ಲಂಚಕ್ಕೆ ಬೇಡಿಕೆ: ಆಹಾರ ಸುರಕ್ಷತಾ ಅಧಿಕಾರಿ ಮೇಲೆ ಎಸಿಬಿ ದಾಳಿ
ತಾಲೂಕಿನ ಕೂಕನಪಳ್ಳಿ ಗ್ರಾಮದ ಬಸಪ್ಪ ಗುಳದಳ್ಳಿ ಅವರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳಿ ದಾಳಿ ನಡೆಸಿದ್ದಾರೆ.
Vijaya Karnataka Web 30 Apr 2019, 3:25 pm
ಕೊಪ್ಪಳ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಡಾ.ಎಂ.ಎಂ.ಕಟ್ಟಿಮನಿ ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ.
ತಾಲೂಕಿನ ಕೂಕನಪಳ್ಳಿ ಗ್ರಾಮದ ಬಸಪ್ಪ ಗುಳದಳ್ಳಿ ಅವರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳಿ ದಾಳಿ ನಡೆಸಿದ್ದಾರೆ.
ಆಹಾರ ಸುರಕ್ಷತಾ ಪರವಾನಗಿ ವಿತರಿಸಲು ಅಧಿಕಾರಿ ಕಟ್ಟಿಮನಿ 2 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಬಸಪ್ಪ ಅವರು ಎಸಿಬಿಗೆ ದೂರು ಸಲ್ಲಿಸಿದ್ದರು. ದೂರಿನನ್ವಯ ಎಸಿಬಿ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಆರೋಪಿ ಡಾ.ಕಟ್ಟಿಮನಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಡಾ.ಎಂ.ಎಂ.ಕಟ್ಟಿಮನಿ ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ.
ತಾಲೂಕಿನ ಕೂಕನಪಳ್ಳಿ ಗ್ರಾಮದ ಬಸಪ್ಪ ಗುಳದಳ್ಳಿ ಅವರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳಿ ದಾಳಿ ನಡೆಸಿದ್ದಾರೆ.
ಆಹಾರ ಸುರಕ್ಷತಾ ಪರವಾನಗಿ ವಿತರಿಸಲು ಅಧಿಕಾರಿ ಕಟ್ಟಿಮನಿ 2 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಬಸಪ್ಪ ಅವರು ಎಸಿಬಿಗೆ ದೂರು ಸಲ್ಲಿಸಿದ್ದರು. ದೂರಿನನ್ವಯ ಎಸಿಬಿ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಆರೋಪಿ ಡಾ.ಕಟ್ಟಿಮನಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.