ವಥರೆಡ್ಡಿ, ಅಪ್ಸರ್, ಬೋರ್ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ರಾಜಣ್ಣ, ಜಿ.ಪಂ.ಮಾಜಿ ಸದಸ್ಯ ಎಚ್.ಹನುಮಂತಪ್ಪ, ಡಿಸಿಸಿ ನಿರ್ದೇಶಕ ಚನ್ನರಾಯಪ್ಪ, ನಗರ ಜೆಡಿಎಸ್ ಅಧ್ಯಕ್ಷ ಟಿ.ರಾಮಚಂದ್ರ, ಅಂಜನಿಸೋಮಣ್ಣ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಜಿ.ಮಧುಸೂದನ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಪಟ್ಟಣದ ಪುರಸಭೆ ಆವರಣದಲ್ಲಿ 1.18 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಡಾ.ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿದರು.
ಹಲವಾರು ವರ್ಷಗಳಿಂದ ಇಲ್ಲಿನ ಕನ್ನಡ ಪರ ಸಂಘಟನೆಗಳು ಪಟ್ಟಣದ ಹೃದಯ ಭಾಗದಲ್ಲಿ ಸುಸಜ್ಜಿತ ರಂಗಮಂದಿರವನ್ನು ನಿರ್ಮಿಸಿ ಕೊಡುವ ಬಗ್ಗೆ ಹಲವಾರು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದರ ಪರಿಣಾಮ ಜನಪ್ರತಿನಿಧಿಗಳು ಎಚ್ಚೆತುಕೊಂಡು ಸುಸಜ್ಜಿತವಾದ ರಂಗಮಂದಿರ ನಿರ್ಮಾಣ ಮಾಡಲಾಗಿದೆ. ಆ ಮೂಲಕ ಕಲಾವಿದರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ರಂಗಮಂದಿರ ಒಳಾಂಗಣವನ್ನು ಮಾದರಿಯಾನ್ನಾಗಿ ರೂಪಿಸಲು 2 ಕೋಟಿ ರೂ. ವ್ಯಯ ಮಾಡುವುದಾಗಿ ತಿಳಿಸಿದರು.
ಪಟ್ಟಣದ ಸಮಗ್ರ ಅಭಿವೃದ್ಧಿ: ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ದಿಸೆಯಲ್ಲಿ 18 ಕೋಟಿ ರೂಗಳ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಿದ್ದು, ಮೊದಲನೇ ಹಂತದಲ್ಲಿ 7.50 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅತಿ ಶೀಘ್ರವಾಗಿ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುವುದು ಎಂದರು.
ತಾಲೂಕಿನ ಗ್ರಾಮಾಂತರ ಪ್ರದೇಶ ಮತ್ತು ಪಟ್ಟಣಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮಾರ್ಕಂಡಯ್ಯ ಡ್ಯಾಂನಿಂದ 185 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪೈಪ್ಲೈನ್ ದುರಸ್ತಿ ಕಾರ್ಯ ಮುಗಿದ ಕೂಡಲೇ ನೀರು ಸರಬರಾಜು ಮಾಡಲಾಗುವುದು. ಯರಗೋಳ್ ಬಳಿ 75ಮೀ.ಎತ್ತರ, 5 ಎಕರೆ ಅಗಲದ ವಿಸ್ತೀರ್ಣದಲ್ಲಿ ಬೃಹದಾಕಾರವಾಗಿ ನಿರ್ಮಿಸಿರುತ್ತಿರುವ ಡ್ಯಾಂ ಪೂರ್ಣಗೊಂಡರೆ ಪಟ್ಟಣ ಪ್ರದೇಶಕ್ಕೆ ಕುಡಿಯುವ ನೀರು ಪೂರೈಸಲಾಗುವುದು. ಕೆಸಿ ವ್ಯಾಲಿಯಿಂದ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಭರದಿಂದ ಸಾಗುತ್ತಿದ್ದು, ಕೆಲವರು ಸುಪ್ರೀಂಕೋರ್ಟ್ ಮೋರೆ ಹೋಗಿರುವುದರಿಂದ ತಾತ್ಕಾಲಿಕವಾಗಿ ಹಿನ್ನಡೆಯಾಗಿದ್ದರೂ ಪ್ರಕರಣ ಬೇಗನೇ ಇತ್ಯರ್ಥಗೊಳ್ಳಲಿದೆ ಎಂದರು.
ಇದೇ ಸಂದರ್ಭದಲ್ಲಿ ಸಮಾಜದ ನಾನಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರನ್ನು ಅಭಿನಂದಿಸಲಾಯಿತು.
ಪುರಸಭೆ ಅಧ್ಯಕ್ಷ ಸಿ.ಪಿ.ನಾಗರಾಜ್ ಅಧ್ಯಕ್ಷ ತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಗೀತಮ್ಮ ಆನಂದರೆಡ್ಡಿ, ತಹಸೀಲ್ದಾರ್ ಎಚ್.ವಿ.ಗಿರೀಶ್, ಯೋಜನಾ ನಿರ್ದೇಶಕ ರಂಗಸ್ವಾಮಿ, ಮುಖ್ಯಾಧಿಕಾರಿ ಪ್ರಸಾದ್, ಪುರಸಭೆ ಉಪಾಧ್ಯಕ್ಷೆ ಗೀತಾರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ, ಪುರಸಭೆ ಮಾಜಿ ಅಧ್ಯಕ್ಷ ರಾದ ಭಾರತಮ್ಮ, ಗೀತಾವೆಂಕಟೇಶ್, ಎಂ.ರಾಮಮೂರ್ತಿ, ಸಿ.ಲಕ್ಷ್ಮೀನಾರಾಯಣ್, ಗುಲಾಬ್ಜಾನ್, ಪಾರ್ವತಮ್ಮ, ಸದಸ್ಯರಾದ ಎ.ಹನುಮಂತರೆಡ್ಡಿ, ಎಚ್.ವಿ.ಲಿಂಗೇಶ್, ಎಂ.ವಿ.ವೇಮನ, ಸಿ.ಪಿ.ವೆಂಕಟೇಶ್, ಎಂ.ಪಿ.ವಿಜಯಕುಮಾರ್, ಅಲೂ ಮಂಜು, ಜಾಕೀರ್, ಮಾಲಾದ್ರಿ, ಸುಲೋಚನಾ, ಶ್ರೀವಳ್ಳಿ, ಅಶ್ವಥರೆಡ್ಡಿ, ಅಪ್ಸರ್, ಬೋರ್ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ರಾಜಣ್ಣ, ಜಿ.ಪಂ.ಮಾಜಿ ಸದಸ್ಯ ಎಚ್.ಹನುಮಂತಪ್ಪ, ಡಿಸಿಸಿ ನಿರ್ದೇಶಕ ಚನ್ನರಾಯಪ್ಪ, ನಗರ ಜೆಡಿಎಸ್ ಅಧ್ಯಕ್ಷ ಟಿ.ರಾಮಚಂದ್ರ, ಅಂಜನಿಸೋಮಣ್ಣ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಜಿ.ಮಧುಸೂದನ್ ಸೇರಿದಂತೆ ಇನ್ನಿತರರು ಹಾಜರಿದ್ದರು.