ಆ್ಯಪ್ನಗರ

ಕರ್ತವ್ಯಲೋಪ: ಪ್ರಾಚಾರ್ಯ, ವಾರ್ಡನ್ ಅಮಾನತು

ಕರ್ತವ್ಯಲೋಪ ಆರೋಪ ಆಧರಿಸಿ, ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ನಾಗರಾಜ ಸಂಗನಾಳ ಹಾಗೂ ಪ್ರಭಾರಿ ಮೇಲ್ವಿಚಾರಕಿ ಚಂದ್ರಕಲಾ ಅವರನ್ನು ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಜ.25ರಂದು ಆದೇಶಿಸಿದೆ.

ವಿಕ ಸುದ್ದಿಲೋಕ 28 Jan 2017, 8:33 am
ಕೊಪ್ಪಳ: ಕರ್ತವ್ಯಲೋಪ ಆರೋಪ ಆಧರಿಸಿ, ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ನಾಗರಾಜ ಸಂಗನಾಳ ಹಾಗೂ ಪ್ರಭಾರಿ ಮೇಲ್ವಿಚಾರಕಿ ಚಂದ್ರಕಲಾ ಅವರನ್ನು ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಜ.25ರಂದು ಆದೇಶಿಸಿದೆ.
Vijaya Karnataka Web
ಕರ್ತವ್ಯಲೋಪ: ಪ್ರಾಚಾರ್ಯ, ವಾರ್ಡನ್ ಅಮಾನತು


ಪ್ರಭಾರಿ ಮೇಲ್ವಿಚಾರಕಿ ಚಂದ್ರಕಲಾ ಅವರು, ವಿದ್ಯಾರ್ಥಿಗಳಿಗೆ ಸಮರ್ಪಕ ಆಹಾರ ಪೂರೈಸದೇ ಇರುವುದು ಹಾಗೂ ಮಕ್ಕಳ ಹಕ್ಕುಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿದ್ದರು. ಪ್ರಾಚಾರ್ಯ ನಾಗರಾಜ ಅವರು, ಮೇಲುಸ್ತುವಾರಿ ನಿರ್ವಹಿಸದೇ ಇರುವುದು ಹಾಗೂ ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದರು. ಉಭಯ ನೌಕರರು ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ