ಆ್ಯಪ್ನಗರ

ತ್ರಿಭಾಷಾ ಸೂತ್ರಕ್ಕೆ ಕರವೇ ವಿರೋಧ

ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರುತ್ತಿರುವ ಕ್ರಮ ಸರಿಯಲ್ಲ. ಶಾಲೆಗಳಲ್ಲಿ ತ್ರಿಭಾಷಾ ಸೂತ್ರ ಅಳವಡಿಕೆ ಸಲ್ಲ ಎಂದು ಕರ್ನಾಟಕ ರಕ್ಷ ಣಾ ವೇದಿಕೆ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ಹೇಳಿದ್ದಾರೆ.

Vijaya Karnataka 4 Jun 2019, 5:00 am
ಕೋಲಾರ : ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರುತ್ತಿರುವ ಕ್ರಮ ಸರಿಯಲ್ಲ. ಶಾಲೆಗಳಲ್ಲಿ ತ್ರಿಭಾಷಾ ಸೂತ್ರ ಅಳವಡಿಕೆ ಸಲ್ಲ ಎಂದು ಕರ್ನಾಟಕ ರಕ್ಷ ಣಾ ವೇದಿಕೆ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ಹೇಳಿದ್ದಾರೆ.
Vijaya Karnataka Web the opposition to the triple sutra
ತ್ರಿಭಾಷಾ ಸೂತ್ರಕ್ಕೆ ಕರವೇ ವಿರೋಧ


ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭಾಷೆ ಹೇರಿಕೆಯು ಅಂಧಾಭಿಮಾನಕ್ಕೆ ಕಾರಣವಾಗುವುದಲ್ಲದೆ ಇದು ನಾಡಿನ ಒಗ್ಗಟ್ಟಿಗೆ ಮಾರಕ ಎಂದು ದೂರಿದ್ದಾರೆ.

ರಾಷ್ಟ್ರೀಯ ಶಿಕ್ಷ ಣ ನೀತಿ ಹೆಸರಿನಲ್ಲಿ ತ್ರಿಭಾಷಾ ಸೂತ್ರವನ್ನು ಹೇರುತ್ತಿರುವ ಕೇಂದ್ರ ಸರಕಾರ ಹಿಂದಿ ಕಡ್ಡಾಯ ಮಾಡಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಒಂದು ಭಾಷೆಯನ್ನು ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡು ರಾಜ್ಯ ಸರ್ಕಾರದ ನಿಲುವನ್ನು ಕೇಂದ್ರಕ್ಕೆ ತಿಳಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಕ್ಷ ಣ ಮುಂದಾಗಬೇಕೆಂದು ಆಗ್ರಹಿಸಲಾಗಿದ್ದು ಯಾವುದೇ ಕಾರಣಕ್ಕೂ ಹಿಂದಿಯನ್ನು ಹೇರದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರಕಾರ ಹಿಂದಿ ಹೇರಿಕೆಗೆ ಮುಂದಾದರೆ ಇಡೀ ರಾಜ್ಯಾದ್ಯಂತ ಕರವೇಯಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ