ಆ್ಯಪ್ನಗರ

ಮಳೆಯಿಂದ ಹಾನಿ; 8.8 ಕೋಟಿ ಪರಿಹಾರಕ್ಕೆ ವರದಿ

ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಒಟ್ಟಾರೆ 2132 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, 8.8ಕೋಟಿರೂ ನಷ್ಟ ಪರಿಹಾರಕ್ಕಾಗಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಡಿಸಿ ಜೆ.ಮಂಜುನಾಥ್‌ ತಿಳಿಸಿದರು.

Vijaya Karnataka 25 Apr 2019, 5:00 am
ಕೋಲಾರ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಒಟ್ಟಾರೆ 2132 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, 8.8ಕೋಟಿರೂ ನಷ್ಟ ಪರಿಹಾರಕ್ಕಾಗಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಡಿಸಿ ಜೆ.ಮಂಜುನಾಥ್‌ ತಿಳಿಸಿದರು.
Vijaya Karnataka Web rain havoc dc sends report
ಮಳೆಯಿಂದ ಹಾನಿ; 8.8 ಕೋಟಿ ಪರಿಹಾರಕ್ಕೆ ವರದಿ


ನಗರದ ತಮ್ಮ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಏ.17 ರಿಂದ ಈವರೆಗೆ ಅಕಾಲಿಕ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗಿರುವ ಹಿನ್ನಲೆ ತೋಟಗಾರಿಕೆಯ ಬೆಳೆಗಳಿಗೆ ಭಾರಿ ಹಾನಿಯಾಗಿದೆ.

ಶ್ರೀನಿವಾಸಪುರ ತಾಲೂಕಿನಲ್ಲಿ 1952 ಹೆಕ್ಟರ್‌ ಮಾವು ಸೇರಿದಂತೆ ಇಡೀ ಜಿಲ್ಲೆಯಲ್ಲಿ 2132 ಹೆಕ್ಟರ್‌ ಪ್ರದೇಶದಲ್ಲಿ ಮಾವು, ಬಾಳೆ, ಪಪ್ಪಾಯ, ಬಿನ್ಸ್‌, ಟೊಮೆಟೊ ಸೇರಿದಂತೆ ವಿವಿಧ ಬೆಳೆ ಹಾನಿಯಾಗಿದ್ದು, ಸುಮಾರು 8.8 ಕೋಟಿ ನಷ್ಟವಾಗಿದೆ ಎಂದು ವಿವರಿಸಿದರು.

ಕೆಜಿಎಫ್‌. ಸೇರಿದಂತೆ ವಿವಿದಡೆ ಹಳೆ ಮನೆಗಳು ಕುಸಿದಿರುವ ಹಾಗೂ ಮೇಲ್ಚಾವಣೆಯ ಶೀಟ್‌ಗಳು ಹಾರಿ ಹೋಗಿರುವುದು ಕಂದಾಯ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸಮೀಕ್ಷೆ ವರದಿಗಳು ಬಂದಿವೆ ಅವುಗಳ ಅಂದಾಜು ನಷ್ಟಗಳ ಅಂಕಿ ಅಂಶಗಳನ್ನು ಪೂರ್ಣಗೊಂಡ ನಂತರ ತಿಳಿಸಲಾಗುವುದು ಎಂದು ಹೇಳಿದ ಅವರು, ಸದಕ್ಕೆ 8.8ಕೋಟಿರೂಗಳ ನಷ್ಟ ಪರಿಹಾರಕ್ಕೆ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ