ಆ್ಯಪ್ನಗರ

ಜಿಲ್ಲೆಯಲ್ಲಿ ಮೇ 29ರಿಂದ ಸರಕಾರಿ ಶಾಲೆಗಳ ಆರಂಭ

ಮೇ 29ರ ಬುಧವಾರದಿಂದ ಜಿಲ್ಲೆಯಲ್ಲಿನ ಸರಕಾರಿ ಶಾಲೆಗಳು ಪ್ರಸಕ್ತ ಶೈಕ್ಷ ಣಿಕ ಸಾಲನ್ನು ಆರಂಭಿಸುತ್ತಿದ್ದು, ಬೇಸಿಗೆಯ ರಜೆಯ ಮಜಾ ಮುಗಿಸಿ ಚಿಣ್ಣರು ಶಾಲೆಯತ್ತ ಹೊರಡಲಿದ್ದಾರೆ. ಮಕ್ಕಳನ್ನು ಸ್ವಾಗತಿಸಲು ಶಿಕ್ಷ ಣ ಇಲಾಖೆಯು ಹಬ್ಬದಂತೆ ಶಾಲಾ ಪ್ರಾರಂಭೋತ್ಸವವನ್ನು ನಡೆಸಲು ಸಿದ್ಧತೆಗಳಿಗೆ ಮುಂದಾಗಿದೆ.

Vijaya Karnataka 27 May 2019, 5:00 am
ಕೋಲಾರ: ಮೇ 29ರ ಬುಧವಾರದಿಂದ ಜಿಲ್ಲೆಯಲ್ಲಿನ ಸರಕಾರಿ ಶಾಲೆಗಳು ಪ್ರಸಕ್ತ ಶೈಕ್ಷ ಣಿಕ ಸಾಲನ್ನು ಆರಂಭಿಸುತ್ತಿದ್ದು, ಬೇಸಿಗೆಯ ರಜೆಯ ಮಜಾ ಮುಗಿಸಿ ಚಿಣ್ಣರು ಶಾಲೆಯತ್ತ ಹೊರಡಲಿದ್ದಾರೆ. ಮಕ್ಕಳನ್ನು ಸ್ವಾಗತಿಸಲು ಶಿಕ್ಷ ಣ ಇಲಾಖೆಯು ಹಬ್ಬದಂತೆ ಶಾಲಾ ಪ್ರಾರಂಭೋತ್ಸವವನ್ನು ನಡೆಸಲು ಸಿದ್ಧತೆಗಳಿಗೆ ಮುಂದಾಗಿದೆ.
Vijaya Karnataka Web schools will reopens from may 29th
ಜಿಲ್ಲೆಯಲ್ಲಿ ಮೇ 29ರಿಂದ ಸರಕಾರಿ ಶಾಲೆಗಳ ಆರಂಭ


ಕಲಿಕೆ, ಪರೀಕ್ಷೆ, ಫಲಿತಾಂಶದ ನಂತರ ಸಿಕ್ಕ ವಾರ್ಷಿಕ ಬೇಸಿಗೆ ರಜೆ ಮುಗಿಸಿ ಇದೀಗ ಶಾಲೆಗಳತ್ತ ಮುಖ ಮಾಡಿರುವ ಚಿಣ್ಣರು, ಹೊಸ ಪಠ್ಯಪುಸ್ತಕಗಳನ್ನು ಪಡೆದು ಮತ್ತೆ ಕಲಿಕೆಯಲ್ಲಿ ಮಗ್ನರಾಗಲು ಸಿದ್ಧರಾಗಿದ್ದಾರೆ.

ಜಿಲ್ಲಾದ್ಯಂತ ಹಬ್ಬದ ವಾತಾವರಣದಡಿ ಶೈಕ್ಷ ಣಿಕ ಕಾರ್ಯಗಳಿಗೆ ಚ್ಯುತಿ ಬಾರದಂತೆ ಮಂಗಳವಾರ ಶಾಲೆಗಳಲ್ಲಿ ಶಿಕ್ಷ ಕರು ಸಿದ್ಧತಾ ಕಾರ್ಯ ನಡೆಸಬೇಕಾಗಿದ್ದು, ಬುಧವಾರ ಶಾಲೆಗೆ ಬರುವ ಮಕ್ಕಳನ್ನು ಆಹ್ವಾನಿಸಲು ಡಿಡಿಪಿಐ ಕೆ.ರತ್ನಯ್ಯ ಸೂಚಿಸಿದ್ದು, ಅದರಂತೆ ಜಿಲ್ಲೆಯ ಒಟ್ಟು 2,568 ಶಾಲೆಗಳ ಪ್ರಾರಂಭೋತ್ಸವ ನಡೆಯುತ್ತಿದೆ.

ಮಕ್ಕಳ ವ್ಯಾಸಂಗದ ಅವಧಿಯಲ್ಲಿ ಶಾಲಾ ಪ್ರಾರಂಭದ ದಿನವನ್ನು ಮಕ್ಕಳ ಮನಸ್ಸಿನಲ್ಲಿ ಸ್ಥಿರವಾಗಿ ನಿಲ್ಲುವ ರೀತಿ ಹಬ್ಬದಂತೆ ಆಚರಿಸಿ ಅವರಲ್ಲಿ ಆಹ್ಲಾದಕರ ವಾತಾವರಣ ಸೃಷ್ಟಿಸುವುದೇ ಶಿಕ್ಷ ಣ ಇಲಾಖೆ ಉದ್ದೇಶವಾಗಿದ್ದು, ಮಕ್ಕಳನ್ನು ಶಾಲೆಗಳತ್ತ ಸೆಳೆಯುವ ಕೆಲಸ ಮಾಡುತ್ತಿದೆ.

ಜಿಲ್ಲೆಯಲ್ಲಿ 1 ರಿಂದ 7ನೇ ತರಗತಿವರೆಗಿನ ಸರಕಾರಿ ಪ್ರಾಥಮಿಕ ಶಾಲೆಗಳು ಒಟ್ಟು 1856 ಇವೆ, ಹಾಗೂ 126 ಸರಕಾರಿ ಪ್ರೌಢಶಾಲೆಗಳಿದ್ದು, ಇಲಾಖೆ ಮಾರ್ಗಸೂಚಿಯಂತೆ ಇಂದು ಶಾಲೆಗಳಿಗೆ ತಳಿರು ತೋರಣಗಳಿಂದ ಅಲಂಕರಿಸಿ ಮಕ್ಕಳನ್ನು ಶಾಲೆಗೆ ಆಹ್ವಾನಿಸಲು ಸಿದ್ಧವಾಗಿವೆ.

ಉಳಿದಂತೆ ಅನುದಾನಿತ 45 ಪ್ರಾಥಮಿಕ ಹಾಗೂ 60 ಪ್ರೌಢಶಾಲೆಗಳು, ಅನುದಾನರಹಿತ 297 ಪ್ರಾಥಮಿಕ ಹಾಗೂ 143 ಪ್ರೌಢಶಾಲೆಗಳು ಜಿಲ್ಲೆಯಲ್ಲಿದ್ದು, ಎಲ್ಲಾ ಶಾಲೆಗಳಲ್ಲೂ ಶಾಲಾ ಪ್ರಾರಂಭೋತ್ಸವಕ್ಕೆ ಸೂಚನೆ ನೀಡಿದ್ದರೂ, ಖಾಸಗಿ ಶಾಲೆಗಳು ಮಾತ್ರ ಶಿಕ್ಷ ಣ ಇಲಾಖೆಯ ಸೂಚನೆಗೆ ಕಾಯದೇ ವಾರಕ್ಕೂ ಮುನ್ನವೇ ಶಾಲೆಗಳನ್ನು ಆರಂಭಿಸಿವೆ.

ಇವುಗಳ ಜತೆಗೆ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ 16 ಮೊರಾರ್ಜಿ ದೇಸಾಯಿ, 4 ಕಿತ್ತೂರು ರಾಣಿ ಚೆನ್ನಮ್ಮ, 3 ಅಂಬೇಡ್ಕರ್‌ ಹಾಗೂ 1 ಏಕಲವ್ಯ ವಸತಿ ಶಾಲೆಗಳಿದ್ದು, ಇಲ್ಲಿಯೂ 1210 ಮಕ್ಕಳು ಶಾಲೆಯತ್ತ ಇಂದಿನಿಂದ ಪಯಣ ಬೆಳೆಸಿದ್ದಾರೆ.

ಇದರ ಜತೆಗೆ ಶ್ರೀನಿವಾಸಪುರ, ಬಂಗಾರಪೇಟೆ, ಮುಳಬಾಗಿಲು ತಾಲೂಕುಗಳಲ್ಲಿ ತಲಾ ಒಂದೊಂದು ಕಸ್ತೂರಿ ಬಾ ಶಾಲೆ ಹಾಗೂ ಆದರ್ಶ ಶಾಲೆಗಳು ಇದ್ದು, ಅವುಗಳಲ್ಲೂ ಮೇ 28 ರಂದೇ ಶಾಲಾ ಪ್ರಾರಂಭೋತ್ಸವಕ್ಕೆ ಸಿದ್ಧತೆ ನಡೆಸಲು ಸೂಚಿಸಲಾಗಿದೆ.

ಈ ಬಾರಿ ಸರಕಾರ ಜಿಲ್ಲೆಯಲ್ಲಿ 24 ಹಾಗೂ ಕೋಲಾರ ತಾಲೂಕಿನಲ್ಲಿ 4 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ, ಈ ಶಾಲೆಗಳಲ್ಲಿ ಪ್ರಿಕೆಜಿಯಿಂದ 10ನೇ ತರಗತಿವರೆಗೂ ಆಂಗ್ಲ ಮಾಧ್ಯಮ ಶಿಕ್ಷ ಣವನ್ನು ಖಾಸಗಿ ಶಿಕ್ಷ ಣ ಸಂಸ್ಥೆಯ ರೀತಿಯಲ್ಲೇ ನೀಡಲು ಸಿದ್ಧತೆ ನಡೆಸಲಾಗಿದೆ.

ಈ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷ ಕರಿಗೆ ಬೇಸಿಗೆ ರಜೆಯಲ್ಲಿ ತರಬೇತಿ ನೀಡಲಾಗಿದ್ದು, ಕೋಲಾರ ತಾಲ್ಲೂಕಿನಲ್ಲೂ ನರಸಾಪುರ,ವೇಮಗಲ್‌, ರಾಜಕಲ್ಲಹಳ್ಳಿ, ಕ್ಯಾಲನೂರುಗಳಲ್ಲಿ ಕೆಪಿಎಸ್‌ ಶಾಲೆಗಳು ಆರಂಭವಾಗುತ್ತಿದ್ದು, ಈ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಎಂದು ಡಿಡಿಪಿಐ ಕೆ.ರತ್ನಯ್ಯ ಹಾಗೂ ಬಿಇಒ ಕೆ.ಎಸ್‌.ನಾಗರಾಜಗೌಡ ಈಗಾಗಲೇ ಮನವಿ ಮಾಡಿದ್ದಾರೆ.

ಮೇ 28ರಂದು ಶಿಕ್ಷ ಕರು ಪ್ರಾರಂಭೋತ್ಸವಕ್ಕೆಂದು ಶಾಲಾ ಆವರಣ, ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಕುಡಿಯಲು ನೀರು ಒದಗಿಸುವುದು, ಶೌಚಾಲಯವನ್ನು ಸುಸ್ಥಿತಿಯಲ್ಲಿಡುವುದು, ಬಿಸಿಯೂಟದ ವ್ಯವಸ್ಥೆ ಹಾಗೂ ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸುವ ಕಾರ್ಯ ಮಾಡುವಂತೆ ಸೂಚಿಸಲಾಗಿದೆ.

ಒಂದು, ಆರನೇ ಹಾಗೂ 8ನೇ ತರಗತಿಗೆ ಸೇರುವ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭದ ದಿನ ಆಹ್ಲಾದಕರ ಸಂದರ್ಭವಾಗಿರುವಂತೆ ಅಧ್ಯಾಪಕರು ನಡೆಸಿಕೊಳ್ಳಬೇಕು ಇದು ಮಕ್ಕಳ ವ್ಯಾಸಂಗದ ಅವಧಿಯಲ್ಲಿ ಲವಲವಿಕೆಯಿಂದ ಕಳೆಯಲು ಪ್ರೇರಣೆ ನೀಡುತ್ತದೆ ಎಂದು ಇಲಾಖೆ ಸೂಚಿಸಿದೆ.

ಶಾಲೆ ಬಿಟ್ಟ ಮಕ್ಕಳಿದ್ದರೆ 1098ಗೆ ಕರೆ ಮಾಡಬಹುದು: ಈ ನಡುವೆ ಇಲಾಖೆ ಮಿಂಚಿನ ಸಂಚಾರಕ್ಕಾಗಿ ಅಧಿಕಾರಿಗಳ ತಂಡಗಳನ್ನು ರಚಿಸಿದ್ದು, ಶಾಲೆಗಳಲ್ಲಿ ಶಾಲಾ ಆರಂಭೋತ್ಸವ ಮಾಡಿರುವ ಕುರಿತು, ಪಠ್ಯಪುಸ್ತಕ, ಬಟ್ಟೆ ವಿತರಣೆ ಕುರಿತು ಪರಿಶೀಲನೆ ನಡೆಸಲಿದೆ. ಒಟ್ಟಾರೆ ಯಾವುದೇ ಮಗು ಶಾಲೆಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಸಾರ್ವಜನಿಕ ಶಿಕ್ಷ ಣ ಇಲಾಖೆ ಆಯುಕ್ತರು ಸಂದೇಶ ನೀಡಿದ್ದಾರೆ.

ಮಕ್ಕಳಿಗೆ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್‌ ನೀಡುವ ಕುರಿತು ತಿಳಿಸಿ, ಯಾವುದೇ ಮಗು ಶಾಲೆಯಿಂದ ಹೊರಗುಳಿಯಬಾರದು. ದಾಖಲಾತಿ ಆಂದೋಲನದ ನಂತರವೂ ಅಂತಹ ಮಗು ಕಂಡು ಬಂದರೆ ಸಾರ್ವಜನಿಕರು, ಸಂಘ ಸಂಸ್ಥೆಗಳು 1098ಗೆ ಉಚಿತ ಸಹಾಯವಾಣಿಗೆ ಮಾಹಿತಿ ನೀಡುವಂತೆ ಡಿಡಿಪಿಐ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ