ಆ್ಯಪ್ನಗರ

ಜಾತ್ಯತೀತ ಪಕ್ಷ ಗಳ ಬೆಂಬಲದೊಂದಿಗೆ ಗೆಲುವು ನಮ್ಮದೇ ಕೆಎಚ್‌

ಜೆಡಿಎಸ್‌ ಹಾಗೂ ಜಾತ್ಯತೀತ ಪಕ್ಷ ಗಳು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ದೊಂದಿಗೆ ಸಹಕಾರ ನೀಡಿದ ಹಿನ್ನ್ನೆಲೆ ಹೆಚ್ಚಿನ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ ಎಂದು ಸಂಸದ ಕೆ.ಎಚ್‌.ಮುನಿಯಪ್ಪ ಹೇಳಿದರು.

Vijaya Karnataka 23 Apr 2019, 5:00 am
ಮಾಲೂರು: ಜೆಡಿಎಸ್‌ ಹಾಗೂ ಜಾತ್ಯತೀತ ಪಕ್ಷ ಗಳು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ದೊಂದಿಗೆ ಸಹಕಾರ ನೀಡಿದ ಹಿನ್ನ್ನೆಲೆ ಹೆಚ್ಚಿನ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ ಎಂದು ಸಂಸದ ಕೆ.ಎಚ್‌.ಮುನಿಯಪ್ಪ ಹೇಳಿದರು.
Vijaya Karnataka Web with the support of the secular parties victory is ours
ಜಾತ್ಯತೀತ ಪಕ್ಷ ಗಳ ಬೆಂಬಲದೊಂದಿಗೆ ಗೆಲುವು ನಮ್ಮದೇ ಕೆಎಚ್‌


ಖಾಸಗಿ ಕಾರ್ಯಕ್ರಮದ ನಿಮಿತ್ತ ತಾಲೂಕಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಮೈತ್ರಿ ಧರ್ಮ,ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದವರ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕೆಪಿಸಿಸಿಗೆ ವರದಿ ಸಲ್ಲಿಸಿದ್ದು, ಶಿಸ್ತು ಕ್ರಮ ಕೈಗೊಳ್ಳಲಿದೆ. ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮಣಿಸಿ ಕಾಂಗ್ರೆಸ್‌ ಅಭ್ಯರ್ಥಿ ಗೆಲವು ಸಾಧಿಸುವುದರಲ್ಲಿ ಸಂಶಯವಿಲ್ಲ. ಲೋಕಸಭೆ ಕ್ಷೇತ್ರದ 8 ವಿಧಾನಸಭೆ ಕ್ಷೇತ್ರಗಳಲ್ಲಿ ಮೈತ್ರಿ ಧರ್ಮದ ವಿರುದ್ಧ ಕೆಲ ಮುಖಂಡರು ಮುನಿಸಿಕೊಂಡು ಬಳಿಕ ಹೈಕಮಾಂಡ್‌ ನಿರ್ಣಯಕ್ಕೆ ಬದ್ಧರಾಗಿ ಕೆಲಸ ಮಾಡಿದ್ದಾರೆ. ಜಿಲ್ಲೆಯ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷ ದ ಪ್ರತಿಯೊಬ್ಬ ಕಾರ್ಯಕರ್ತ ಸಹ ಮೈತ್ರಿ ಧರ್ಮ ಪಾಲಿಸಿದ್ದಾರೆ. ಮುಳಬಾಗಿಲಿನಲ್ಲಿ ಪಕ್ಷೇತರ ಅಭ್ಯರ್ಥಿ ಘೋಷಣೆಯಾಗಿ ವಾರದೊಳಗೆ ಚುನಾವಣೆ ಎದುರಿಸಿದ್ದು, ಕಾಂಗ್ರೆಸ್‌ ಬೆಂಬಲ ನೀಡಿದ್ದ ಹಿನ್ನೆಲೆ ಗೆಲವು ಸಾಧಿಸಿದ್ದರು. ರಾಯಚೂರು, ಗುಲ್ಬರ್ಗ, ಬೀದರ್‌ ಲೋಕಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷ ದ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ಕೈಗೊಂಡು ಬರಲಾಗಿದೆ. ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಜಾತ್ಯತೀತ ಶಕ್ತಿಗಳು ಒಟ್ಟಿಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷ ದ ಬೆನ್ನೆಲುಬಾಗಿ ನಿಂತ ಕಾರಣ ಮೈತ್ರಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ.

ಶಾಸಕ ಕೆ.ವೈ. ನಂಜೇಗೌಡ ಮಾತನಾಡಿ, ಸಂಸದ ಕೆ.ಎಚ್‌.ಮುನಿಯಪ್ಪ 8 ನೇ ಬಾರಿಗೆ ದಾಖಲೆ ಜಯಗಳಿಸುತ್ತಾರೆ. ತಾಲೂಕಿನ ಪ್ರತಿಯೊಂದು ಮತಕೇಂದ್ರ ಹಾಗೂ ಲೋಕಸಭೆ ವ್ಯಾಪ್ತಿಗೆ ಒಳಪಟ್ಟ ಪ್ರತಿಯೊಂದು ಮತಕೇಂದ್ರಗಳ ಮಾಹಿತಿ ಪಡೆಯಲಾಗಿದೆ. ಮತದಾರರ ಅಭಿಪ್ರಾಯ ಪಡೆದಾಗ ಮತದಾರರು ಒಳ್ಳೆಯ ಪ್ರತಿಕ್ರಿಯೆ ನೀಡುತ್ತಿದ್ದಾರೆ. ತಾಲೂಕಿನಲ್ಲಿ 20 ಸಾವಿರಕ್ಕೂ ಹೆಚ್ಚು ಲೀಡ್‌ ಬರಲಿದೆ. ಒಟ್ಟಾರೆ ಕ್ಷೇತ್ರದಲ್ಲಿ 1ಲಕ್ಷ ಕ್ಕೂ ಹೆಚ್ಚಿನ ಮತಗಳಿಂದ ಜಯ ಸಾಧಿಸಲಿದ್ದಾರೆ. ಜಿಲ್ಲೆಯಲ್ಲಿ ಮೋದಿ ಅಲೆ ಇಲ್ಲ. ಯಾರೋ ಕೆಲವು ಯುವಕರು ಮೋದಿ, ಮೋದಿ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ವಾಸ್ತವಾಂಶ ಜಿಲ್ಲೆಯಲ್ಲಿ ಮೋದಿ ಬದಲಿಗೆ ಸಂಸದ ಕೆ.ಎಚ್‌.ಮುನಿಯಪ್ಪ ಅವರ ಪರವಾಗಿ ಅಲೆ ಹೆಚ್ಚಾಗಿದೆ. ಮುನಿಯಪ್ಪ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಸತತ 7ಬಾರಿ ಸೋಲಿಲ್ಲದೆ ಜಯ ಸಾಧಿಸಿರುವ ಕೆ.ಎಚ್‌. ಮುನಿಯಪ್ಪ ಮತ್ತೊಮ್ಮೆ 8 ನೇ ಬಾರಿಗೆ ದಾಖಲೆಯ ಜಯ ಸಾಧಿಸಲಿದ್ದಾರೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾದ ಸಿ.ರಾಜಣ್ಣ, ಟಿ.ಮುನಿಯಪ್ಪ, ಕೆಪಿಸಿಸಿ ಕಾರ್ಯದರ್ಶಿ ಸಿ.ಲಕ್ಷ್ಮೀನಾರಾಯಣ್‌, ಡಿಸಿಸಿ ಉಪಾಧ್ಯಕ್ಷ ಎಂ.ಜೆ.ಮಧುಸದನ್‌, ಪುರಸಭೆ ಸದಸ್ಯರಾದ ಎ.ಹನುಮಂತರೆಡ್ಡಿ, ಎ.ಅಶ್ವಥರೆಡ್ಡಿ, ಕೋಲಾರದ ಗೋವಿಂದರಾಜು,ಅಂಜನಿ ಸೋಮಣ್ಣ, ಎಟ್ಟಕೋಡಿ ಶಶಿಧರ್‌, ಇನ್ನಿತರರು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ