ಆ್ಯಪ್ನಗರ

ದೇವಿ ದರ್ಶನಕ್ಕೆ ಭಕ್ತ ಸಾಗರ

ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕೆ, ಅಧಿಕ ಮಾಸದ ಕಾರ ಹುಣ್ಣಿಮೆ ನಿಮಿತ್ತ ಭಕ್ತಸಾಗರವೇ ಮಂಗಳವಾರ ಹರಿದುಬಂದಿತು. ಶ್ರೀ ದೇವಿ ಮೂರ್ತಿಗೆ ಬೆಳಗ್ಗೆಯಿಂದ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿ, ವಿಧಾನಗಳನ್ನು ನೆರವೇರಿಸಲಾಯಿತು.

Vijaya Karnataka 30 May 2018, 5:00 am
ಕೊಪ್ಪಳ: ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕೆ, ಅಧಿಕ ಮಾಸದ ಕಾರ ಹುಣ್ಣಿಮೆ ನಿಮಿತ್ತ ಭಕ್ತಸಾಗರವೇ ಮಂಗಳವಾರ ಹರಿದುಬಂದಿತು. ಶ್ರೀ ದೇವಿ ಮೂರ್ತಿಗೆ ಬೆಳಗ್ಗೆಯಿಂದ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿ, ವಿಧಾನಗಳನ್ನು ನೆರವೇರಿಸಲಾಯಿತು.
Vijaya Karnataka Web devi darshan is a devotional ocean
ದೇವಿ ದರ್ಶನಕ್ಕೆ ಭಕ್ತ ಸಾಗರ

ರಾಜ್ಯ ಸೇರಿದಂತೆ ಹೊರ ರಾಜ್ಯದಿಂದಲೂ ಭಕ್ತರು ಆಗಮಿಸಿದ್ದರು. ಕೆಲವರು ಒಂದು ದಿನ ಮುನ್ನವೇ ಆಗಮಿಸಿ ಬೆಳಗ್ಗೆ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿ ದೇವಿಗೆ ಪೂಜೆ ಸಲ್ಲಿಸಿದರು. ಅಧಿಕ ಮಾಸ, ಹುಣ್ಣಿಮೆ ಹಾಗೂ ಮಂಗಳವಾರ ಆಗಿರುವ ಹಿನ್ನೆಲೆಯಲ್ಲಿ ಶ್ರೀ ದೇವಿ ಮೂರ್ತಿ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ದೇವಾಲಯ ಆವರಣದಲ್ಲಿ ಪ್ರಾಣಿ ಬಲಿ ನಿಷೇಧದ ಹಿನ್ನೆಲೆಯಲ್ಲಿ ದೇವಾಲಯ ಹೊರ ವಲಯದ ಸುತ್ತಲಿನ ಪ್ರದೇಶದಲ್ಲಿ ಕೆಲವರು ತಮ್ಮ ಹರಕೆ ತೀರಿಸಲು ಕುರಿ ಬಲಿ ನೀಡಿದರು. ಗಂಗಾವತಿ, ಹೊಸಪೇಟೆ, ಕೊಪ್ಪಳದಿಂದ ಹುಲಿಗಿ ಗ್ರಾಮಕ್ಕೆ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಾಗಿತ್ತು.



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ