ಆ್ಯಪ್ನಗರ

ಸ್ವಚ್ಛತೆ ಬಗ್ಗೆ ಜಾಗೃತಿ: ಬೀದಿ ನಾಟಕ ಪ್ರದರ್ಶನ

ನಗರಸಭೆ ಹಾಗೂ ಕೊಪ್ಪಳ ದ್ವಾರಕ ಸಮುದಾಯ ಅಭಿವೃದ್ಧಿ ಸಂಸ್ಥೆಯಿಂದ ಸ್ವಚ್ಛ ಭಾರತ ಯೋಜನೆಯಡಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ನಗರದ ಗಾಂಧಿ ವೃತ್ತದದಲ್ಲಿ ಸೋಮವಾರ ಬೀದಿ ನಾಟಕ ಪ್ರದರ್ಶಿಸಲಾಯಿತು.

ವಿಕ ಸುದ್ದಿಲೋಕ 22 Mar 2016, 5:28 am
ಗಂಗಾವತಿ; ನಗರಸಭೆ ಹಾಗೂ ಕೊಪ್ಪಳ ದ್ವಾರಕ ಸಮುದಾಯ ಅಭಿವೃದ್ಧಿ ಸಂಸ್ಥೆಯಿಂದ ಸ್ವಚ್ಛ ಭಾರತ ಯೋಜನೆಯಡಿ ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ನಗರದ ಗಾಂಧಿ ವೃತ್ತದದಲ್ಲಿ ಸೋಮವಾರ ಬೀದಿ ನಾಟಕ ಪ್ರದರ್ಶಿಸಲಾಯಿತು.
Vijaya Karnataka Web awareness about cleanliness
ಸ್ವಚ್ಛತೆ ಬಗ್ಗೆ ಜಾಗೃತಿ: ಬೀದಿ ನಾಟಕ ಪ್ರದರ್ಶನ


ನಗರಸಭೆ ಮಾಜಿ ಅಧ್ಯಕ್ಷ ರಾಘವೇಂದ್ರ ಶ್ರೇಷ್ಠಿ ಮಾತನಾಡಿ, ಸ್ವಚ್ಛ ಭಾರತ ಯೋಜನೆಯಲ್ಲಿ ನಗರದ ಪ್ರತಿಯೊಂದು ಮನೆಗೂ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗಿದೆ. ಫಲಾನುಭವಿಗಳು ಶೌಚಾಲಯಗಳನ್ನು ನಿರ್ಮಿಸಿಕೊಂಡು ಬಳಕೆ ಮಾಡದೇ ಹಾಗೇ ಬಿಡುವುದು ತಪ್ಪು. ಸ್ವಚ್ಛತೆ ಕಾಪಾಡಲು ಎಲ್ಲರ ಸಹಕಾರ ಅಗತ್ಯ ಎಂದರು. ದ್ವಾರಕ ಸಮುದಾಯ ಅಭಿವೃದ್ಧಿ ಸಂಸ್ಥೆಯ ಕಲಾ ತಂಡವು, ಪರಿಸರ ಮಾಲಿನ್ಯದಿಂದ ಉಂಟಾಗುವ ತೊಂದರೆಗಳ ಬಗ್ಗೆ ಗೀತೆ, ನೃತ್ಯದ ಮೂಲಕ ಜಾಗೃತಿ ಮೂಡಿಸಿತು.

ನಗರಸಭೆ ಪೌರಾಯುಕ್ತ ಸಿ.ಆರ್. ರಂಗನಾಥ, ಆರೋಗ್ಯ ನಿರೀಕ್ಷಕರಾದ ಕಿಶನರಾವ್, ದತ್ತಾತ್ರೇಯ ಹೆಗಡೆ, ದೇವೇಂದ್ರಪ್ಪ, ಕಲಾ ತಂಡದ ಕಲಾವಿದರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ