ಆ್ಯಪ್ನಗರ

ಹಾಸ್ಟೆಲ್‌ ಮಕ್ಕಳೊಂದಿಗೆ ಊಟ ಸವಿದ ಜಿಪಂ ಸಿಇಒ

ಜಿಲ್ಲೆಯ ಎಳೇಸಂದ್ರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಪಂ ಸಿಇಒ ಜಿ.ಜಗದೀಶ್‌ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ ಮಕ್ಕಳೊಂದಿಗೆ ಕುಳಿತು ಊಟ ಸವಿದರು.

Vijaya Karnataka 15 Mar 2019, 2:59 pm
ಕೋಲಾರ: ಜಿಲ್ಲೆಯ ಎಳೇಸಂದ್ರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಪಂ ಸಿಇಒ ಜಿ.ಜಗದೀಶ್‌ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ ಮಕ್ಕಳೊಂದಿಗೆ ಕುಳಿತು ಊಟ ಸವಿದರು.
Vijaya Karnataka Web zp ceo had lunch with hostel students
ಹಾಸ್ಟೆಲ್‌ ಮಕ್ಕಳೊಂದಿಗೆ ಊಟ ಸವಿದ ಜಿಪಂ ಸಿಇಒ


ಪರೀಕ್ಷಾ ಸಿದ್ಧತೆಗಳ ಕುರಿತು ಮಕ್ಕಳೊಂದಿಗೆ ಮಾತನಾಡಿದ ಸಿಇಒ ಅವರು, ಪರೀಕ್ಷೆ ಎದುರಿಸಲು ಸಿದ್ಧರಾಗಿ, ಆತ್ಮವಿಶ್ವಾಸ ಅತಿಮುಖ್ಯ, ನೀವು ಧನಾತ್ಮಕ ಚಿಂತನೆ ಬೆಳೆಸಿಕೊಂಡು ಗೆಲುವಿನತ್ತ ಮುನ್ನುಗ್ಗುವ ಶಕ್ತಿ ಬೆಳೆಸಿಕೊಳ್ಳಿ ಎಂದರು.

ಮೊರಾರ್ಜಿದೇಸಾಯಿ ಶಾಲೆಯಲ್ಲಿ ಶೇ.100 ಫಲಿತಾಂಶ ಬರಲೇಬೇಕು, ಏಕೆಂದರೆ ನಿಮಗೆ ಇಲ್ಲಿ ಊಟ, ವಸತಿ ಸೇರಿದಂತೆ ಎಲ್ಲಾ ಉತ್ತಮ ಸೌಲಭ್ಯ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಕಿವಿಮಾತು ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳಿಗೆ ಪ್ರವೇಶ ಪರೀಕ್ಷೆಯ ಮೂಲಕವೇ ಆಯ್ಕೆ ನಡೆಯುತ್ತದೆ. ಇಂತಹ ಮಕ್ಕಳು ಅನುತ್ತೀರ್ಣರಾದರೆ ಅದು ಶಿಕ್ಷ ಕರ ವೈಫಲ್ಯ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಕ್ಕಳಲ್ಲಿ ನೈತಿಕ ಮೌಲ್ಯ ಬೆಳೆಸಿ, ಪರಿಸರ ಸಂರಕ್ಷ ಣೆಯ ಮಹತ್ವ ತಿಳಿಸಿಕೊಟ್ಟು ಅವರಿಂದಲೇ ಗಿಡ ಬೆಳೆಸಿ ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷ ಕರು, ಇತರೆ ಶಿಕ್ಷ ಕರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ