ಮಾಲೂರು/ ಕೋಲಾರ: ಕೋರೊನಾ ವಾರಿಯರ್ಸ್ಗೆ ಕೋವಿಡ್ ಲಸಿಕೆ ಹಾಕಲು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲೂಕಿನ 6 ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಹಸೀಲ್ದಾರ್ ಎಂ. ಮಂಜುನಾಥ್ ತಿಳಿಸಿದರು.
ತಾಲೂಕಿನ ದೊಡ್ಡಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಹಾಕುವ ಬಗ್ಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೋವಿಡ್ ಸೋಂಕು ಕಳೆದ 10 ತಿಂಗಳಿಂದ ದೇಶಾದ್ಯಂತ ಜನತೆಯನ್ನು ತಲ್ಲಣಗೊಳಿಸಿತ್ತು. ಕೋರೊನಾ ಸೋಂಕಿಗೆ ತುರ್ತು ಲಸಿಕೆ ಹಾಕುವ ಬೃಹತ್ ಅಭಿಯಾನಕ್ಕೆ ಕೇಂದ್ರ ಸರಕಾರ ಮುಂದಾಗಿದ್ದು, ಮೊದಲನೇ ಹಂತದಲ್ಲಿ ಕೊರೊನಾ ವಾರಿಯರ್ಸ್ ಆಗಿ ದೇಶಾದ್ಯಂತ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್ ಲಸಿಕೆ ಹಾಕಲು ತುರ್ತು ಅನುಮತಿ ನೀಡಲಾಗಿದೆ.
ಮೈಸೂರಲ್ಲಿ 2ನೇ ಹಂತದ ಲಸಿಕೆ ಡ್ರೈ ರನ್ ಯಶಸ್ವಿ..! ತಾಲೀಮು ಪರಿಶೀಲಿಸಿದ ಡಿಸಿ ರೋಹಿಣಿ ಸಿಂಧೂರಿ
ಲಸಿಕೆ ಹಾಕುವ ತಾಲೀಮಿನಲ್ಲಿ ದೇಶಾದ್ಯಂತ ಆರೋಗ್ಯ ಇಲಾಖೆ ಮುಂದಾಗಿದೆ. ಆರೋಗ್ಯ ಕಾರ್ಯಕರ್ತರ ನಂತರ ಕೊರೊನಾ ರೋಗವನ್ನು ತಡೆಗಟ್ಟಲು ವಾರಿಯರ್ಸ್ಗಳಾಗಿ ಕಾರ್ಯನಿರ್ವಹಿಸಿದ ಕಂದಾಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ಪೌರಕಾರ್ಮಿಕರು ಸೇರಿದಂತೆ ಎಲ್ಲಾ ವಾರಿಯರ್ಸ್ಗಳಿಗೂ ಲಸಿಕೆ ನಿಡಲಾಗುವುದು. ಯಾವುದೇ ಆರೋಗ್ಯ ಕಾರ್ಯಕರ್ತರು ಲಸಿಕೆಯಿಂದ ಹೊರಗುಳಿಯಬಾರದು ಎಂಬುದು ಸರಕಾರದ ಉದ್ದೇಶವಾಗಿದೆ. ಹಾಗಾಗಿ ಪ್ರತಿಯೊಬ್ಬ ಆರೋಗ್ಯ ಕಾರ್ಯಕರ್ತರು ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆಯುವಂತೆ ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಸನ್ನ ಮಾತನಾಡಿ, ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸಿದ ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಕೊರೊನ ಲಸಿಕೆ ಹಾಕಲು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲೂಕಿನ ದೊಡ್ಡಶಿವಾರ, ತೊರ್ನಹಳ್ಳಿ, ಮಾಸ್ತಿ, ಟೇಕಲ್, ತೊರಲಕ್ಕಿ, ಲಕ್ಕೂರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ರಾಜ್ಯಕ್ಕೆ ಇನ್ನೆರಡು ದಿನಗಳಲ್ಲಿ ಕೋವಿಡ್ ಲಸಿಕೆ? ಕೌಂಟ್ಡೌನ್ ಶುರು
1300 ಮಂದಿ ಆರೋಗ್ಯ ಕಾರ್ಯಕರ್ತರು ಇದ್ದು, ಒಂದು ದಿನಕ್ಕೆ 100 ಮಂದಿಯಂತೆ 6 ಆರೋಗ್ಯ ಕೇಂದ್ರಗಳಲ್ಲಿ 600 ಮಂದಿಗೆ ಪ್ರತಿದಿನ ಲಸಿಕೆ ಹಾಕಲಾಗುವುದು. ಲಸಿಕೆ ಹಾಕಿಸಿಕೊಂಡವರು 30 ನಿಮಿಷಗಳ ಕಾಲ ನಿಗಾ ವಹಿಸಲಾಗುವುದು. ಲಸಿಕೆ ಹಾಕಿಸಿಕೊಂಡವರಲ್ಲಿ ಪ್ರತಿಕ್ರಿಯೆ ವ್ಯಕ್ತವಾದಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗುವುದು. ಬೆಳಗ್ಗೆ 8ರಿಂದ ಸಂಜೆ 8 ರವರಗೆ ಲಸಿಕೆಯನ್ನು ಹಾಕಲಾಗುವುದು, ಕೋವಿನ್ ಆಪ್ನಲ್ಲಿ ಫಲಾನುಭವಿಯ ಹೆಸರು ನೋಂದಣಿ ಪರಿಶೀಲನೆ ಮಾಡಿ ವ್ಯಾಕ್ಸಿನ್ ನೀಡಿದ ನಂತರ ಆನ್ಲೈನ್ ಮೂಲಕ ಮಾಹಿತಿಯನ್ನು ತುಂಬಲಾಗುವುದು. ತಾಲೂಕಿನಲ್ಲಿಆರೋಗ್ಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲ ವಾರಿಯರ್ಸ್ ತಪ್ಪದೆ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಪಂ ಇಒ ಕೃಷ್ಣಪ್ಪ, ಪಿಡಿಒ ರಾಮಕೃಷ್ಣರೆಡ್ಡಿ, ದೊಡ್ಡಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಜರಿದ್ದರು.
ತಾಲೂಕಿನ ದೊಡ್ಡಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಹಾಕುವ ಬಗ್ಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೋವಿಡ್ ಸೋಂಕು ಕಳೆದ 10 ತಿಂಗಳಿಂದ ದೇಶಾದ್ಯಂತ ಜನತೆಯನ್ನು ತಲ್ಲಣಗೊಳಿಸಿತ್ತು. ಕೋರೊನಾ ಸೋಂಕಿಗೆ ತುರ್ತು ಲಸಿಕೆ ಹಾಕುವ ಬೃಹತ್ ಅಭಿಯಾನಕ್ಕೆ ಕೇಂದ್ರ ಸರಕಾರ ಮುಂದಾಗಿದ್ದು, ಮೊದಲನೇ ಹಂತದಲ್ಲಿ ಕೊರೊನಾ ವಾರಿಯರ್ಸ್ ಆಗಿ ದೇಶಾದ್ಯಂತ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್ ಲಸಿಕೆ ಹಾಕಲು ತುರ್ತು ಅನುಮತಿ ನೀಡಲಾಗಿದೆ.
ಮೈಸೂರಲ್ಲಿ 2ನೇ ಹಂತದ ಲಸಿಕೆ ಡ್ರೈ ರನ್ ಯಶಸ್ವಿ..! ತಾಲೀಮು ಪರಿಶೀಲಿಸಿದ ಡಿಸಿ ರೋಹಿಣಿ ಸಿಂಧೂರಿ
ಲಸಿಕೆ ಹಾಕುವ ತಾಲೀಮಿನಲ್ಲಿ ದೇಶಾದ್ಯಂತ ಆರೋಗ್ಯ ಇಲಾಖೆ ಮುಂದಾಗಿದೆ. ಆರೋಗ್ಯ ಕಾರ್ಯಕರ್ತರ ನಂತರ ಕೊರೊನಾ ರೋಗವನ್ನು ತಡೆಗಟ್ಟಲು ವಾರಿಯರ್ಸ್ಗಳಾಗಿ ಕಾರ್ಯನಿರ್ವಹಿಸಿದ ಕಂದಾಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ಪೌರಕಾರ್ಮಿಕರು ಸೇರಿದಂತೆ ಎಲ್ಲಾ ವಾರಿಯರ್ಸ್ಗಳಿಗೂ ಲಸಿಕೆ ನಿಡಲಾಗುವುದು. ಯಾವುದೇ ಆರೋಗ್ಯ ಕಾರ್ಯಕರ್ತರು ಲಸಿಕೆಯಿಂದ ಹೊರಗುಳಿಯಬಾರದು ಎಂಬುದು ಸರಕಾರದ ಉದ್ದೇಶವಾಗಿದೆ. ಹಾಗಾಗಿ ಪ್ರತಿಯೊಬ್ಬ ಆರೋಗ್ಯ ಕಾರ್ಯಕರ್ತರು ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆಯುವಂತೆ ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಸನ್ನ ಮಾತನಾಡಿ, ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸಿದ ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಕೊರೊನ ಲಸಿಕೆ ಹಾಕಲು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲೂಕಿನ ದೊಡ್ಡಶಿವಾರ, ತೊರ್ನಹಳ್ಳಿ, ಮಾಸ್ತಿ, ಟೇಕಲ್, ತೊರಲಕ್ಕಿ, ಲಕ್ಕೂರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ರಾಜ್ಯಕ್ಕೆ ಇನ್ನೆರಡು ದಿನಗಳಲ್ಲಿ ಕೋವಿಡ್ ಲಸಿಕೆ? ಕೌಂಟ್ಡೌನ್ ಶುರು
1300 ಮಂದಿ ಆರೋಗ್ಯ ಕಾರ್ಯಕರ್ತರು ಇದ್ದು, ಒಂದು ದಿನಕ್ಕೆ 100 ಮಂದಿಯಂತೆ 6 ಆರೋಗ್ಯ ಕೇಂದ್ರಗಳಲ್ಲಿ 600 ಮಂದಿಗೆ ಪ್ರತಿದಿನ ಲಸಿಕೆ ಹಾಕಲಾಗುವುದು. ಲಸಿಕೆ ಹಾಕಿಸಿಕೊಂಡವರು 30 ನಿಮಿಷಗಳ ಕಾಲ ನಿಗಾ ವಹಿಸಲಾಗುವುದು. ಲಸಿಕೆ ಹಾಕಿಸಿಕೊಂಡವರಲ್ಲಿ ಪ್ರತಿಕ್ರಿಯೆ ವ್ಯಕ್ತವಾದಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗುವುದು. ಬೆಳಗ್ಗೆ 8ರಿಂದ ಸಂಜೆ 8 ರವರಗೆ ಲಸಿಕೆಯನ್ನು ಹಾಕಲಾಗುವುದು, ಕೋವಿನ್ ಆಪ್ನಲ್ಲಿ ಫಲಾನುಭವಿಯ ಹೆಸರು ನೋಂದಣಿ ಪರಿಶೀಲನೆ ಮಾಡಿ ವ್ಯಾಕ್ಸಿನ್ ನೀಡಿದ ನಂತರ ಆನ್ಲೈನ್ ಮೂಲಕ ಮಾಹಿತಿಯನ್ನು ತುಂಬಲಾಗುವುದು. ತಾಲೂಕಿನಲ್ಲಿಆರೋಗ್ಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲ ವಾರಿಯರ್ಸ್ ತಪ್ಪದೆ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಪಂ ಇಒ ಕೃಷ್ಣಪ್ಪ, ಪಿಡಿಒ ರಾಮಕೃಷ್ಣರೆಡ್ಡಿ, ದೊಡ್ಡಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಜರಿದ್ದರು.