ಆ್ಯಪ್ನಗರ

ವೈದ್ಯಾಧಿಕಾರಿಗಳ ಕೊರತೆ ನಿವಾರಣೆಗೆ ಯತ್ನ: ಸಚಿವ

ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ರಾಜ್ಯದ ನಾನಾ ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯಾಧಿಕಾರಿಗಳ ಕೊರತೆ ನಿವಾರಣೆಗೆ ಯತ್ನಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹೇಳಿದರು.

Vijaya Karnataka 30 Jun 2018, 12:00 am
ಕುಷ್ಟಗಿ (ಕೊಪ್ಪಳ): ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ರಾಜ್ಯದ ನಾನಾ ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯಾಧಿಕಾರಿಗಳ ಕೊರತೆ ನಿವಾರಣೆಗೆ ಯತ್ನಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹೇಳಿದರು.
Vijaya Karnataka Web attempt to eliminate lack of medical officers minister
ವೈದ್ಯಾಧಿಕಾರಿಗಳ ಕೊರತೆ ನಿವಾರಣೆಗೆ ಯತ್ನ: ಸಚಿವ


ಇಲ್ಲಿನ ತಾಲೂಕು ಆಸ್ಪತ್ರೆಗೆ ಶುಕ್ರವಾರ ದಿಢೀರ್ ಭೇಟಿನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘‘ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಬೇರೆ ಬೇರೆಯಲ್ಲ. ಎರಡೂ ಸರಕಾರದ ಅಂಗ ಸಂಸ್ಥೆಗಳಾಗಿವೆ. ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್ ಪದವೀಧರ ವೈದ್ಯಾಧಿಕಾರಿಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಎಂಬಿಬಿಎಸ್ ಪೂರ್ಣಗೊಳಿಸಿದ ವೈದ್ಯರು ಕಡ್ಡಾಯವಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷ ಸೇವೆ ಸಲ್ಲಿಸಬೇಕು ಎಂಬ ನಿಯಮ ಜಾರಿಗೊಳಿಸಲಾಗಿದೆ’’ ಎಂದರು.

‘‘ವೈದ್ಯಕೀಯ ಕಾಲೇಜುಗಳಿರುವಲ್ಲಿ ಹಾಗೂ ಸುತ್ತಲಿನ ಸ್ಥಳಗಳಲ್ಲಿರುವ ಆರೋಗ್ಯ ಕೇಂದ್ರಗಳಿಗೆ ಕಾಲೇಜಿನ ಉಪನ್ಯಾಸಕರು ಮತ್ತು ತಜ್ಞ ವೈದ್ಯಾಧಿಕಾರಿಗಳ ಸೇವೆ ಒದಗಿಸಲು ಸೂಚಿಸಲಾಗಿದೆ. ಕೊಪ್ಪಳದಲ್ಲಿ ವೈದ್ಯಕೀಯ ಕಾಲೇಜು ಇರುವುದರಿಂದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ಕೊರತೆ ಅಷ್ಟಾಗಿ ಕಂಡುಬರುತ್ತಿಲ್ಲ. ರಾಜ್ಯಾದ್ಯಂತ ಬಹುತೇಕ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳ ಕೊರತೆಯೇ ದೊಡ್ಡ ಸಮಸ್ಯೆಯಾಗಿದೆ’’ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ