ಆ್ಯಪ್ನಗರ

ಬರ ಪ್ರದೇಶ ಘೋಷಣೆಗೆ ಆಗ್ರಹ

ಕೊಪ್ಪಳ ಜಿಲ್ಲೆಯನ್ನು ಬರ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಹಿತ ವೇದಿಕೆ ಕಾರ್ಯಕರ್ತರು ಪಟ್ಟಣದ ತಹಸೀಲ್ದಾರ್‌ ರಮೇಶ ಅಳವಂಡಿಕರ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

Vijaya Karnataka 7 Aug 2018, 5:00 am
ಯಲಬುರ್ಗಾ : ಕೊಪ್ಪಳ ಜಿಲ್ಲೆಯನ್ನು ಬರ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಹಿತ ವೇದಿಕೆ ಕಾರ್ಯಕರ್ತರು ಪಟ್ಟಣದ ತಹಸೀಲ್ದಾರ್‌ ರಮೇಶ ಅಳವಂಡಿಕರ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
Vijaya Karnataka Web KPL-06YLB04


ಸಂಘಟನೆ ತಾಲೂಕಾಧ್ಯಕ್ಷ ಇಮಾಮಸಾಬ್‌ ಮುಜಾವರ ಮಾತನಾಡಿ, ತಾಲೂಕಿನಲ್ಲಿ 46,857 ಹೆಕ್ಟೇರ್‌ ಪ್ರದೇಶ ಬಿತ್ತನೆಯಾಗಿದ್ದು,ಅಂದಾಜು 50 ದಿನಗಳಿಂದ ಮಳೆಯಾಗದೇ ರೈತರು ಬಿತ್ತಿರುವ ಬೆಳೆಗಳಾದ ಹೆಸರು, ಮೆಕ್ಕೆಜೋಳ, ಸಜ್ಜೆ,ತೊಗರಿ, ಸೇಂಗಾ ಬೆಳೆಗಳು ಒಣಗಿವೆ. ಈ ಬಗ್ಗೆ ಸಂಬಂಧಿಸಿದ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಬೆಳೆ ಹಾನಿ ಬಗ್ಗೆ ಸರ್ವೆ ಮಾಡದೇ ನಿರ್ಲಕ್ಷ ್ಯ ವಹಿಸಿದ್ದಾರೆ. ಬೆಳೆ ವಿಮೆ ಪಾವತಿಸದೇ ರೈತರಿಗೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ. ಕಳೆದ ವರ್ಷದ ಬೆಳೆ ವಿಮೆ ರೈತರ ಖಾತೆಗೆ ಜಮಾ ಮಾಡಬೇಕು. ಪ್ರಸಕ್ತ ಸಾಲಿನ ಬೆಳೆ ನಷ್ಟದ ಬಗ್ಗೆ ಸರಿಯಾದ ರೀತಿಯಲ್ಲಿ ಸರ್ವೆ ನಡೆಸಬೇಕು. ಮನವಿಗೆ ಸ್ಪಂದಿಸದೇ ಇದ್ದಲ್ಲಿ ತಾಲೂಕು ಕಚೇರಿ ಎದುರು ನಾನಾ ಸಂಘಟನೆಗಳು ಹಾಗೂ ರೈತರೊಂದಿಗೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ಮನವಿ ಸ್ವೀಕರಿಸಿದ ತಹಸೀಲ್ದಾರ್‌ ಮಾತನಾಡಿ, ಈ ಮನವಿ ಪತ್ರವನ್ನು ಮುಖ್ಯ ಮಂತ್ರಿಗಳಿಗೆ ಕಳಿಸಲಾಗುವುದು ಎಂದು ತಿಳಿಸಿದರು.

ಸಂಘಟನೆ ಕಾರ್ಯಕರ್ತರಾದ ದೇವಪ್ಪ ಪರಂಗಿ, ಬಸವರಾಜ ಕೋವಿ, ಯಮನೂರಪ್ಪ ಎಚ್‌.,ಭರಮೇಂದ್ರ, ಯಮನೂರಪ್ಪ ಈಳಿಗೇರ್‌, ನಿಂಗಪ್ಪ ಜರಕುಂಟಿ, ಶರಣಪ್ಪ ಮಾಟಲದಿನ್ನಿ, ಹನುಮಗೌಡ ಮಾಲಿ ಪಾಟೀಲ್‌, ಶರಣಪ್ಪ ಮಡಿವಾಳ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ