ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ಸಮೀಪದ ಮೋರನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳದ ರೈತರೊಬ್ಬರು ಮಂಗಳವಾರ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಮಾಡಿಕೊಂಡಿದ್ದಾರೆ.

ವಿಕ ಸುದ್ದಿಲೋಕ 29 Mar 2017, 8:32 am
ಅಳವಂಡಿ (ಕೊಪ್ಪಳ); ಸಮೀಪದ ಮೋರನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳದ ರೈತರೊಬ್ಬರು ಮಂಗಳವಾರ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಮಾಡಿಕೊಂಡಿದ್ದಾರೆ.
Vijaya Karnataka Web
ಸಾಲಬಾಧೆ: ರೈತ ಆತ್ಮಹತ್ಯೆ


ಜಿಂಕಪ್ಪ (ಸಣ್ಣವೀರಪ್ಪ) ವಡ್ಡಟ್ಟಿ (55) ಮೃತ ರೈತ. ಅವರ ಹೆಸರಿನಲ್ಲಿ ಮೂರು ಎಕರೆ ಜಮೀನಿದೆ. ಕೃಷಿ ಚಟುವಟಿಕೆಗೆ ಬ್ಯಾಂಕಿನಲ್ಲಿ 2 ಲಕ್ಷ ರೂ. ಹಾಗೂ ಖಾಸಗಿಯಾಗಿ 3ಲಕ್ಷ ರೂ. ಸಾಲಮಾಡಿದ್ದರು. ಬೆಳೆ ಕೈಕೊಟ್ಟಿದ್ದರಿಂದ ಸಾಲ ತೀರಿಸಲಾಗದೇ ನೊಂದಿದ್ದರು. ಹೊಲದಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕ್ರಿಮಿನಾಶಕ ಕುಡಿದು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ