ಆ್ಯಪ್ನಗರ

ಇಂದು ಬಹುತೇಕ ಅಭ್ಯರ್ಥಿಗಳ ಉಮೇದುವಾರಿಕೆಗಳ ಸಲ್ಲಿಕೆ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಮಾ.25ರಂದು ಕಾಂಗ್ರೆಸ್‌, ಬಿಜೆಪಿ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆಗಳನ್ನು ಸಲ್ಲಿಸಲಿದ್ದಾರೆ.

Vijaya Karnataka 25 Mar 2019, 5:00 am
ಕೋಲಾರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಮಾ.25ರಂದು ಕಾಂಗ್ರೆಸ್‌, ಬಿಜೆಪಿ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆಗಳನ್ನು ಸಲ್ಲಿಸಲಿದ್ದಾರೆ.
Vijaya Karnataka Web submission of candidatures for most candidates today
ಇಂದು ಬಹುತೇಕ ಅಭ್ಯರ್ಥಿಗಳ ಉಮೇದುವಾರಿಕೆಗಳ ಸಲ್ಲಿಕೆ


ಮಾ.19ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ನಿಡಲಾಗಿತ್ತು. ಆರಂಭದ ಮೂರು ದಿನಗಳು ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ನಾಲ್ಕನೆಯ ದಿನದಂದು ಮೊದಲ ನಾಮಪತ್ರವನ್ನು ಪಕ್ಷೇತರ ಅಭ್ಯರ್ಥಿ ವೆಂಕಟರೆಡ್ಡಿ ಸಲ್ಲಿಸಿದ್ದರು.

ಮಾ.23, 24ರಂದು ರಜೆ ಇದ್ದ ಕಾರಣ ನಾಮಪತ್ರ ಸಲ್ಲಿಕೆಗೆ ಅವಕಾಶವಿರಲಿಲ್ಲ. ಮಾ.25, 26ರಂದು ಅವಕಾಶವಿದ್ದೆ, ಮಾ.26 ಮಂಗಳವಾರ ಆಗಿರುವ ಹಿನ್ನೆಲೆಯಲ್ಲಿ ಬಹುತೇಕ ಮಂದಿ ಇದೇ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ. ಅದಕ್ಕಾಗಿ ಪೊಲೀಸ್‌ ಇಲಾಖೆಯಿಂದಲೂ ಸೂಕ್ತ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಕಾಂಗ್ರೆಸ್‌-ಜೆಡಿಎಸ್‌ನಿಂದ ಕೆ.ಎಚ್‌.: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಸಂಸದ ಕೆ.ಎಚ್‌.ಮುನಿಯಪ್ಪ ಅವರು ಇಂದು ನಾಮಪತ್ರ ಸಲ್ಲಿಸಲಿದ್ದು, ಬೆಳಗ್ಗೆ 9 ಗಂಟೆಗೆ ಕೊಂಡರಾಜನಹಳ್ಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದರ್ಗಾ, ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಆನಂತರ ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್‌ ಹಾಗೂ ಗಾಂಧೀಜಿ ಪುತ್ಥಳಿಗೆ ಮಾಲರ್ಪಣೆ ಮಾಡಿ ಅಲ್ಲೇ ಸಭೆಯನ್ನುದ್ದೇಶಿಸಿ ಮಾತನಾಡಿ ಜಿಲ್ಲಾಧಿಕಾರಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರಸಲ್ಲಿಸಲಿದ್ದಾರೆ.

ಬಿಜೆಪಿಯಿಂದ ಮುನಿಸ್ವಾಮಿ: ಬಿಜೆಪಿ ಅಭ್ಯರ್ಥಿ ಎಸ್‌.ಮುನಿಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಬೆಳಗ್ಗೆ 9 ಗಂಟೆಗೆ ಬಂಗಾರಪೇಟೆ ಸರ್ಕಲ್‌ನಲ್ಲಿನ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಲಿದ್ದಾರೆ. ಆ ಬಳಿಕ ಡೂಂಲೈಟ್‌, ಕಠಾರಿಪಾಳ್ಯ, ಬಸ್‌ ಸ್ಟಾಂಡ್‌, ಕಾಳಮ್ಮಗುಡಿ ರಸ್ತೆ, ಎಂಜಿ ರಸ್ತೆ, ಕುರುಬರಪೇಟೆ, ಮೆಕ್ಕೆ ವೃತ್ತದವರೆಗೆ ಮೆರವಣಿಗೆ ನಡೆಸಿ, ಆ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಡಿ.ಎಸ್‌.ವೀರಯ್ಯ ಅವರು ನಾಮಪತ್ರ ಸಲ್ಲಿಸಲಿರುವುದಾಗಿ ತಿಳಿದುಬಂದಿದ್ದು, ಅದೇ ರೀತಿ ಪಕ್ಷೇತರ ಅಭ್ಯರ್ಥಿಯಾಗಿ ಕೋಲಾರ ಮುರಳಿ ಸೇರಿದಂತೆ ಮತ್ತಿತರರೂ ಉಮೇದುವಾರಿಕೆಗಳನ್ನು ಸಲ್ಲಿಸಲಿರುವುದಾಗಿ ತಿಳಿದುಬಂದಿದೆ.

ಮಾ.25ರಂದು ಬಹುತೇಕ ಮಂದಿ ನಾಮಪತ್ರಗಳನ್ನು ಸಲ್ಲಿಕೆ ಮಾಡಲಿರುವುದರಿಂದಾಗಿ ಜಿಲ್ಲಾಡಳಿತ ಭವನದ ಎದುರು ಸಾವಿರಾರು ಮಂದಿ ಜಮಾಯಿಸಲಿದ್ದು, ಪೊಲೀಸ್‌ ಇಲಾಖೆಯಿಂದ ಹೆಚ್ಚಿನ ಬಂದೋಬಸ್ತ್‌ ನಿಯೋಜಿಸಲಾಗಿದೆ.

ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಮ್ಮ ಕಡೆಯಿಂದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್‌, ಬಿಜೆಪಿಯವರಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸಾವಿರಾರು ಮಂದಿ ಜಮಾಯಿಸಲಿದ್ದಾರೆ. ನಮ್ಮ ಹಾಗೂ ನೆರೆ ಜಿಲ್ಲೆಯ 350 ಪೊಲೀಸ್‌, 150 ಗೃಹರಕ್ಷ ಕ ದಳದವರನ್ನು ನಿಯೋಜಿಸಲಾಗಿದೆ.

-ಡಾ.ರೋಹಿಣಿ ಕಟೋಚ್‌ ಸಫೆಟ್‌, ಎಸ್ಪಿ ಕೋಲಾರ


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ