ಆ್ಯಪ್ನಗರ

ಜಾಮೀನಿನ ಮೇಲೆ ಬಿಡುಗಡೆ

ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪಕ್ಕೆ ಸಂಬಂಧಿಸಿ ಅರೆಸ್ಟ್ ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಸಂಸದ ಸಂಗಣ್ಣ ಕರಡಿ ಸೇರಿ ಬಿಜೆಪಿಯ 18 ಮುಖಂಡರು ಇಲ್ಲಿನ ಸಿಜೆಎಂ ನ್ಯಾಯಾಲಯಕ್ಕೆ ಬುಧವಾರ ಹಾಜರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡರು.

ವಿಕ ಸುದ್ದಿಲೋಕ 27 Apr 2017, 7:57 am
ಕೊಪ್ಪಳ: ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪಕ್ಕೆ ಸಂಬಂಧಿಸಿ ಅರೆಸ್ಟ್ ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಸಂಸದ ಸಂಗಣ್ಣ ಕರಡಿ ಸೇರಿ ಬಿಜೆಪಿಯ 18 ಮುಖಂಡರು ಇಲ್ಲಿನ ಸಿಜೆಎಂ ನ್ಯಾಯಾಲಯಕ್ಕೆ ಬುಧವಾರ ಹಾಜರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡರು.
Vijaya Karnataka Web
ಜಾಮೀನಿನ ಮೇಲೆ ಬಿಡುಗಡೆ


ನಗರದ ಅಶೋಕ ವೃತ್ತದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ 2014ರಲ್ಲಿ ಹೋರಾಟ ನಡೆದಿತ್ತು. ‘‘ಆಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶಿವರಾಜ ತಂಗಡಗಿ ಅವರು ಜಿಲ್ಲೆಯ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿದ್ದಾರೆ. ಕೇವಲ ಕನಕಗಿರಿಗೆ ಮಾತ್ರ ಸಚಿವರಾಗಿದ್ದಾರೆ’’ ಎಂದು ಆರೋಪಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಜೆಪಿ ಮುಖಂಡರು ಸಂಚಾರ ನಡೆಸಿದ್ದರು. ಅಂದಿನ ಸಂಸದ ಶಿವರಾಮನಗೌಡ, ಪಕ್ಷದ ಅಂದಿನ ಜಿಲ್ಲಾಧ್ಯಕ್ಷ, ಹಾಲಿ ಸಂಸದ ಸಂಗಣ್ಣ ಕರಡಿ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಶಾಸಕರಾದ ಪರಣ್ಣ ಮನವಳ್ಳಿ, ಹಾಲಪ್ಪ ಆಚಾರ್, ಮುಖಂಡರಾದ ಎಚ್.ಗಿರೇಗೌಡ, ಬಸವರಾಜ ದಢೇಸುಗೂರು ಸೇರಿ 40ಕ್ಕೂ ಹೆಚ್ಚು ಜನರ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ದೂರು ಆಧರಿಸಿ, ಸಿಎಂಜೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಶಾಸಕ ದೊಡ್ಡನಗೌಡ, ಮಾಜಿ ಎಮ್ಮೆಲ್ಸಿ ಹಾಲಪ್ಪ ಆಚಾರ್ ಸೇರಿ 22 ಮುಖಂಡರು ನ್ಯಾಯಾಲಯಕ್ಕೆ ಇತ್ತೀಚೆಗೆ ಹಾಜರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಆದರೆ, ಸಂಸದ ಸಂಗಣ್ಣ ಕರಡಿ ಸೇರಿ 18 ಜನರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಏ.25ರಂದು ಅರೆಸ್ಟ್ ವಾರೆಂಟ್ ಜಾರಿಯಾಗಿತ್ತು. ನ್ಯಾಯಾಲಯಕ್ಕೆ ಹಾಜರಾದ ಅವರು ತಲಾ 10 ಸಾವಿರ ರೂ. ಬಾಂಡ್ ಶ್ಯೂರಿಟಿ ಸಲ್ಲಿಸಿ ಬಿಡುಗಡೆಗೊಂಡರು. ಬಿಜೆಪಿ ಮುಖಂಡರ ಪರ ವಕೀಲ ರಾಘವೇಂದ್ರ ಪಾನಘಂಟಿ, ವಿ.ಎಂ.ಭೂಸನೂರಮಠ ವಾದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ