ಆ್ಯಪ್ನಗರ

ಇಬ್ಬರ ವಿರುದ್ಧ ಪ್ರಕರಣ ದಾಖಲು

ಟಿಪ್ಪು ಸುಲ್ತಾನ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರಗಳನ್ನು ಅವಹೇಳನಕಾರಿ ರೀತಿಯಲ್ಲಿ ಫೇಸ್‌ಬುಕ್‌ಗೆ ಪೋಸ್ಟ್ ಮಾಡಿದ ಆರೋಪ ಆಧರಿಸಿ ಇಬ್ಬರ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.

Vijaya Karnataka 27 Oct 2017, 8:00 am
ಕಾರಟಗಿ (ಕೊಪ್ಪಳ): ಟಿಪ್ಪು ಸುಲ್ತಾನ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರಗಳನ್ನು ಅವಹೇಳನಕಾರಿ ರೀತಿಯಲ್ಲಿ ಫೇಸ್‌ಬುಕ್‌ಗೆ ಪೋಸ್ಟ್ ಮಾಡಿದ ಆರೋಪ ಆಧರಿಸಿ ಇಬ್ಬರ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
Vijaya Karnataka Web case against two
ಇಬ್ಬರ ವಿರುದ್ಧ ಪ್ರಕರಣ ದಾಖಲು


ತಿರುಚಿದ ಹಾಗೂ ಅವಹೇಳನಕಾರಿ ಭಾವಚಿತ್ರಗಳನ್ನು ಕುಸುಮಾ ಎನ್ನುವವರು, ಫೇಸ್‌ಬುಕ್‌ನಲ್ಲಿ ಅ.24ರಂದು 7.40ಕ್ಕೆ ಪೋಸ್ಟ್‌ಮಾಡಿದ್ದರು. ಈ ಪೋಸ್ಟ್ ಅನ್ನು ಬೂದಗುಂಪಾ ಗ್ರಾಮದ ಪಂಪನಗೌಡ ಜಂತಗಲ್ ಅವರು ಅ.25ರಂದು ಬೆಳಗ್ಗೆ 8ಕ್ಕೆ ಶೇರ್ ಮಾಡಿದ್ದರು. ಈ ಪೋಸ್ಟ್ ಗಮನಿಸಿದ ಕಾರಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂಬಣ್ಣ ನಾಯಕ ಹಾಗೂ ಪಕ್ಷದ ಇತರ ಘಟಕಗಳ ಪದಾಧಿಕಾರಿಗಳು, ಪಂಪನಗೌಡ ಜಂತಗಲ್ ಹಾಗೂ ಕುಸುಮಾ ವಿರುದ್ಧ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ