ಆ್ಯಪ್ನಗರ

ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ

ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.

Vijaya Karnataka 8 May 2019, 5:00 am
ಕೋಲಾರ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
Vijaya Karnataka Web rain in several parts of kolar
ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ


ಕೆಲದಿನದಿಂದ ಬಿಡುವು ನೀಡಿದ್ದ ಮಳೆ ಮಂಗಳವಾರ ದಿಡೀರ್‌ ಸುರಿಯಲಾರಂಭಿಸಿತು. ಜಿಲ್ಲೆಯ ಅನೇಕ ಕಡೆ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಮರಗಳು ಧರಗುರುಳಿವೆ.

ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಸಂಜೆ 4ರ ವೇಳೆಗೆ ತುಂತುರು ಮಳೆ ಸುರಿಯಲಾರಂಭಿಸಿತು. ಬಳಿಕ ಧಾರಾಕಾರ ಮಳೆಯಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಕೆಲವೆಡೆ ಮರಗಳು ಧರೆಗುರುಳಿ ಅವಾಂತರ ಸೃಷ್ಟಿಸಿತು.

ನಗರದಲ್ಲೂ ಗುಡುಗು ಸಹಿತ ಧಾರಾಕಾರ ಮಳೆ ಸುಮಾರು ಒಂದುಗಂಟೆಗೂ ಹೆಚ್ಚುಕಾಲ ಸುರಿಯಿತು. ಇದರಿಂದ ಜನಜೀವನ ಅಸ್ತವ್ಯವಸ್ತಗೊಂಡು, ವಾಹನ ಸಂಚಾರಕ್ಕೂ ತೊಂದರೆಯಾಯಿತು.

ಕೋಲಾರ ನಗರ ಮಾತ್ರವಲ್ಲದೆ, ಮಾಲೂರಿನಲ್ಲಿ ಆಲಿಕಲ್ಲು ಸಹಿತ ಮಳೆಯು ಸ್ಥಳೀಯರನ್ನು ಬೆಚ್ಚಿಬೀಳಿಸುವಂತೆ ಮಾಡಿತು. ಮಾಲೂರು ಪಟ್ಟಣ ಮಾತ್ರವಲ್ಲದೆ, ತಾಲೂಕಿನ ಹಲವೆಡೆ ಉತ್ತಮ ಮಳೆಯಾಯಿತು. ಮುಳಬಾಗಿಲಿನಲ್ಲೂ ಮಳೆ ಸುರಿದಿದೆ.

ಬೇತಮಂಗಲ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಬಿರುಗಾಳಿ ಮಳೆಗೆ ಮರ ಧರೆಗುರುಳಿದೆ. ತೆಂಗಿನ ಮರವೊಂದು ಮನೆಯ ಮೇಲೆ ಬಿದ್ದಿದೆ. ವಿದ್ಯುತ್‌ ಕಂಬವೂ ಕೆಲವೆಡೆ ಧರೆಗುರುಳಿದೆ.

ಕೆಲ ದಿನದ ಹಿಂದೆಯಷ್ಟೆ ಸುರಿದ ಧಾರಾಕಾರ ಮಳೆಯಿಂದ ಅನೇಕ ಅವಾಂತರ ಸೃಷ್ಟಿಯಾಗಿತ್ತು. ಮಾವು ಮತ್ತಿತರ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೀಡಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ