ಆ್ಯಪ್ನಗರ

ರೈತರ ಸಭೆ ನಡೆಸಲು ಆಗ್ರಹಿಸಿ ಡಿಸಿಎಂಗೆ ಮನವಿ

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ರೈತರ ಸಭೆ ನಡೆಸಬೇಕು. ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದ ವತಿಯಿಂದ ಡಿಸಿಎಂ ಪರಮೇಶ್ವರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 2 Jul 2019, 4:18 pm
ಕೋಲಾರ : ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ರೈತರ ಸಭೆ ನಡೆಸಬೇಕು. ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದ ವತಿಯಿಂದ ಡಿಸಿಎಂ ಪರಮೇಶ್ವರ್‌ ಅವರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web request dcm to hold farmers meeting
ರೈತರ ಸಭೆ ನಡೆಸಲು ಆಗ್ರಹಿಸಿ ಡಿಸಿಎಂಗೆ ಮನವಿ


ಜಿಲ್ಲೆಯ ಕೋಟಿಲಿಂಗೇಶ್ವರ ದೇವಾಲಯಕ್ಕೆ ಆಗಮಿಸಿದ್ದ ವೇಳೆ ಮನವಿ ಸಲ್ಲಿಸಿದ ಸಂಘದ ಮುಖಂಡರು, ರೈತ ವಿರೋಧಿಧಿಯಾದ ಭೂ ಸ್ವಾಧಿಧೀನ ತಿದ್ದುಪಡಿ ಕಾಯಿದೆ ಹಿಂಪಡೆಯಬೇಕು. ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕೆರೆಗಳನ್ನು ಸಂರಕ್ಷ ಣೆ ಮಾಡಬೇಕು. ರೈತರ ಒಡನಾಡಿಯಾದ ಮಾರುಕಟ್ಟೆ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ನ್ಯಾಯಕ್ಕಾಗಿ ಮೊರೆ ಹೋದ ಕಾರ್ಮಿಕರು ಮತ್ತು ರೈತರ ವಿರುದ್ಧ ಲಾಠಿ ಚಾರ್ಜ ಹಾಗೂ ಉಚಿತ ಅಕ್ಕಿಗೆ ರಾಜ್ಯದ ಜನರನ್ನು ಹೋಲಿಕೆ ಮಾಡಿ ಅವಮಾನಿಸಿದ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಕ್ಷ ಮೆ ಕೇಳಬೇಕೆಂದು ಆಗ್ರಹಿಸಿದರು.

ಸಂಘಟನೆ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಬಯಲು ಸೀಮೆಯ ಜನರ ಜತೆ ಒಂದು ದಿನ ಸಭೆ ನಡೆಸುವ ಜತೆಗೆ, ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ಬರ ನಿರ್ವಹಣೆಗೆ 3 ಸಾವಿರ ಕೋಟಿ ಅನುದಾನ ನೀಡಬೇಕು. ಅಲ್ಲದೆ, ವಿಶೇಷ ಸಮಸ್ಯೆಗಳ ಜಿಲ್ಲೆ ಎಂದು ಪರಿಗಣಿಸಬೇಕು. ಪ್ರತಿ ಪಂಚಾಯಿತಿಗೊಂದು ಗೋಶಾಲೆ ತೆರೆಯಬೇಕು. ಬರಗಾಲಕ್ಕೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಬೇಕು. ಬೆಳೆ ನಷ್ಟ ಪರಿಹಾರವನ್ನು ಕೂಡಲೇ ರೈತರ ಖಾತೆಗಳಿಗೆ ಜಮಾ ಮಾಡಬೇಕೆಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್‌ ಶ್ರೀನಿವಾಸ್‌, ಉದಯ್‌ಕುಮಾರ್‌, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಎ.ನಳಿನಿ, ಮುಖಂಡರಾದ ಕ್ಯಾಸಂಬಳ್ಳಿ ಪ್ರತಾಪ್‌, ಮಂಗಸಂದ್ರ ನಾಗೇಶ್‌, ನಲ್ಲಾಂಡಹಳ್ಳಿ ಕೇಶವ, ಶಂಕರ್‌, ಪುತ್ತೇರಿ ರಾಜು, ಬೇತಮಂಗಲ ಮಂಜುನಾಥ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ