ಆ್ಯಪ್ನಗರ

ಮೊಬೈಲ್‌ ಟವರ್‌ಗೆ ಪಾರಂಡಹಳ್ಳಿ ಗ್ರಾಮಸ್ಥರ ವಿರೋಧ

ಪಾರಂಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ಬ್ಲಾಕ್‌ನ ಜನವಸತಿ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೆ ಆನಧಿಕೃತವಾಗಿ ಖಾಸಗಿ ಕಂಪನಿಯೊಂದು ಮೊಬೈಲ್‌ ಟವರ್‌ ಅಳವಡಿಸುತ್ತಿದೆ. ಟವರ್‌ನಿಂದ ಹೊರ ಸೂಸುವ ರೇಡಿಯೆಷನ್‌ನಿಂದ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಮೊಬೈಲ್‌ ಟವರ್‌ ತೆರವುಗೊಳಿಸಬೇಕು ಎಂದು ಬಡಾವಣೆಯ ನಾಗರಿಕರು ಪ್ರತಿಭಟನೆ ನಡೆಸಿದರು.

Vijaya Karnataka 4 Jan 2019, 5:00 am
ಕೆಜಿಎಫ್‌ : ಪಾರಂಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ಬ್ಲಾಕ್‌ನ ಜನವಸತಿ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೆ ಆನಧಿಕೃತವಾಗಿ ಖಾಸಗಿ ಕಂಪನಿಯೊಂದು ಮೊಬೈಲ್‌ ಟವರ್‌ ಅಳವಡಿಸುತ್ತಿದೆ. ಟವರ್‌ನಿಂದ ಹೊರ ಸೂಸುವ ರೇಡಿಯೆಷನ್‌ನಿಂದ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಮೊಬೈಲ್‌ ಟವರ್‌ ತೆರವುಗೊಳಿಸಬೇಕು ಎಂದು ಬಡಾವಣೆಯ ನಾಗರಿಕರು ಪ್ರತಿಭಟನೆ ನಡೆಸಿದರು.
Vijaya Karnataka Web opposition of parandahalli villagers to the mobile tower
ಮೊಬೈಲ್‌ ಟವರ್‌ಗೆ ಪಾರಂಡಹಳ್ಳಿ ಗ್ರಾಮಸ್ಥರ ವಿರೋಧ


ಖಾಸಗಿ ಕಂಪನಿ ಮೊಬೈಲ್‌ ಟವರ್‌ ಅಳವಡಿಸುತ್ತಿದ್ದ ಸ್ಥಳದಲ್ಲಿ ಬಡಾವಣೆಯ ನಾಗರಿಕರು ಸೇರಿ ಆಕ್ಷೇಪ ವ್ಯಕ್ತಪಡಿಸಿ ತಕ್ಷ ಣ ಕಾಮಗಾರಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಡಾವಣೆಯ ಮುಖಂಡರಾದ ರಮೇಶ್‌ ಹಾಗೂ ಶಿವ ಜನಸತಿ ಪ್ರದೇಶದ 1300 ಮೀಟರ್‌ ಸುತ್ತಳತೆ ವ್ಯಾಪ್ತಿಯಲ್ಲಿ ಮೊಬೈಲ್‌ ಟವರ್‌ ಅಳವಡಿಸುವಂತಿಲ್ಲ ಎಂಬ ನಿಯಮ ಜಾರಿಯಲ್ಲಿದೆ. ಅದನ್ನು ಸ್ಪಷ್ಟವಾಗಿ ಉಲ್ಲಂಘನೆ ಮಾಡಿರುವ ಖಾಸಗಿ ಕಂಪನಿಯ ಅಧಿಕಾರಿಗಳು ಸ್ಥಳೀಯ ಗ್ರಾಮ ಪಂಚಾಯ್ತಿಗೆ ಮಾಹಿತಿಯನ್ನೂ ನೀಡಿಲ್ಲ ಮತ್ತು ಅನುಮತಿ ಪಡೆದಿಲ್ಲ ಎಂದರು.

ಮೊಬೈಲ್‌ ಟವರ್‌ ಅಳವಡಿಸಿದರೆ ಮಕ್ಕಳ ಹಾಗೂ ಗರ್ಭಿಣಿಯರ ಮೇಲೆ ದುಷ್ಪರಿಣಾಮಗಳು ಬೀರಲಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ಪ್ರದೇಶದಲ್ಲಿ 3 ಶಾಲೆಗಳಿದ್ದು ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ವಿದ್ಯಾಭ್ಯಾಸದ ಮೇಲೂ ಕೆಟ್ಟ ಪರಿಣಾಮ ಬೀರಲಿದೆ. ಟವರ್‌ ಬೇಡೆವೆಂದು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸ್ಥಳೀಯ ನಾಗರಿಕರ ಮೇಲೆ ದೌರ್ಜನ್ಯವೆಸಗಿರುವ ಕಂಪನಿ ಅಧಿಕಾರಿಗಳು ಟವರ್‌ ಅಳವಡಿಸಲು ಮುಂದಾಗಿದ್ದಾರೆ. ನಮ್ಮ ಪ್ರಾಣವನ್ನು ನೀಡುತ್ತೇವೆ, ಆದರೆ ಟವರ್‌ ಅಳವಡಿಸಲು ಅನುಮತಿ ನೀಡುವುದಿಲ್ಲ ಎಂದರು.

ಪಂಚಾಯಿತಿಯಿಂದ ಯಾವುದೇ ಅನುಮತಿ ಪಡೆಯದೆ ಟವರ್‌ ಅಳವಡಿಸುತ್ತಿರುವುದು ಕಾನೂನು ಉಲ್ಲಂಘನೆಯಾಗಿದ್ದು ತಕ್ಷ ಣ ಕಾಮಗಾರಿ ಸ್ಥಗಿತಗೊಳಿಸುವಂತೆ ಈಗಾಗಲೇ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೂ ಸೂಚನೆ ನೀಡಿದ್ದಾರೆ ಮತ್ತು ಬೆಸ್ಕಾಂ ಇಲಾಖೆಗೆ ವಿದ್ಯುತ್‌ ಸಂರ್ಪಕ ನೀಡದಿರುವಂತೆ ಪತ್ರ ಬರೆಯಲಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮೊಬೈಲ್‌ ಟವರ್‌ ಅಳವಡಿಸಲು ತಾವು ಸಮ್ಮತಿ ನೀಡುವುದಿಲ್ಲ. ಮುಂದಿನ ದಿನಗಳಲ್ಲಿ ಟವರ್‌ ತೆರವುಗೊಳಿಸುವಂತೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಸ್ಥಳಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಂತ್‌ ರೆಡ್ಡಿ ಭೇಟಿ ನೀಡಿದ್ದರು. ಸ್ಥಳದಲ್ಲಿ ಬಡಾವಣೆಯ ನಾಗರಿಕರು ಹಾಜರಿದ್ದರು.


ಕಚೇರಿಗೆ ಯಾವುದೇ ಮಾಹಿತಿಯನ್ನು ನೀಡದೆ ಟವರ್‌ ಅಳವಡಿಸುತ್ತಿರುವುದು ಕಾನೂನು ಬಾಹಿರವಾಗಿದೆ. ತಕ್ಷ ಣ ಕಾಮಗಾರಿ ಸ್ಥಗಿತಗೊಳಿಸುವಂತೆ ಈಗಾಗಲೇ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೂ ಸೂಚನೆ ನೀಡಿದ್ದಾರೆ ಮತ್ತು ಬೆಸ್ಕಾಂ ಇಲಾಖೆಗೆ ವಿದ್ಯುತ್‌ ಸಂರ್ಪಕ ನೀಡದಿರುವಂತೆ ಪತ್ರ ಬರೆಯಲಾಗಿದೆ. ಇಲ್ಲಿರುವ ಎಲ್ಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುವುದು.

-ಅನಂತ್‌ ರೆಡ್ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ