ಆ್ಯಪ್ನಗರ

‘ನೀರಿನ ಅಭಾವವಾಗದಂತೆ ಎಚ್ಚರಿಕೆ ವಹಿಸಿ’

ತಾಲೂಕಿನಲ್ಲಿ ಕುಡಿವ ನೀರಿನ ಅಭಾವವಾಗದಂತೆ ಅಧಿಕಾರಿಗಳು ಮನ್ನೆಚ್ಚರಿಕೆ ವಹಿಸಬೇಕು ಎಂದು ಸಿಇಒ ಆರ್.ರಾಮಚಂದ್ರನ್ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದರು. ಪಟ್ಟಣದ ತಾ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ ಕುಡಿವ ನೀರು ಹಾಗೂ ಬರ ನಿರ್ವಹಣೆ ಸಭೆಯನ್ನುದ್ದೇಶಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಎಲ್ಲೆಡೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನೀರಿನ ತೊಂದರೆ ಎದುರಿಸುವ ಗ್ರಾಮಗಳಲ್ಲಿ ತ್ವರಿತವಾಗಿ ನೀರು ಒದಗಿಸಬೇಕು. ಅಗತ್ಯವಿದ್ದ ಕಡೆ ಜಾನುವಾರು ಹಾಗೂ ಸಾರ್ವಜನಿಕರ ಅನುಕೂಲಕ್ಕೆ ಬೋರ್‌ವೆಲ್, ಟ್ಯಾಂಕರ್ ಮೂಲಕ ನೀರು ಕಲ್ಪಿಸಬೇಕೆಂದು ಹೇಳಿದರು.

ವಿಕ ಸುದ್ದಿಲೋಕ 2 Apr 2016, 5:55 am
ಯಲಬುರ್ಗಾ ; ತಾಲೂಕಿನಲ್ಲಿ ಕುಡಿವ ನೀರಿನ ಅಭಾವವಾಗದಂತೆ ಅಧಿಕಾರಿಗಳು ಮನ್ನೆಚ್ಚರಿಕೆ ವಹಿಸಬೇಕು ಎಂದು ಸಿಇಒ ಆರ್.ರಾಮಚಂದ್ರನ್ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದರು. ಪಟ್ಟಣದ ತಾ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ ಕುಡಿವ ನೀರು ಹಾಗೂ ಬರ ನಿರ್ವಹಣೆ ಸಭೆಯನ್ನುದ್ದೇಶಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಎಲ್ಲೆಡೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನೀರಿನ ತೊಂದರೆ ಎದುರಿಸುವ ಗ್ರಾಮಗಳಲ್ಲಿ ತ್ವರಿತವಾಗಿ ನೀರು ಒದಗಿಸಬೇಕು. ಅಗತ್ಯವಿದ್ದ ಕಡೆ ಜಾನುವಾರು ಹಾಗೂ ಸಾರ್ವಜನಿಕರ ಅನುಕೂಲಕ್ಕೆ ಬೋರ್‌ವೆಲ್, ಟ್ಯಾಂಕರ್ ಮೂಲಕ ನೀರು ಕಲ್ಪಿಸಬೇಕೆಂದು ಹೇಳಿದರು.
Vijaya Karnataka Web be attention for shortage of drinking water
‘ನೀರಿನ ಅಭಾವವಾಗದಂತೆ ಎಚ್ಚರಿಕೆ ವಹಿಸಿ’


ತಾ.ಪಂ.ಇಒ ಕೆ.ತಿಮ್ಮಪ್ಪ ಮಾತನಾಡಿ, ತಾಲೂಕಿನಾದ್ಯಂತ ಗುಳೆ ತಡೆ ಅಭಿಯಾನದ ಮೂಲಕ ಜನರು ವಲಸೆ ಹೋಗದಂತೆ ಜಾಗೃತಿ ಮೂಡಿಸಲಾಗಿದೆ. ಅಲ್ಲದೇ ನರೇಗಾ ಯೋಜನೆಯಡಿ ಕೆಲಸ ಪಡೆದುಕೊಳ್ಳಲು ಮನೆ ಮನೆಗೆ ಭೇಟಿ ನೀಡಿ ಸಿಬ್ಬಂದಿ ಉದ್ಯೋಗ ಮಾಹಿತಿ ನೀಡಿದ್ದಾರೆ. ಕಾರ್ಮಿಕರ ಉದ್ಯೋಗಕ್ಕೆ ಅನುಮೋದನೆಗೆ ಪ್ರಸಕ್ತ ಸಾಲಿನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ತಾಲೂಕಿನ ಕೆಲ ಗ್ರಾಮಗಳಲ್ಲಿ ಕುಡಿವ ನೀರಿನ ಬವಣೆ ಕಂಡು ಬಂದಿದೆ. ಬೋರ್‌ವೆಲ್ ಕೊರೆಸಲು ಅನುಕೂಲ ಮಾಡಿಕೊಡಬೇಕು ಎಂದು ಪಿಡಿಒಗಳು ಮೇಲಧಿಕಾರಿಗಳ ಗಮನ ಸೆಳೆದರು. ಜಿಲ್ಲಾ ಉಪಕಾರ್ಯದರ್ಶಿ ನರೇಂದ್ರ ತೊರವಿ, ಬಿಸಿಎಂ ಅಧಿಕಾರಿ ಬಿ.ಕಲ್ಲೇಶ, ಅಧಿಕಾರಿಗಳಾದ ಕೆ.ಬಿ.ಗಂಜಿಹಾಳ್, ವೆಂಕಪ್ಪ, ಪಿಡಿಒ ಮತ್ತು ಕಾರ್ಯದರ್ಶಿಗಳು ಇನ್ನಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ