ಆ್ಯಪ್ನಗರ

ನೆರೆ ಸಂತ್ರಸ್ತರಿಗೆ ಒಂದು ದಿನದ ಪಿಂಚಣಿ

ರಾಜ್ಯದ ಉತ್ತರ ಕರ್ನಾಟಕ ಹಾಗೂ ಮಲೆನಾಡು ಜಿಲ್ಲೆಗಳಲ್ಲಿಭೀಕರ ಮಳೆಯ ಪ್ರವಾಹದಿಂದ ನಿರಾಶ್ರಿತರಾಗಿ ಮನೆ ಮಠ ಕಳೆದುಕೊಂಡಿರುವ ಸಂತ್ರಸ್ತರಿಗೆ ವೈಯಕ್ತಿಕವಾಗಿ ಒಂದು ದಿನದ ಪಿಂಚಣಿ ಹಣವನ್ನು ನೀಡುವುದಾಗಿ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ತಾಲೂಕು ಸಂಘದ ಅಧ್ಯಕ್ಷ ಎಂ.ಆರ್‌.ನಾಗರಾಜ್‌ ಹೇಳಿದರು.

Vijaya Karnataka 16 Sep 2019, 3:18 pm
ಮಾಲೂರು: ರಾಜ್ಯದ ಉತ್ತರ ಕರ್ನಾಟಕ ಹಾಗೂ ಮಲೆನಾಡು ಜಿಲ್ಲೆಗಳಲ್ಲಿಭೀಕರ ಮಳೆಯ ಪ್ರವಾಹದಿಂದ ನಿರಾಶ್ರಿತರಾಗಿ ಮನೆ ಮಠ ಕಳೆದುಕೊಂಡಿರುವ ಸಂತ್ರಸ್ತರಿಗೆ ವೈಯಕ್ತಿಕವಾಗಿ ಒಂದು ದಿನದ ಪಿಂಚಣಿ ಹಣವನ್ನು ನೀಡುವುದಾಗಿ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ತಾಲೂಕು ಸಂಘದ ಅಧ್ಯಕ್ಷ ಎಂ.ಆರ್‌.ನಾಗರಾಜ್‌ ಹೇಳಿದರು.
Vijaya Karnataka Web one day pension contribution for flood hit people
ನೆರೆ ಸಂತ್ರಸ್ತರಿಗೆ ಒಂದು ದಿನದ ಪಿಂಚಣಿ


ಪಟ್ಟಣದ ತಿರುಮಲ ಕಲ್ಯಾಣ ಮಂಟಪದಲ್ಲಿಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿಗೆ ರಾಜ್ಯದ ಉತ್ತರ ಕರ್ನಾಟಕ ಹಾಗೂ ಕೊಡಗು ಜಿಲ್ಲೆಗಳಲ್ಲಿಅತಿಯಾದ ಮಳೆ ಹಾಗೂ ಪ್ರವಾಹದಿಂದ ಅಲ್ಲಿನ ನಾಗರಿಕರು ಮನೆ ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಸರಕಾರವು ಅವರ ನೆರವಿಗೆ ಧಾವಿಸಿದ್ದು ಇಲ್ಲಿನ ತಾಲೂಕು ನಿವೃತ್ತ ನೌಕರರ ಸಂಘದ ವತಿಯಿಂದ ವೈಯಕ್ತಿಕವಾಗಿ ಒಂದು ದಿನದ ಪಿಂಚಣಿ ಹಣವನ್ನು ನೆರೆ ಸಂತ್ರಸ್ತರಿಗೆ ಪರಿಹಾರ ನಿಧಿಗೆ ನೀಡಲು ತೀರ್ಮಾನಿಸಲಾಗಿದೆ ಎಂದರು.

ತಾಂತ್ರಿಕ ತೊಂದರೆ ಸರಿಪಡಿಸಲು ಚರ್ಚೆ: ಸರಕಾರಿ ಸೇವೆಯಿಂದ ನಿವೃತ್ತರಾದ ನೌಕರರು ತಮ್ಮ ನಿವೃತ್ತಿ ಜೀವನವನ್ನು ನಡೆಸುತ್ತಿದ್ದಾರೆ. ನಿವೃತ್ತ ನೌಕರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪ್ರತಿ ತಿಂಗಳು ಅವರಿಗೆ ಪಿಂಚಣಿ ಹಣ ಬ್ಯಾಂಕಿನಿಂದ ತಲುಪಿಸಲು ಇರುವ ತಾಂತ್ರಿಕ ತೊಂದರೆಗಳನ್ನು ಸರಿಪಡಿಸಲು ಬ್ಯಾಂಕಿನ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಅದೇ ರೀತಿ ಮುಂದಿನ ಸಾಲಿಗೆ ತಾಲೂಕು ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನಿವೃತ್ತ ಸರಕಾರಿ ನೌಕರರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಸುಖ-ಶಾಂತಿ ನೆಮ್ಮದಿಯಿಂದ ನಿವೃತ್ತ ಜೀವನ ಕೂಡಿರಲಿ ಎಂದು ಹಾರೈಸಿದರು.

ಜಿಲ್ಲಾನಿವೃತ್ತ ನೌಕರ ಸಂಘದ ಅಧ್ಯಕ್ಷ ಎಚ್‌.ಕೆ.ದ್ಯಾವೀರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲಾಸಂಘವು ನಿವೃತ್ತ ನೌಕರರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ಸರಕಾರದಿಂದ ಸಿಗುವ ಎಲ್ಲಾಸೌಲಭ್ಯಗಳನ್ನು ತಲುಪಿಸಲು ಪ್ರಯತ್ನ ಮಾಡಲಾಗುತ್ತಿದೆ. ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಕೇರಳ ರಾಜ್ಯಗಳಲ್ಲಿನಿವೃತ್ತ ನೌಕರರು ಮರಣ ಹೊಂದಿದ್ದಲ್ಲಿ ಅಲ್ಲಿನ ಸರಕಾರಗಳು 15,000 ರೂ. ನೀಡುತ್ತದೆ. ಅದೇ ರೀತಿ ರಾಜ್ಯ ನಿವೃತ್ತ ನೌಕರರಿಗೆ ಇಂತಹ ಯೋಜನೆಯನ್ನು ಜಾರಿಗೊಳಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಲಾಗುತ್ತಿದೆ ಎಂದರು.

ಅಭಿನಂದನೆ: ಇದೇ ಸಂದರ್ಭದಲ್ಲಿಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ 80 ವರ್ಷ ಪೂರೈಸಿದ 26 ಮಂದಿ ನಿವೃತ್ತ ನೌಕರರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿಜಿಲ್ಲಾನಿವೃತ್ತ ನೌಕರರ ಸಂಘದ ಜಿಲ್ಲಾಕಾರ್ಯದರ್ಶಿ ಜಿ.ಎ.ಜಯರಾಮರೆಡ್ಡಿ, ತಾಲೂಕು ಕಾರ್ಯದರ್ಶಿ ದಿಭಯ್ಯ, ಪಾಪಣ್ಣ. ಕೆ.ವಿ.ಕೃಷ್ಣಪ್ಪ, ಮುನಿಯಪ್ಪ, ಹನುಮಪ್ಪ, ಡಿ.ಎಲ್‌.ತಿಮ್ಮರಾಯಪ್ಪ, ಸುಬ್ರಹ್ಮಣ್ಯರೆಡ್ಡಿ, ಶ್ರೀನಿವಾಸರೆಡ್ಡಿ, ವಿಠ್ಠಲರಾವ್‌, ಗೋವಿಂದಪ್ಪ, ವೆಂಕಟಸ್ವಾಮಿ, ಎಂ.ವಿ.ವೆಂಕಟರಮಣಪ್ಪ, ಕೃಷ್ಣಮೂರ್ತಿ, ಮಲ್ಲೇಶ್‌, ಕಾಳಪ್ಪ, ಸೇರಿದಂತೆ ಇನ್ನಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ