ಆ್ಯಪ್ನಗರ

ಮಕ್ಕಳು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ: ಶಾಸಕ

ಪೋಷಕರು ತಮ್ಮ ಮಕ್ಕಳನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿಸಲು ಆಸೆ ಇಟ್ಟುಕೊಂಡು ಕಾಲೇಜಿಗೆ ಕಳುಹಿಸುತ್ತಾರೆ. ಹೀಗಾಗಿ ಮಕ್ಕಳು ಜವಾಬ್ದಾರಿ ಅರಿತು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಕೆ. ಶ್ರೀನಿವಾಸಗೌಡ ಕರೆ ನೀಡಿದರು.

Vijaya Karnataka 27 Jan 2019, 5:00 am
ಕೋಲಾರ: ಪೋಷಕರು ತಮ್ಮ ಮಕ್ಕಳನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿಸಲು ಆಸೆ ಇಟ್ಟುಕೊಂಡು ಕಾಲೇಜಿಗೆ ಕಳುಹಿಸುತ್ತಾರೆ. ಹೀಗಾಗಿ ಮಕ್ಕಳು ಜವಾಬ್ದಾರಿ ಅರಿತು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಕೆ. ಶ್ರೀನಿವಾಸಗೌಡ ಕರೆ ನೀಡಿದರು.
Vijaya Karnataka Web take responsibility for the responsibility of the children responsible legislator
ಮಕ್ಕಳು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ: ಶಾಸಕ


ನಗರದ ಆದರ್ಶ ಕಾಲೇಜಿನಲ್ಲಿ ಶನಿವಾರ ನಡೆದ ವಿಶ್ವ ಮಾನವ ಕುವೆಂಪು ಸಂಸ್ಮರಣೆ ಹಾಗೂ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಷ್ಟೇ ಕಷ್ಟಗಳಿದ್ದರೂ ಶಿಕ್ಷ ಣ ಕೊಡಿಸಬೇಕು ಎಂದು ಕೂಲಿ ಮಾಡಿ ಓದಿಸುತ್ತಿದ್ದಾರೆ. ಐಎಎಸ್‌, ಐಪಿಎಸ್‌ ಅಧಿಕಾರಿಯಾದರೆ, ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ವಿದ್ಯಾರ್ಥಿಗಳು ಒಳ್ಳೆಯ ವಿಚಾರಗಳ ಬಗ್ಗೆ ಆಲೋಚನೆ ಮಾಡುವುದರ ಜತೆಗೆ ಉತ್ತಮ ಸಮಾಜ ನಿರ್ಮಾಣದಲ್ಲಿ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.

ಹಿಂದಿನ ಶಿಕ್ಷ ಕರಿಗೂ ಈಗಿನ ಶಿಕ್ಷ ಕರಿಗೂ ತುಂಬಾ ವ್ಯತ್ಯಾಸವಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷ ಣ ಸಂಸ್ಥೆಗಳು ಲಾಭದ ದೃಷ್ಟಿಯಲ್ಲಿ ನಡೆಯುತ್ತಿರುವುದು ಬೇಸರವಾಗುತ್ತಿದೆ. ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷ ಣ ನೀಡುತ್ತಿದ್ದರು. ಅದೇ ರೀತಿ, ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವ ನಿಟ್ಟಿನಲ್ಲಿ ಶಿಕ್ಷ ಕರು ಗುಣಮಟ್ಟದ ಶಿಕ್ಷ ಣ ನೀಡಬೇಕು ಎಂದು ತಿಳಿಸಿದರು.

ಮಹಾನ್‌ ಕವಿಗಳ ಸಾಲಿನಲ್ಲಿ ಕುವೆಂಪು ಶ್ರೇಷ್ಠ ಸ್ಥಾನಮಾನ ಪಡೆದುಕೊಂಡಿದ್ದಾರೆ. ಅವರು ರಚಿಸಿರುವ ಪುಸ್ತಕಗಳಲ್ಲಿ ದಾಖಲು ಮಾಡಿರುವ ವಿಚಾರಗಳು ಇಂದಿನ ಸಮಾಜಕ್ಕೆ ಪ್ರಸ್ತುತವಾಗಿವೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಎಂ.ಶ್ರೀನಿವಾಸಮೂರ್ತಿ ಅಭಿಪ್ರಾಯಪಟ್ಟರು.

ಕುವೆಂಪು ಸಾಹಿತ್ಯದಲ್ಲಿ ಜಾತಿ, ಧರ್ಮ, ಲಿಂಗ ಭೇದ ಮೀರಿದ ಚಿಂತನೆಗಳನ್ನು ಕಾಣಬಹುದು. ಕವಿತೆ, ಕಾದಂಬರಿ, ವಿಮರ್ಶೆ ಸಾಹಿತ್ಯದ ಎಲ್ಲಾ ವಲಯಗಳಿಗೂ ಅನ್ವಯವಾಗುತ್ತದೆ ಎಂದರು.

ಪ್ರಿನ್ಸಿಪಾಲ್‌ ಪ್ರೊ..ವಿ. ಶ್ರೀರಾಮ, ಕೆಜಿಎಫ್‌ ಪ್ರಥಮ ದರ್ಜೆ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಬಿ.ಶಿವಕುಮಾರ್‌ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ