ಆ್ಯಪ್ನಗರ

ಆ.17, 18ಕ್ಕೆ ರಾಜ್ಯ ಮಟ್ಟದ ದಲಿತ ಸಾಹಿತ್ಯ ಸಮ್ಮಳನ

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆ.17, 18ಕ್ಕೆ ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರಾಜ್ಯ ಮಟ್ಟದ ದಲಿತ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತಿದೆ.

Vijaya Karnataka 6 Jul 2019, 10:44 pm
ಕೋಲಾರ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆ.17, 18ಕ್ಕೆ ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರಾಜ್ಯ ಮಟ್ಟದ ದಲಿತ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತಿದೆ.
Vijaya Karnataka Web state level dalit literature conference on aug 17 18
ಆ.17, 18ಕ್ಕೆ ರಾಜ್ಯ ಮಟ್ಟದ ದಲಿತ ಸಾಹಿತ್ಯ ಸಮ್ಮಳನ


ಈ ಸಂಬಂಧ ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಹಿರಿಯ ಸಾಹಿತಿ, ದಲಿತ ಕವಿ ಎಲ್‌.ಹನುಮಂತಯ್ಯ ಅವರನ್ನು ಸರ್ವಾನುಮತದಿಂದ ಸಮ್ಮೇಳನದ ಅಧ್ಯಕ್ಷ ರಾಗಿ ಆಯ್ಕೆಮಾಡಲಾಯಿತು.

ಸಭೆಯಲ್ಲಿ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮನುಬಳಿಗಾರ್‌, ಕೇಂದ್ರ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ, ಹಿರಿಯ ದಲಿತ ಕವಿ ಡಾ.ಸಿದ್ದಲಿಂಗಯ್ಯ, ರಾಜ್ಯ ಪ್ರತಿನಿಧಿ ಬಿ.ಟಿ.ಲಲಿತನಾಯಕ್‌, ಹಿರಿಯ ದಲಿತ ಸಾಹಿತಿ ಕೆ.ಬಿ.ಸಿದ್ಧಯ್ಯ, ಕೋಲಾರ ಜಿಲ್ಲಾಧ್ಯಕ್ಷ ನಾಗಾನಂದ ಕೆಂಪರಾಜ್‌, ಗೌರವ ಕಾರ್ಯದರ್ಶಿ ಆರ್‌.ಎಂ.ವೆಂಕಟಸ್ವಾಮಿ, ಗೌರವ ಕೋಶಾಧ್ಯಕ್ಷ ರತ್ನಪ್ಪ ಮೇಲಾಗಾಣಿ, ಶಿವಣ್ಣ, ಅವಿನಾಶ್‌ ಮುಂತಾದವರು ಭಾಗವಹಿಸಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ