ಮುಳಬಾಗಲು : ಮಾರ್ಚ್ 21ರಿಂದ ಏಪ್ರಿಲ್ 4ರವರಿಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಬಿಇಒ ಕೆಂಪರಾಮ್ ತಿಳಿಸಿದರು.
ನಗರದ ಬಿಇಒ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1,640 ಬಾಲಕರು, 1,533 ಬಾಲಕಿಯರು ಸೇರಿದಂತೆ ಒಟ್ಟು 3,173 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ತಾಲೂಕಿನ ಮುಡಿಯನೂರು ನ್ಯಾಷನಲ್ ಪ್ರೌಢಶಾಲೆ, ಉತ್ತನೂರು ಎಂ.ವಿ.ಕೆ ಪ್ರೌಢಶಾಲೆ, ದೇವರಾಯ ಸಮುದ್ರ ಸರಕಾರಿ ಪ್ರೌಢಶಾಲೆ, ತಾಯಲೂರು ಸರಕಾರಿ ಪ್ರೌಢಶಾಲೆ, ನಂಗಲಿ ವರಸಿದ್ಧಿ ವಿನಾಯಕ ಪ್ರೌಢಶಾಲೆ, ಬೈರಕೂರು ನೆಹರು ಕೆನಡಿ ಪ್ರೌಢಶಾಲೆ, ಎನ್.ವಡ್ಡಹಳ್ಳಿ ಡೆಕ್ಕನ್ ಪ್ರೌಢಶಾಲೆ, ಮುಳಬಾಗಲು ನಗರದ ಅಮರಜ್ಯೋತಿ ಪ್ರೌಢಶಾಲೆ, ಸರಕಾರಿ ಬಾಲಕರ ಪ್ರೌಢಶಾಲೆ, ಸರಕಾರಿ ಬಾಲಕಿಯರ ಪ್ರೌಢಶಾಲೆ ಶಾರದ ಬಾಲಕಿಯರ ಪ್ರೌಢಶಾಲೆ ಸೇರಿದಂತೆ 11 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳ ಕಚೇರಿ ಹಾಗೂ ವರಾಂಡಾಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಪರೀಕ್ಷಾ ವೇಳೆ ವಿದ್ಯಾರ್ಥಿಗಳು ಹಾಗೂ ಮೇಲ್ವಿಚಾರಕರು ಮೊಬೈಲ್ ತರಬಾರದೆಂದು ಸೂಚಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು 200 ಮೀಟರ್ ಅಂತರದಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಈಗಾಗಲೇ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮುಂಭಾಗ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದು ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಟ್ಟಿಂಗ್ ಸ್ಕ್ವಾಡ್ಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷೆಗಳಲ್ಲಿ ಯಾವುದೇ ವಿದ್ಯಾರ್ಥಿ ಅವ್ಯವಹಾರದಲ್ಲಿ ತೊಡಗಿದ್ದರೆ ಕೂಡಲೇ ಅವರನ್ನು ಡಿಬಾರ್ ಮಾಡಲಾಗುವುದು ಎಂದು ತಿಳಿಸಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ನಗರದ ಬಿಇಒ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1,640 ಬಾಲಕರು, 1,533 ಬಾಲಕಿಯರು ಸೇರಿದಂತೆ ಒಟ್ಟು 3,173 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ತಾಲೂಕಿನ ಮುಡಿಯನೂರು ನ್ಯಾಷನಲ್ ಪ್ರೌಢಶಾಲೆ, ಉತ್ತನೂರು ಎಂ.ವಿ.ಕೆ ಪ್ರೌಢಶಾಲೆ, ದೇವರಾಯ ಸಮುದ್ರ ಸರಕಾರಿ ಪ್ರೌಢಶಾಲೆ, ತಾಯಲೂರು ಸರಕಾರಿ ಪ್ರೌಢಶಾಲೆ, ನಂಗಲಿ ವರಸಿದ್ಧಿ ವಿನಾಯಕ ಪ್ರೌಢಶಾಲೆ, ಬೈರಕೂರು ನೆಹರು ಕೆನಡಿ ಪ್ರೌಢಶಾಲೆ, ಎನ್.ವಡ್ಡಹಳ್ಳಿ ಡೆಕ್ಕನ್ ಪ್ರೌಢಶಾಲೆ, ಮುಳಬಾಗಲು ನಗರದ ಅಮರಜ್ಯೋತಿ ಪ್ರೌಢಶಾಲೆ, ಸರಕಾರಿ ಬಾಲಕರ ಪ್ರೌಢಶಾಲೆ, ಸರಕಾರಿ ಬಾಲಕಿಯರ ಪ್ರೌಢಶಾಲೆ ಶಾರದ ಬಾಲಕಿಯರ ಪ್ರೌಢಶಾಲೆ ಸೇರಿದಂತೆ 11 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳ ಕಚೇರಿ ಹಾಗೂ ವರಾಂಡಾಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಪರೀಕ್ಷಾ ವೇಳೆ ವಿದ್ಯಾರ್ಥಿಗಳು ಹಾಗೂ ಮೇಲ್ವಿಚಾರಕರು ಮೊಬೈಲ್ ತರಬಾರದೆಂದು ಸೂಚಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು 200 ಮೀಟರ್ ಅಂತರದಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಈಗಾಗಲೇ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮುಂಭಾಗ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದು ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಟ್ಟಿಂಗ್ ಸ್ಕ್ವಾಡ್ಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷೆಗಳಲ್ಲಿ ಯಾವುದೇ ವಿದ್ಯಾರ್ಥಿ ಅವ್ಯವಹಾರದಲ್ಲಿ ತೊಡಗಿದ್ದರೆ ಕೂಡಲೇ ಅವರನ್ನು ಡಿಬಾರ್ ಮಾಡಲಾಗುವುದು ಎಂದು ತಿಳಿಸಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.