ಆ್ಯಪ್ನಗರ

ಕಾಲಿಗೆ ಗುಂಡಿಕ್ಕಿ ಅತ್ಯಾಚಾರಿ ಆರೋಪಿ ಬಂಧನ

ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿಯ ಕಾಲಿಗೆ ರಾಬರ್ಟ್‌ಸನ್‌ಪೇಟೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.

Vijaya Karnataka 12 Oct 2019, 2:18 pm
ಕೆಜಿಎಫ್‌: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿಯ ಕಾಲಿಗೆ ರಾಬರ್ಟ್‌ಸನ್‌ಪೇಟೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
Vijaya Karnataka Web rape accused arrested
ಕಾಲಿಗೆ ಗುಂಡಿಕ್ಕಿ ಅತ್ಯಾಚಾರಿ ಆರೋಪಿ ಬಂಧನ


ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸ್‌ ಪೇದೆಯೊಬ್ಬರು ತೀವ್ರವಾಗಿ ಗಾಯಗೊಂಡು ಕೆಜಿಎಫ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ.

ಊರಿಗಾಂಪೇಟೆಯ ಮಂಜುನಾಥ್‌ ನಗರದ ಜನತಾ ಬಡಾವಣೆಯ ನಿವಾಸಿಯಾದ ಕುಟ್ಟಿ ಅಲಿಯಾಸ್‌ ತಮಿಳುಅರಸನ್‌ ಎಂಬುವವನು ಇದೇ ಬಡಾವಣೆಯ ಎಂಟು ವರ್ಷದ ಬಾಲಕಿಯೊಬ್ಬಳ ಮೇಲೆ ಗುರುವಾರ ರಾತ್ರಿ ಅತ್ಯಾಚಾರವೆಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತಡವಾಗಿ ಬೆಳಿಕಿಗೆ ಬಂದ ಪ್ರಕರಣ: ಶುಕ್ರವಾರ ಬೆಳಗ್ಗೆ ಬಾಲಕಿ ತೀವ್ರವಾಗಿ ಬಳಲುತ್ತಿದ್ದ ಹಿನ್ನೆಲೆಯಲ್ಲಿಪೋಷಕರು ಬಾಲಕಿಯನ್ನು ವಿಚಾರಿಸಿದಾಗ ತಾಯಿ ಬಳಿ ನಡೆದ ಘಟನೆಯನ್ನು ಬಾಲಕಿ ತಿಳಿಸಿದ್ದಾಳೆ.

ನಂತರ ಪೋಷಕರು ಕೂಡಲೇ ಕೆಜಿಎಫ್‌ನ ಸಾರ್ವಜನಿಕ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದಾಗ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ. ತಾಯಿ ನೀಡಿರುವ ದೂರಿನ ಮೇರೆಗೆ ರಾಬರ್ಟ್‌ಸನ್‌ಪೇಟೆ ಪೊಲೀಸರು ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಿದ್ದಾರೆ.

ಎರಡು ಸುತ್ತು ಗುಂಡು: ಹಿಡಿಯಲು ಹೋದ ಪೊಲೀಸರ ಮೇಲೆ ಆರೋಪಿ ಕುಟ್ಟಿ ಏಕಾಏಕಿ ನಡೆಸಿದ ಕಲ್ಲಿನ ದಾಳಿಯಲ್ಲಿಪೊಲೀಸ್‌ ಪೇದೆ ಮುನಿಸ್ವಾಮಿ ತೀವ್ರವಾಗಿ ಗಾಯಗೊಂಡಿದ್ದಾರೆ. ಇದೇ ವೇಳೆ ಆರೋಪಿ ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸಿದ್ದು ಪೊಲೀಸರು ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಒಂದು ಗುಂಡು ಕಾಲಿಗೆ ತಗುಲಿ ಆರೋಪಿ ಕುಟ್ಟಿ ಕುಸಿದು ಬಿದ್ದಿದ್ದಾನೆ.

ಗುಂಡೇಟಿನಿಂದ ಗಾಯಗೊಂಡ ಆರೋಪಿಯನ್ನು ಹಿಡಿದು ಕೆಜಿಎಫ್‌ ಸಾರ್ವಜನಿಕ ಆಸ್ಪತ್ರೆಯಲ್ಲಿಚಿಕಿತ್ಸೆ ಕೊಡಿಸಿದ್ದಾರೆ. ವೈದ್ಯರು ಪರೀಕ್ಷೆ ನಡೆಸಿದ ನಂತರ ಆರೋಪಿ ಕುಟ್ಟಿ ಪ್ರಾಣಾಪಾಯದಿಂದ ಪರಾಗಿದ್ದಾನೆಂದು ವೈದ್ಯ ಡಾ.ಶಿವಕುಮಾರ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ