ಆ್ಯಪ್ನಗರ

ಆಸ್ಪತ್ರೆಗೆ ಕಾಯಂ ವೈದ್ಯರನ್ನು ನಿಯೋಜಿಸಿ, ಅವ್ಯವಸ್ಥೆ ಸರಿಪಡಿಸಲು ಆಗ್ರಹ

ತಾಲೂಕಿನ ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಂ ವೈದ್ಯರನ್ನು ನೇಮಕ ಮಾಡುವ ಜತೆಗೆ,ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ಸಾರ್ವಜನಿಕರು ಆರೋಗ್ಯ ಕೇಂದ್ರದ ಎದುರು ಪ್ರತಿಭಟಿಸಿರು.

Vijaya Karnataka 15 May 2019, 5:00 am
ಕೋಲಾರ: ತಾಲೂಕಿನ ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಂ ವೈದ್ಯರನ್ನು ನೇಮಕ ಮಾಡುವ ಜತೆಗೆ,ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ಸಾರ್ವಜನಿಕರು ಆರೋಗ್ಯ ಕೇಂದ್ರದ ಎದುರು ಪ್ರತಿಭಟಿಸಿರು.
Vijaya Karnataka Web the patient is required to deploy a permanent doctor and repair the disorder
ಆಸ್ಪತ್ರೆಗೆ ಕಾಯಂ ವೈದ್ಯರನ್ನು ನಿಯೋಜಿಸಿ, ಅವ್ಯವಸ್ಥೆ ಸರಿಪಡಿಸಲು ಆಗ್ರಹ


ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಸಾವಿರಾರು ಕಾರ್ಮಿಕರಿರುವ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಆರೋಗ್ಯ ಕೇಂದ್ರದಲ್ಲಿ 24 ಗಂಟೆ ಕಾರ್ಯನಿರ್ವಹಿಸುವ ಕಾಯಂ ವೈದ್ಯರಿಲ್ಲದೆ ತೊಂದರೆಯಾಗಿದೆ. ಅಲ್ಲದೆ, ಆಸ್ಪತ್ರೆಯಲ್ಲಿ ಸಿಬ್ಬಂದಿ ಬಡ ರೋಗಿಗಳಿಂದ ಹಣ ವಸೂಲಿ ಮಾಡಲಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಖಾಸಗಿ ಆಸ್ಪತ್ರೆ, ನಕಲಿ ವೈದ್ಯರ ಹಾವಳಿಯಿಂದ ಗ್ರಾಮೀಣ ಪ್ರದೇಶದ ಅಮಾಯಕರ ರಕ್ಷ ಣೆಗೆ ಸರಕಾರ ಮುಂದಾಗಿದೆಯಲ್ಲದೆ, ಆರೋಗ್ಯ ಸುಧಾರಣೆಗೆ ನಾನಾ ಯೋಜನೆ ಜಾರಿಗೊಳಿಸುತ್ತಿದೆ. ಆದರೆ ಅದು, ಜನ ಸಾಮಾನ್ಯರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಆರೋಗ್ಯ ರಕ್ಷ ಣೆಗಾಗಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿರುವುದಲ್ಲದೆ, ಲಕ್ಷಾಂತರ ರೂ. ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಯತ್ತ ಮುಖ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕ ಆರೋಗ್ಯ ಸೇವೆ ಕೊಡಬೇಕಾದ ಸರಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ರೋಗಿಗಳು ಹೋದಲ್ಲಿ, ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಲಾಗುತ್ತದೆ ಎಂದು ದೂರಿದರು.

ಅತಿ ಹೆಚ್ಚು ಕೈಗಾರಿಕೆಗಳನ್ನು ಹೊಂದಿರುವ ನರಸಾಪುರದಲ್ಲಿ ಸಾವಿರಾರು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇಲ್ಲಿ ಇಎಸ್‌ಐ ಆಸ್ಪತ್ರೆ ಇಲ್ಲ. ಜನ ಸಾಮಾನ್ಯರು, ಕಾರ್ಮಿಕರಿಗೆ ಆರೋಗ್ಯದ ವಿಷಯದಲ್ಲಿ ತೊಂದರೆಯಾದರೆ,ಅಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಅವಲಂಭಿಸಬೇಕಿದೆ. ಆದರೆ, ಈ ಆಸ್ಪತ್ರೆಯಲ್ಲಿ ದಿನದ 24ಗಂಟೆ ಕಾರ್ಯನಿರ್ವಹಿಸುವ ಕಾಯಂ ವೈದ್ಯರಿಲ್ಲದೆ, ಪರದಾಡುವಂತಾಗಿದೆ. ನಕಲಿ ಕ್ಲಿನಿಕ್‌ಗಳ ವೈದ್ಯರು, ಖಾಸಗಿ ಆಸ್ಪತ್ರೆಗಳನ್ನು ಅವಲಂಭಿಸಬೇಕಾಗಿದೆ. ಸರಕಾರಿ ಆಸ್ಪತ್ರೆಯಲ್ಲೂ ಹಣ ಇದ್ದರೆ ಮಾತ್ರ ಚಿಕಿತ್ಸೆ ದೊರಕುವಂತಾಗಿದೆ ಎಂದು ಆರೋಪಿಸಿದರು.

ಮುಖಂಡ ಕೆ.ಇ.ಬಿ ಚಂದ್ರು ಮಾತನಾಡಿ, ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಮ ಸ್ಥಿತಿಯಲ್ಲಿರುವ ರೋಗಿಯಂತಾಗಿದೆ. ನೆಪ ಮಾತ್ರಕ್ಕೆ ಕೆಲಸಕ್ಕೆ ಬರುವ ವೈದ್ಯರು, ಸಿಬ್ಬಂದಿಯ ಬೇಜವಾಬ್ದಾರಿಗೆ ಬಡ ರೋಗಿಗಳು ತತ್ತರಿಸುತ್ತಿದ್ದಾರೆ. ದಿನದ 24 ಗಂಟೆ ಕೆಲಸ ನಿರ್ವಹಿಸಬೇಕಾದ ವೈದ್ಯರು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ. ಆರೋಗ್ಯ ಕೇಂದ್ರದಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ವೈದ್ಯಾಧಿಕಾರಿ ರಮ್ಯಾ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಮುಖಂಡರಾದ ಮರಗಲ್‌ ಶ್ರೀನಿವಾಸ್‌, ನರಸಾಪುರ ಪುರುಷೋತ್ತಮ್‌, ರೆಹಮಾನ್‌, ಮಂಜುನಾಥ್‌ರೆಡ್ಡಿ, ಉದಯ್‌ಕುಮಾರ್‌,ಕಿರಣ್‌, ಮೂರ್ತಿ, ಸತೀಶ್‌, ಎಸ್‌ ರಾಜುಬಾಬು, ಅಂಜನ್‌ಕುಮಾರ್‌, ಶಿವು ಮತ್ತಿತರರು ಭಾಗವಹಿಸಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ