ಆ್ಯಪ್ನಗರ

ಟಿಬಿ ಡ್ಯಾಂ ಆಡಳಿತ ಮಂಡಳಿಯಲ್ಲಿ ಕನ್ನಡಿಗರೇತರಿಗೆ ಅವಕಾಶ ವಿರೋಧಿಸಿ ವಾಟಾಳ್ ಪ್ರತಿಭಟನೆ

ತುಂಗಭದ್ರಾ ಡ್ಯಾಂ ಆಡಳಿತ ಮಂಡಳಿ ನೇಮಕಾತಿಯಲ್ಲಿ ಕನ್ನಡಿಗರೇತರಿಗೆ ಅವಕಾಶ ನೀಡಬಾರದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Vijaya Karnataka Web 26 Aug 2019, 2:05 pm
ಕೊಪ್ಪಳ: ತುಂಗಭದ್ರಾ ಜಲಾಶಯ ಆಡಳಿತ ಮಂಡಳಿಯಲ್ಲಿ ಕನ್ನಡಿಗರೇತರಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ನಗರದ ಜಿಲ್ಲಾಡಳಿತ ಭವನ ಎದುರು ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ಪ್ರತಿಭಟಿಸಲಾಯಿತು.
Vijaya Karnataka Web vatal nagaraj


ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ರೈತರಿಗೆ ಎರಡು ಬೆಳೆಗೆ‌ ನೀರು ನೀಡಬೇಕು. ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಜಿಂದಾಲ್‌ ವ್ಯವಹಾರ ಸಮಗ್ರ ತನಿಖೆಯಾಗಬೇಕು. ಯಾವುದೇ ಕಾರಣಕ್ಕೂ 3666 ಎಕರೆ ಜಮೀನು ಕಾರ್ಖಾನೆಗೆ ವಿತರಿಸಬಾರದು. ಸರಕಾರಕ್ಕೆ ಬರಬೇಕಾದ ಬಾಕಿ ತೆರಿಗೆ ವಸೂಲಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ