ಆ್ಯಪ್ನಗರ

ಅಪಘಾತದಲ್ಲಿ ಇಬ್ಬರ ಸಾವು

ಟ್ರ್ಯಾಕ್ಟರ್‌ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ತೊರ್ನಹಳ್ಳಿ ಗ್ರಾಮದ ಸಮೀಪ ನಡೆದಿದೆ.

Vijaya Karnataka 20 Jun 2019, 2:58 pm
ಮಾಲೂರು: ಟ್ರ್ಯಾಕ್ಟರ್‌ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ತೊರ್ನಹಳ್ಳಿ ಗ್ರಾಮದ ಸಮೀಪ ನಡೆದಿದೆ.
Vijaya Karnataka Web two dead in accident
ಅಪಘಾತದಲ್ಲಿ ಇಬ್ಬರ ಸಾವು


ಮೃತಪಟ್ಟ ವ್ಯಕ್ತಿಗಳನ್ನು ತೊರ್ನಹಳ್ಳಿ ಗ್ರಾಪಂ ವ್ಯಾಪ್ತಿಯ ದೊಮ್ಮರಹಳ್ಳಿ ಗ್ರಾಮದ ವೆಂಕಟೇಶ್‌ (40) ಹಾಗೂ ಬಂಡೆ ಗುಡಿಸಲು ಗ್ರಾಮದ ಮುನಿಯಪ್ಪ (40) ಎಂದು ಗುರುತಿಸಲಾಗಿದೆ. ದೊಮ್ಮರಹಳ್ಳಿ ಗ್ರಾಮದ ವೆಂಕಟೇಶ್‌ ಹಾಗೂ ಬಂಡೆ ಗುಡಿಸಲು ಗ್ರಾಮದ ಮುನಿಯಪ್ಪ ಬುಧವಾರ ತೊರ್ನಹಳ್ಳಿ ಗ್ರಾಮದಲ್ಲಿ ಪ್ರತಿ ಬುಧವಾರ ನಡೆಯುವ ವಾರದ ಸಂತೆಗೆ ಆಗಮಿಸಿ ಸಂತೆಯಲ್ಲಿ ತರಕಾರಿ ಖರೀದಿಸಿ ಮತ್ತೆ ತಮ್ಮ ಗ್ರಾಮಗಳಿಗೆ ತೆರಳಲು ತಮ್ಮ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದರು. ತೊರ್ನಹಳ್ಳಿ-ಭೈರನಹಳ್ಳಿ ಗ್ರಾಮದ ಮಧ್ಯೆ ಎದುರುಗಡೆಯಿಂದ ಬಂದಂತಹ ಟ್ರ್ಯಾಕ್ಟರ್‌ ನಡುವೆ ಅಪಘಾತ ನಡೆದಿದ್ದು, ದೊಮ್ಮರಹಳ್ಳಿ ಗ್ರಾಮದ ವೆಂಕಟೇಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಬಂಡೆ ಗುಡಿಸಲು ಗ್ರಾಮದ ಮುನಿಯಪ್ಪ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪಿಎಸ್‌ಐ ಎಂ.ಎನ್‌.ಮುರುಳಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ