ಆ್ಯಪ್ನಗರ

ಹೈ-ಕ ಅಭಿವೃದ್ಧಿಯ ಕಪ್ಪು ಪತ್ರ ಹೊರಡಿಸುವೆ: ಬಿಎಸ್‌ವೈ

ಮುಖ್ಯಮಂತ್ರಿ ಪ್ರಾಮಾಣಿಕರಿದ್ದರೆ ಹೈದರಾಬಾದ್ ಕರ್ನಾಟಕದ ಅಭಿವೃದ್ದಿ ಕುರಿತು ಶ್ವೇತ ಪತ್ರ ಹೊರಡಿಸಬೇಕು, ಇಲ್ಲದಿದ್ದರೆ ನಾನು ಕಪ್ಪು ಪತ್ರ ಹೊರಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.

Vijaya Karnataka Web 16 Dec 2017, 12:32 pm
ಕೊಪ್ಪಳ: ಮುಖ್ಯಮಂತ್ರಿ ಪ್ರಾಮಾಣಿಕರಿದ್ದರೆ ಹೈದರಾಬಾದ್ ಕರ್ನಾಟಕದ ಅಭಿವೃದ್ದಿ ಕುರಿತು ಶ್ವೇತ ಪತ್ರ ಹೊರಡಿಸಬೇಕು, ಇಲ್ಲದಿದ್ದರೆ ನಾನು ಕಪ್ಪು ಪತ್ರ ಹೊರಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.
Vijaya Karnataka Web bsy questioned hyderabad karnataka development
ಹೈ-ಕ ಅಭಿವೃದ್ಧಿಯ ಕಪ್ಪು ಪತ್ರ ಹೊರಡಿಸುವೆ: ಬಿಎಸ್‌ವೈ


ಗಂಗಾವತಿಯಲ್ಲಿ ಮಾತನಾಡಿದ ಅವರು, ಈಗಾಗಲೇ 102 ವಿಧಾನಸಭೆ ಕ್ಷೇತ್ರಗಳಲ್ಲಿ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ನಡೆದಿದ್ದು ಉತ್ಸಾಹದಿಂದ ಮುಂದುವರೆಯುತ್ತಿದೆ. ಜನರಲ್ಲಿ ಸರಕಾರ ವಿರುದ್ಧದ ಅಸಮಾಧಾನ ಆಕ್ರೋಶವಾಗಿದ್ದು ಯಾತ್ರೆಗೆ ಜನಬೆಂಬಲ ವ್ಯಕ್ತವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅಭಿವೃದ್ದಿ ವಿಚಾರದಲ್ಲಿ ಸುಳ್ಳು ಹೇಳುತ್ತಿದ್ದಾರೆ ಎಂದರು.

45 ಸಾವಿರ ಹುದ್ದೆಗಳು ಖಾಲಿ ಇವೆ. ಭರ್ತಿ ಮಾಡುವ ಗೋಜಿಗೆ ಹೋಗಿಲ್ಲ. ಹೈ.ಕ. ಭಾಗವನ್ನು ಸರಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಹೈ.ಕ‌. ಭಾಗದ ಅಭಿವೃದ್ದಿಗೆ 4512 ಕೋಟಿ ನೀಡಬೇಕಿತ್ತು. ಆದರೆ, ಪೂರ್ಣ ಪ್ರಮಾಣದ ಅನುದಾನ ಬಿಡುಗಡೆ ಮಾಡಲಿಲ್ಲ. ಬಿಡುಗಡೆಯಾದ ಹಣವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಂಡಿಲ್ಲ. ಹೈ.ಕ. ಅಭಿವೃದ್ದಿಯಾಗದಿರುವ ಕುರಿತು ನಾನು ಕಪ್ಪು ಪತ್ರ ಹೊರಡಿಸುವೆ. ಇವಿಎಂ ಲೋಪ ಕುರಿತು ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಸಭೆ ಕರೆದಿತ್ತು. ಇವಿಎಂ ತಪ್ಪಿನ ಕುರಿತು ಯಾವ ಪಕ್ಷವೂ ಸಾಬೀತು ಮಾಡಿಲ್ಲ ಎಂದು ಬಿಎಸ್‌ವೈ ಹೇಳಿದರು.

ಈಗ ಗುಜರಾತ್, ಹಿಮಾಚಲ ಪ್ರದೇಶದ ಚುನಾವಣೆ ನೋಡಿ ಏನೇನೋ ಮಾತನಾಡುತ್ತಾರೆ. ಸಿದ್ದರಾಮಯ್ಯ ಒಬ್ಬ ಅಯೋಗ್ಯ. ಸಿದ್ದರಾಮಯ್ಯ ಬೊಗಳೆ ದಾಸಯ್ಯ, ನಾನು ಲಂಚ ತೆಗದುಕೊಂಡಿದ್ದೇನೆ ಎಂದು ಯಾವ ನ್ಯಾಯಾಲಯ ಹೇಳಿದೆ. 42 ಕೇಸ್ ಗಳಲ್ಲಿ10 ಕೇಸ್ ಗಳು ಯಾವುವು ಎಂದು ಹೇಳಲಿ ಎಂದು ಯಡಿಯೂರಪ್ಪ ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 56 ದೂರುಗಳಿವೆ. ಈ ಪಟ್ಟಿಯನ್ನು ನಾನು ಕೊಡುತ್ತೇನೆ. ಸಿದ್ದರಾಮಯ್ಯ ಬಗ್ಗೆ ಅವರ ಪಕ್ಷದಲ್ಲೆ ಒಮ್ಮತವಿಲ್ಲ. 20 ಜನ ಹಿಂದು ಯುವಕರ ಕೊಲೆಯಾಗಿರುವುದು ಸತ್ಯ. ಜಾತಿ ವಿಷ ಬೀಜ ಬಿತ್ತಿ ಸಮಾಜ ಒಡೆಯುತ್ತಿರುವುದು ಸಿದ್ದರಾಮಯ್ಯ. ಬಿಜೆಪಿ, ಆರ್ ಎಸ್ ಎಸ್ ಕಾರ್ಯಕರ್ತರ ವಿರುದ್ಧ ಸಿದ್ದರಾಮಯ್ಯ ಸರಕಾರ ಸುಳ್ಳುಕೇಸ್ ಹಾಕುತ್ತಿದೆ. ಮುಖ್ಯಮಂತ್ರಿ ಮನಬಂದಂತೆ ಮಾತನಾಡುತ್ತಿದ್ದಾರೆ. ಜನ ಚುನಾವಣೆಯಲ್ಲಿ ಪಾಠ ಕಲಿಸುತ್ತಾರೆ. ರಾಜ್ಯದಲ್ಲಿ 150 ಸೀಟ್ ಗೆಲ್ಲುತ್ತೇವೆ. ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ