ಆ್ಯಪ್ನಗರ

ಕೇಂದ್ರೀಯ ವಿದ್ಯಾಲಯ ಮಂಜೂರು

ತಾಲೂಕಿಗೆ 2016-17ನೇ ಶೈಕ್ಷಣಿಕ ವರ್ಷಕ್ಕೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದೆ. ಇತ್ತೀಚೆಗೆ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ತಹಸೀಲ್ದಾರ್ ವೇದವ್ಯಾಸ ಜಿ.ಮುತಾಲಿಕ್, ಸರಕಾರಿ ಪದವೀಪೂರ್ವ ಕಾಲೇಜು ಪ್ರಾಚಾರ್ಯ ಡಾ.ಎಚ್.ಜೆ.ನೀರಗೇರಿ ಅವರಿಗೆ ಡಿಸಿ ಮಾಹಿತಿ ನೀಡಿದ್ದಾರೆ. ಶಾಲೆ ಪ್ರವೇಶ ಪ್ರಕ್ರಿಯೆ ಇಷ್ಟರಲ್ಲೇ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಯಲಿದೆ.

ವಿಕ ಸುದ್ದಿಲೋಕ 5 Mar 2016, 6:00 am
ಕುಷ್ಟಗಿ; ತಾಲೂಕಿಗೆ 2016-17ನೇ ಶೈಕ್ಷಣಿಕ ವರ್ಷಕ್ಕೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದೆ. ಇತ್ತೀಚೆಗೆ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ತಹಸೀಲ್ದಾರ್ ವೇದವ್ಯಾಸ ಜಿ.ಮುತಾಲಿಕ್, ಸರಕಾರಿ ಪದವೀಪೂರ್ವ ಕಾಲೇಜು ಪ್ರಾಚಾರ್ಯ ಡಾ.ಎಚ್.ಜೆ.ನೀರಗೇರಿ ಅವರಿಗೆ ಡಿಸಿ ಮಾಹಿತಿ ನೀಡಿದ್ದಾರೆ. ಶಾಲೆ ಪ್ರವೇಶ ಪ್ರಕ್ರಿಯೆ ಇಷ್ಟರಲ್ಲೇ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಯಲಿದೆ. ಪ್ರಸಕ್ತ ಸಾಲಿಗೆ 5ನೇ ತರಗತಿಯಲ್ಲಿ ಕಲಿಯುತ್ತಿರುವ ಮಕ್ಕಳು ಪ್ರವೇಶ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮಕ್ಕಳನ್ನು 2016-17ನೇ ಸಾಲಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲಾಗುತ್ತಿದೆ. ಕಚೇರಿ ಚಟುವಟಿಕೆಗಳನ್ನು ನಡೆಸಲು ಜೂನಿಯರ್ ಕಾಲೇಜಿನಲ್ಲಿ ಒಂದು ಕೊಠಡಿಯನ್ನು ನೀಡಲು ಡಿಸಿ ಎಂ.ಕನಗವಲ್ಲಿ ಅವರು ಸೂಚಿಸಿದ್ದಾರೆ. ಇದೀಗ ಜೂನಿಯರ್ ಕಾಲೇಜಿನ ಕೊಠಡಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್‌ಎಂಎಸ್‌ಎ ಯೋಜನೆಯ ಆದರ್ಶ ವಿದ್ಯಾಲಯ 2016-17ನೇ ಶೈಕ್ಷಣಿಕ ವರ್ಷದಿಂದ ತಳವಗೇರಾದಲ್ಲಿ ನಿರ್ಮಾಣಗೊಂಡಿರುವ ಸ್ವಂತ ಕಟ್ಟಡಕ್ಕೆ ಸ್ಥಳಾಂತರವಾಗುತ್ತಿದೆ. ಜೂನಿಯರ್ ಕಾಲೇಜಿನಲ್ಲಿ ಆದರ್ಶ ವಿದ್ಯಾಲಯಕ್ಕಾಗಿ ಬಳಸಲಾಗುತ್ತಿದ್ದ ಕೊಠಡಿಗಳನ್ನೇ ಹೊಸದಾಗಿ ಮಂಜೂರಾಗಿರುವ ಕೇಂದ್ರೀಯ ವಿದ್ಯಾಲಯಕ್ಕೆ ನೀಡಲಾಗುತ್ತಿದೆ. ಕೇಂದ್ರೀಯ ವಿದ್ಯಾಲಯ ನಿರ್ಮಾಣಕ್ಕಾಗಿ ತಾಲೂಕಿನ ಬ್ಯಾಲಿಹಾಳ ಪ್ರದೇಶದಲ್ಲಿ 10 ಎಕರೆ ಜಮೀನನ್ನು ಗುರುತಿಸಲಾಗಿದೆ. ಕೇಂದ್ರ ಸರಕಾರಿ ನೌಕರರ ಮಕ್ಕಳಿಗೆ ಮೊ
Vijaya Karnataka Web
ಕೇಂದ್ರೀಯ ವಿದ್ಯಾಲಯ ಮಂಜೂರು


ದಲ ಆದ್ಯತೆ ನೀಡಲಾಗುತ್ತಿದ್ದು, ಉಳಿದ ಸ್ಥಾನಗಳನ್ನು ತಾಲೂಕಿನ ಮಕ್ಕಳಿಗೆ ನೀಡಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಇಒ ಎಂ.ಬಿ.ಮೋರುಟಗಿ, ಕೇಂದ್ರೀಯ ವಿದ್ಯಾಲಯ ಬಿಇಒ ಕಚೇರಿ ವ್ಯಾಪ್ತಿಗೆ ಒಳಪಡುವುದಿಲ್ಲ. ನೇರವಾಗಿ ಡಿಸಿ ಅಧೀನಕ್ಕೆ ಒಳಪಡುತ್ತದೆ. ಶಾಲೆ ಆರಂಭಗೊಳ್ಳಲು ಅಗತ್ಯ ಇರುವ ಕೊಠಡಿ, ಸ್ಥಳಾವಕಾಶವನ್ನು ರಾಜ್ಯ ಸರಕಾರದ ಶಿಕ್ಷಣ ಇಲಾಖೆ ಮಾಡಿಕೊಡುತ್ತದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ