ಆ್ಯಪ್ನಗರ

ತಾಲೂಕು ಕಚೇರಿಯಲ್ಲಿ ಮೂಲ ಸೌಲಭ್ಯಕ್ಕೆ ಆಗ್ರಹ

ಶ್ರೀನಿವಾಸಪುರ ತಾಲೂಕು ಕಚೇರಿಯಲ್ಲಿ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ ಸೇರಿ ಮೂಲ ಸೌಲಭ್ಯಗಳು ಕಲ್ಪಿಸಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

Vijaya Karnataka 3 Feb 2019, 5:00 am
ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕು ಕಚೇರಿಯಲ್ಲಿ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ ಸೇರಿ ಮೂಲ ಸೌಲಭ್ಯಗಳು ಕಲ್ಪಿಸಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.
Vijaya Karnataka Web the taluk office demanded a basic facility
ತಾಲೂಕು ಕಚೇರಿಯಲ್ಲಿ ಮೂಲ ಸೌಲಭ್ಯಕ್ಕೆ ಆಗ್ರಹ


ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ರೈತ ಸಂಘದಿಂದ ಏರ್ಪಡಿಸಿದ್ದ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿ, ಶ್ರೀನಿವಾಸಪುರ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲ ಸೌಲಭ್ಯಗಳು ಇಲ್ಲದೆ ರೈತರು ಪರದಾಡುವಂತಾಗಿದೆ ಎಂದು ದೂರಿದರು.

ತಾಲೂಕು ಕಚೇರಿ ಬದಲಾವಣೆ ಮಾಡುತ್ತೇವೆಂದು ಸುಣ್ಣ ಬಣ್ಣವಿಲ್ಲದೆ ಭಣಗುಡುತ್ತಿದೆ. ಕೂಡಲೆ ಸೌಲಭ್ಯಗಳು ಕಲ್ಪಿಸದಿದ್ದರೆ ಫೆ 11ರಂದು ಜಾನುವಾರುಗಳೊಂದಿಗೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆಂದು ಎಚ್ಚರಿಕೆ ನೀಡಿದರು.

ತಾಲೂಕು ಅಧ್ಯಕ್ಷ ತೆರ್ನಹಳ್ಳಿ ಆಂಜಿನಪ್ಪ ಮಾತನಾಡಿ ತಾಲೂಕು ಕಚೇರಿ ದೇವಾಲಯ ಇದ್ದಂತೆ. ಆದರೆ ಅಲ್ಲಿನ ಅಧಿಕಾರಿಗಳು ಕಚೇರಿಯ ಸ್ವಚ್ಛತೆಯಲ್ಲಿ ತಾತ್ಸಾರ ತೋರಿದ್ದಾರೆ. ಆವರಣದಲ್ಲಿ ವಾಹನ ಪಾರ್ಕಿಂಗ್‌ ಇಲ್ಲದೆ ದನಗಳ ಜಾತ್ರೆಯಂತೆ ಆವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಜಿಲ್ಲಾದ್ಯಕ್ಷ ಮರಗಲ್‌ ಶ್ರೀನಿವಾಸ್‌, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ತೆರ್ನಹಳ್ಳಿ ವೆಂಕಿ, ನಲ್ಲಾಂಡಹಳ್ಳಿ ಶಂಕರ್‌, ಜಿಲ್ಲಾ ಉಪಾಧ್ಯಕ್ಷ ಮೋಹನ್‌ಗೌಡ, ರಾಯಲ್ಪಾಡು ಹರೀಶ್‌, ಬೂದಿಕೋಟೆ ಹರೀಶ್‌, ಗೌನಿಪಲ್ಲಿ ರೆಡ್ಡಿ, ಟಿ.ಸಿ ರಾಮು, ವಿ.ಅಂಬರೀಷ್‌, ಲೋಕೇಶ್‌, ವೆಂಕಟೇಶ್‌, ನಾರಾಯಣಸ್ವಾಮಿ, ಮುಂತಾದವರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ