ಆ್ಯಪ್ನಗರ

ರಾಜ ಕಾಲುವೆ ಒತ್ತುವರಿ: ಪ್ರತಿಭಟನೆ

ಪಟ್ಟಣದ ಹೊರವಲಯದ ಹುಣಸನಹಳ್ಳಿ ಕೆರೆಯಿಂದ ಬರುವ ರಾಜಕಾಲುವೆಯನ್ನು ಖಾಸಗಿ ಶಿಕ್ಷ ಣ ಸಂಸ್ಥೆಯೊಂದು ಒತ್ತುವರಿ ಮಾಡಿ ಕಟ್ಟಡ ಕಟ್ಟಿದರೂ ಕಂದಾಯ ಇಲಾಖೆ ನಿರ್ಲಕ್ಷ ವಹಿಸಿದೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿದರು.

Vijaya Karnataka 5 Feb 2019, 5:00 am
ಬಂಗಾರಪೇಟೆ: ಪಟ್ಟಣದ ಹೊರವಲಯದ ಹುಣಸನಹಳ್ಳಿ ಕೆರೆಯಿಂದ ಬರುವ ರಾಜಕಾಲುವೆಯನ್ನು ಖಾಸಗಿ ಶಿಕ್ಷ ಣ ಸಂಸ್ಥೆಯೊಂದು ಒತ್ತುವರಿ ಮಾಡಿ ಕಟ್ಟಡ ಕಟ್ಟಿದರೂ ಕಂದಾಯ ಇಲಾಖೆ ನಿರ್ಲಕ್ಷ ವಹಿಸಿದೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿದರು.
Vijaya Karnataka Web raja canal encroachment protest
ರಾಜ ಕಾಲುವೆ ಒತ್ತುವರಿ: ಪ್ರತಿಭಟನೆ


ಸರ್ವೆ ನಂಬರ್‌ 107 ರಲ್ಲಿ ಬರುವ ಹುಣಸನಹಳ್ಳಿ ಕೆರೆ ರಾಜಕಾಲುವೆ ಒತ್ತುವರಿ ಬಗ್ಗೆ ಪ್ರಶ್ನಿಸಬೇಕಾದ ಕಂದಾಯ ಅಧಿಕಾರಿಗಳು ಖಾಸಗಿ ಶಿಕ್ಷ ಣ ಸಂಸ್ಥೆಗೆ ಅಕ್ರಮವಾಗಿ ದಾಖಲೆಗಳನ್ನು ತಿದ್ದುಪಡಿ ಮಾಡಿ ಖಾತೆ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಹಳೆಯ ಭೂ ದಾಖಲೆಗಳನ್ನು ನೋಡಿದರೆ ನೂರಾರು ಅಡಿಯಷ್ಟು ಸರಕಾರಿ ರಾಜಕಾಲುವೆಯನ್ನು ಕಬಳಿಸಿ ಕಟ್ಟಡ ಕಟ್ಟಿರುವುದು ಕಂಡು ಬಂದಿದ್ದು ಕೂಡಲೇ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿ ಒತ್ತವರಿಯನ್ನು ತೆರವುಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜಮೀನು ಮಾಫಿಯಾ: ತಾಲೂಕಿನ ಡಿ.ಕೆ.ಹಳ್ಳಿ ಸರ್ವೆ ನಂಬರ್‌ 54 57 ರಲ್ಲಿ ಸಾಕಷ್ಟು ಸರಕಾರಿ ಜಮೀನು ಒತ್ತುವರಿಯಾಗಿದೆ. ಕೆರೆ ಅಂಗಳ, ರಾಜಕಾಲುವೆಗಳಲ್ಲಿ ಕೃಷಿ ಹೊಂಡಗಳನ್ನು ಮಾಡಿ ಸರಕಾರಿ ಜಮೀನು ಭೂಮಾಪಿಯಾದವರು ಕಬಳಿಸಿದ್ದಾರೆ. ಕೂಡಲೇ ತಹಸೀಲ್ದಾರ್‌ ಗಮನಹರಿಸಿ ಸರಕಾರಿ ಜಮೀನು ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಬೇಸಿಗೆ ಆರಂಭವಾಗಿದ್ದು ರೈತರಿಗೆ ಬೆಸ್ಕಾಂ ಇಲಾಖೆ ಹೊಸ ವಿದ್ಯುತ್‌ ಸಂಪರ್ಕ ನೀಡಲು ಸತಾಯಿಸುತ್ತಿದೆ. ಟ್ರಾನ್ಸ್‌ಫಾರ್ಮರ್‌ ಸೇರಿದಂತೆ ಯಾವುದೇ ವಿದ್ಯುತ್‌ ಪರಿಕರಗಳನ್ನು ಅಳವಡಿಸಲು ರೈತರನ್ನು ಸುಲಿಗೆ ಮಾಡುತ್ತಿರುವ ಬೆಸ್ಕಾಂ ಅಧಿಕಾರಿಗಳು ರೈತರ ಹೆಸರನ್ನು ದುರುಪಯೋಗಪಡಿಸಿಕೊಳ್ಳುವವರಿಗೆ ಪಂಪ್‌ಸೆಟ್‌ಗಳಿಗೆ 24 ಗಂಟೆ ವಿದ್ಯುತ್‌ ಸರಬರಾಜು ಮಾಡುವ ಮೂಲಕ ವಾಣಿಜ್ಯೋದ್ಯಮಿಗಳಿಗೂ ಸಹಾಯ ಮಾಡಿದ್ದು ಕೂಡಲೇ ತನಿಖೆ ಮಾಡಿಸಿ ಇಲ್ಲವೇ ಬೆಸ್ಕಾಂ ಅಧಿಕಾರಿಗಳ ಸಭೆ ಕರೆದು ರೈತ ಮುಖಂಡರೊಂದಿಗೆ ಚರ್ಚೆ ನಡೆಸಿ ಬೆಸ್ಕಾಂ ಅಧಿಕಾರಿಗಳ ರೈತ ವಿರೋಧಿ ಧೋರಣೆ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಬಂದ ತಹಸೀಲ್ದಾರ್‌ ಚಂದ್ರಮೌಳೇಶ್ವರ ಮನವಿ ಸ್ವೀಕರಿಸಿ ಕ್ರಮದ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಮೇಗೌಡ, ಲಕ್ಷ ಣ್‌, ರವಿ, ವೆಂಕಟೇಶಪ್ಪ, ಶ್ರೀನಿವಾಸ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ