ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಶಂಕರಪ್ಪ ಸಲಹೆ
ಬಂಗಾರಪೇಟೆ : ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳನ್ನಾಗಿ ಪರಿಗಣಿಸಲಾಗುತ್ತಿದೆ. ಅವರ ಸಮಗ್ರ ಅಭಿವೃದ್ಧಿಯನ್ನು ಮರೆತಿದ್ದೇವೆ, ಆದರೆ ಈಗಿನ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಅಭ್ಯಾಸ ಮಾಡಿಸಬೇಕಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಶಂಕರಪ್ಪ ಹೇಳಿದರು.
ಅವರು ಪಟ್ಟಣದ ಆಶ್ಲೆ ಇಂಟರ್ನ್ಯಾಷನಲ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಏರ್ಪಡಿಸಿದ್ದ ತಾಲೂಕು ಮಟ್ಟದ ದ್ವಿತೀಯ ಸೋಪಾನ್ ಪರೀಕ್ಷಾ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳನ್ನು ಪಂಜರದ ಗಿಣಿಗಳನ್ನಾಗಿ ಮಾಡುತ್ತಿದ್ದೇವೆ. ಅವರಿಗೆ ಸ್ವಾತಂತ್ರ್ಯ ನೀಡುತ್ತಿಲ್ಲ, ಮಕ್ಕಳನ್ನು ವಿವಿಧ ಚಟುವಟಿಕೆ, ಕಾರ್ಯಕ್ರಮಗಳಲ್ಲಿ ಬೆರೆಯುವಂತೆ ಪೋಷಕರು, ಶಿಕ್ಷ ಕರು ಜಾಗೃತಿ ಮೂಡಿಸಬೇಕು. ಎಲ್ಲರೂ ಬೆರೆತು ಸೋಲು ಗೆಲುವು, ನೋವು ನಲಿವನ್ನು ಸಮನಾಗಿ ಹಂಚಿಕೊಳ್ಳುವ ಅವಕಾಶ ಕಲ್ಪಿಸಬೇಕು. ಇವೆಲ್ಲದಕ್ಕೂ ಸ್ಕೌಟ್ಸ್, ಗೈಡ್ಸ್ ಉತ್ತಮ ವೇದಿಕೆ ಎಂದರು.
ಶ್ರೀಜ್ಞಾನೇಶ್ವರಿ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಚಿಕ್ಕಮುನೇಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಶಾಲೆ ಮಕ್ಕಳು ಸಾಂಸ್ಕೃತಿಕ ಚಟುವಟಿಕೆ ನಡೆಸಿಕೊಟ್ಟರು. ಶಿಬಿರದಲ್ಲಿ ಪ್ರಥಮ ಚಿಕಿತ್ಸೆ, ಹಗ್ಗದ ಬಳಕೆ ಕೌಶಲ್ಯ, ಸಮವಸ್ತ್ರದ ಮಹತ್ವ, ಸಮುದಾಯ ಸೇವೆಯಲ್ಲಿ ಪಾಲ್ಗೊಳ್ಳುವಿಕೆ, ಅಂದಾಜು ಗಣನೆ ಸೇರಿದಂತೆ ವಿವಿಧ ಕೌಶಲ್ಯ ತರಬೇತಿ ನೀಡಲಾಯಿತು. 682 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಆಶ್ಲೆ ಇಂಟರ್ನ್ಯಾಷನಲ್ ಶಾಲೆ ಪ್ರಾಂಶುಪಾಲರಾದ ಬಿ.ಸಿ.ವೀಣಾರಾಣಿ, ಭಾರತ್ ಸ್ಕೌಟ್ಸ್, ಗೈಡ್ಸ್ ಜಿಲ್ಲಾ ಘಟಕ ಅಧ್ಯಕ್ಷ ಬಿಸಪ್ಪಗೌಡ, ಸ್ಕೌಟ್ಸ್ ಜಿಲ್ಲಾ ಆಯುಕ್ತ ಕೆ.ಆರ್.ಸುರೇಶ್, ಜಿಲ್ಲಾ ಜಂಟಿ ಕಾರ್ಯದರ್ಶಿ ಉಮಾದೇವಿ, ಜಿಲ್ಲಾ ಸಂಘಟನಾ ಆಯುಕ್ತ ಬಾಬು, ಶಿಬಿರದ ನಿರ್ಧೇಶಕ ನಂಜುಂಡಪ್ಪ, ತಾಲೂಕು ಘಟಕ ಕಾರ್ಯದರ್ಶಿ ಶಂಕರ್, ಖಜಾಂಚಿ ಬಳಿಗಾರ್, ಸ್ಕೌಟ್ಸ್ ನಾಯಕ ವೇಣುಗೋಪಾಲ್, ಸಂಪತ್ಕುಮಾರ್, ಗೈಡ್ಸ್ ನಾಯಕಿ ಲಕ್ಷ ್ಮಮ್ಮ ಭಾಗವಹಿಸಿದ್ದರು.
ಬಂಗಾರಪೇಟೆ : ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳನ್ನಾಗಿ ಪರಿಗಣಿಸಲಾಗುತ್ತಿದೆ. ಅವರ ಸಮಗ್ರ ಅಭಿವೃದ್ಧಿಯನ್ನು ಮರೆತಿದ್ದೇವೆ, ಆದರೆ ಈಗಿನ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಅಭ್ಯಾಸ ಮಾಡಿಸಬೇಕಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಶಂಕರಪ್ಪ ಹೇಳಿದರು.
ಅವರು ಪಟ್ಟಣದ ಆಶ್ಲೆ ಇಂಟರ್ನ್ಯಾಷನಲ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಏರ್ಪಡಿಸಿದ್ದ ತಾಲೂಕು ಮಟ್ಟದ ದ್ವಿತೀಯ ಸೋಪಾನ್ ಪರೀಕ್ಷಾ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳನ್ನು ಪಂಜರದ ಗಿಣಿಗಳನ್ನಾಗಿ ಮಾಡುತ್ತಿದ್ದೇವೆ. ಅವರಿಗೆ ಸ್ವಾತಂತ್ರ್ಯ ನೀಡುತ್ತಿಲ್ಲ, ಮಕ್ಕಳನ್ನು ವಿವಿಧ ಚಟುವಟಿಕೆ, ಕಾರ್ಯಕ್ರಮಗಳಲ್ಲಿ ಬೆರೆಯುವಂತೆ ಪೋಷಕರು, ಶಿಕ್ಷ ಕರು ಜಾಗೃತಿ ಮೂಡಿಸಬೇಕು. ಎಲ್ಲರೂ ಬೆರೆತು ಸೋಲು ಗೆಲುವು, ನೋವು ನಲಿವನ್ನು ಸಮನಾಗಿ ಹಂಚಿಕೊಳ್ಳುವ ಅವಕಾಶ ಕಲ್ಪಿಸಬೇಕು. ಇವೆಲ್ಲದಕ್ಕೂ ಸ್ಕೌಟ್ಸ್, ಗೈಡ್ಸ್ ಉತ್ತಮ ವೇದಿಕೆ ಎಂದರು.
ಶ್ರೀಜ್ಞಾನೇಶ್ವರಿ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಚಿಕ್ಕಮುನೇಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಶಾಲೆ ಮಕ್ಕಳು ಸಾಂಸ್ಕೃತಿಕ ಚಟುವಟಿಕೆ ನಡೆಸಿಕೊಟ್ಟರು. ಶಿಬಿರದಲ್ಲಿ ಪ್ರಥಮ ಚಿಕಿತ್ಸೆ, ಹಗ್ಗದ ಬಳಕೆ ಕೌಶಲ್ಯ, ಸಮವಸ್ತ್ರದ ಮಹತ್ವ, ಸಮುದಾಯ ಸೇವೆಯಲ್ಲಿ ಪಾಲ್ಗೊಳ್ಳುವಿಕೆ, ಅಂದಾಜು ಗಣನೆ ಸೇರಿದಂತೆ ವಿವಿಧ ಕೌಶಲ್ಯ ತರಬೇತಿ ನೀಡಲಾಯಿತು. 682 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಆಶ್ಲೆ ಇಂಟರ್ನ್ಯಾಷನಲ್ ಶಾಲೆ ಪ್ರಾಂಶುಪಾಲರಾದ ಬಿ.ಸಿ.ವೀಣಾರಾಣಿ, ಭಾರತ್ ಸ್ಕೌಟ್ಸ್, ಗೈಡ್ಸ್ ಜಿಲ್ಲಾ ಘಟಕ ಅಧ್ಯಕ್ಷ ಬಿಸಪ್ಪಗೌಡ, ಸ್ಕೌಟ್ಸ್ ಜಿಲ್ಲಾ ಆಯುಕ್ತ ಕೆ.ಆರ್.ಸುರೇಶ್, ಜಿಲ್ಲಾ ಜಂಟಿ ಕಾರ್ಯದರ್ಶಿ ಉಮಾದೇವಿ, ಜಿಲ್ಲಾ ಸಂಘಟನಾ ಆಯುಕ್ತ ಬಾಬು, ಶಿಬಿರದ ನಿರ್ಧೇಶಕ ನಂಜುಂಡಪ್ಪ, ತಾಲೂಕು ಘಟಕ ಕಾರ್ಯದರ್ಶಿ ಶಂಕರ್, ಖಜಾಂಚಿ ಬಳಿಗಾರ್, ಸ್ಕೌಟ್ಸ್ ನಾಯಕ ವೇಣುಗೋಪಾಲ್, ಸಂಪತ್ಕುಮಾರ್, ಗೈಡ್ಸ್ ನಾಯಕಿ ಲಕ್ಷ ್ಮಮ್ಮ ಭಾಗವಹಿಸಿದ್ದರು.