ಆ್ಯಪ್ನಗರ

ಸಾಲಬಾಧೆ ತಾಳದೆ ರೈತ ನೇಣಿಗೆ ಶರಣು

ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ವೀರಾಪುರ ಗ್ರಾಮದಲ್ಲಿಬುಧವಾರ ನಡೆದಿದೆ.

Vijaya Karnataka 12 Sep 2019, 5:00 am
ಕೋಲಾರ: ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ವೀರಾಪುರ ಗ್ರಾಮದಲ್ಲಿಬುಧವಾರ ನಡೆದಿದೆ.
Vijaya Karnataka Web surrender to peasant farmer without debt
ಸಾಲಬಾಧೆ ತಾಳದೆ ರೈತ ನೇಣಿಗೆ ಶರಣು


ವೀರಾಪುರ ಗ್ರಾಮದ ರೈತ ಶ್ರೀನಿವಾಸ್‌ (46) ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಶ್ರೀನಿವಾಸ್‌ ಸಮೀಪದ ಎಸ್‌ಎಫ್‌ಸಿಎಸ್‌ನಲ್ಲಿ60 ಸಾವಿರ ಹಾಗೂ 2 ಲಕ್ಷರೂ.ಕೈ ಸಾಲ ಮಾಡಿಕೊಂಡಿದ್ದನು. ಅಲ್ಲದೆ, ಟೊಮೇಟೊ ಬೆಲೆ ದಿಢೀರ್‌ ಕುಸಿದಿದ್ದು, ಇದರಿಂದ ಬೇಸತ್ತಿದ್ದ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೃತ ರೈತನ ಪತ್ನಿ ರೇಣುಕಾ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದು, ಈ ಸಂಬಂಧ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೀರಾಪುರ ಗ್ರಾಮಕ್ಕೆ ಜಿಪಂ ಅಧ್ಯಕ್ಷೆ ಗೀತಮ್ಮ ಆನಂದರೆಡ್ಡಿ, ವಿಧಾನ ಪರಿಷತ್‌ ಮಾಜಿ ಉಪ ಸಭಾಪತಿ ವಿ.ಆರ್‌.ಸುದರ್ಶನ್‌, ಜಿ.ಪಂ. ಉಪ ಕಾರ್ಯದರ್ಶಿ ಸಂಜೀವಪ್ಪ, ಎಂಎಸ್‌ಐಎಲ್‌ ಮಾಜಿ ನಿರ್ದೇಶಕ ಆರ್‌. ಕಿಶೋರ್‌ಕುಮಾರ್‌, ಕುರುಬರ ಸಂಘದ ಜಿಲ್ಲಾಧ್ಯಕ್ಷ ತಂಬಳ್ಳಿ ಮುನಿಯಪ್ಪ ಮತ್ತಿತರರು ಭೇಟಿ ನೀಡಿ ಸಾಂತ್ವನ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ